25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಎಲ್ ಕೆ ಜಿ ಮತ್ತು ಯುಕೆಜಿ ಮಕ್ಕಳ ರೆಡ್ ಕಲರ್ ಸಂಭ್ರಮ

ಗುರುವಾಯನಕೆರೆ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುರುವಾಯನಕೆರೆ ಎಲ್ ಕೆ ಜಿ ಮತ್ತು ಯುಕೆಜಿ ಮಕ್ಕಳ ರೆಡ್ ಕಲರ್ ಸೆಲೆಬ್ರೇಶನ್ ನಡೆಯಿತು.

ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಹಾಜಿ ಅಬ್ದುಲ್ ಲತೀಫ್ ಅಧ್ಯಕ್ಷತೆ ವಹಿಸಿದರು. ಎಲ್ ಕೆ ಜಿ ಪೋಷಕರಾದ ಮಹಮ್ಮದ್ ಸಾದಿಕ್, ಜಾನ್ಸನ್ ಮೆಲ್ವಿನ್ ಪಿರೇರಾ , ಕಿರಣ್ ಭಟ್ ಹಾಗೂ ಎಸ್.ಡಿ.ಎಮ್.ಸಿ ಸದಸ್ಯರಾದ ಅಬ್ದುಲ್ ರಹಿಮಾನ್ ಮಹಮ್ಮದ್ ಹನೀಫ್, ಹಾಗೂ ಎಲ್ ಕೆ ಜಿ ಮತ್ತು ಯುಕೆಜಿಯ ಮಕ್ಕಳ ಪೋಷಕರು ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕಿ ಉಮಾ. ಎನ್ ಶಾಲಾ ಮಾಹಿತಿಯನ್ನು ನೀಡಿದರು. ಯುಕೆಜಿ ಶಿಕ್ಷಕಿ ಶೀಭಾ ಮೆರ್ಲಿನ್ ಸ್ವಾಗತಿಸಿದರು. ಆಯಾ ಶ್ವೇತ ಮಕ್ಕಳನ್ನು ತಯಾರುಗೊಳಿಸಿದರು. ಮಕ್ಕಳಿಂದ ಹಾಡು ಅಭಿನಯ ಗೀತೆಯನ್ನು ಮಾಡಲಾಯಿತು. ಮಕ್ಕಳ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಪೋಷಕರಿಗೆ ಸ್ಪರ್ಧೆ ನಡೆಸಿ ಬಹುಮಾನ ವಿತರಿಸಲಾಯಿತು. ರೆಡ್ ಕಲರ್ ವಸ್ತುಗಳನ್ನು ಪೋಷಕರು ತಂದು ನೀಡಿದರು. ಎಸ್ ಡಿ ಎಂ ಸಿ ಅಧ್ಯಕ್ಷರು ಒಂದು ತರಗತಿ ಕೊಠಡಿ ನಿರ್ಮಾಣ ಮಾಡಲು ಎಲ್ಲಾ ದಾನಿಗಳ ಸಹಕಾರವನ್ನು ಕೋರಿದರು. ಮುಖ್ಯ ಶಿಕ್ಷಕಿ ಉಮಾ. ‍ಎನ್ ಧನ್ಯವಾದವಿತ್ತರು.

Related posts

ಬೆಳ್ತಂಗಡಿ: ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಸುಧೀರ್ ಜೈನ್ ಬಳಂಜ

Suddi Udaya

ಧರ್ಮಸ್ಥಳ ಆನೆ ಮಾವುತ ನಾರಾಯಣ ಮತ್ತು ಯಮುನಾ ಕೊಲೆ ಪ್ರಕರಣ ಎಸ್‌ಐಟಿ ಗೆ ದೂರು ನೀಡಲು ಬಂದ ಆನೆ ಮಾವುತನ ಮಕ್ಕಳು

Suddi Udaya

ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾದ ನವಚೇತನ ಆಂ.ಮಾ. ಶಾಲೆಯ ವಿದ್ಯಾರ್ಥಿ ಶರ್ವಿನ್ ಮೊನಿಸ್ ರವರನ್ನು ಸನ್ಮಾನಿಸಿ ಅಭಿನಂದಿಸಿದ ಶಾಸಕ ಹರೀಶ್ ಪೂಂಜ

Suddi Udaya

ಪಡಂಗಡಿಯ ಮನೆಯೊಂದರಿಂದ ರೂ.25 ಸಾವಿರ ನಗದು ಹಾಗೂ ರೂ.9.50 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ವೇಣೂರು ಯುವವಾಹಿನಿ ಘಟಕದಿಂದ ಗುರುನಾರಾಯಣ ಜಯಂತಿಯ ಪ್ರಯುಕ್ತ ಗುರುನಮನ

Suddi Udaya

ಧರ್ಮಸ್ಥಳದಿಂದ ಬಳಂಜ ಶಾಲಾ ಕ್ರೀಡಾಂಗಣ ಅಭಿವೃದ್ದಿಗೆ ನೆರವು, ಮಂಜೂರಾತಿ ಪತ್ರ ಹಸ್ತಾಂತರ

Suddi Udaya
error: Content is protected !!