23.5 C
ಪುತ್ತೂರು, ಬೆಳ್ತಂಗಡಿ
June 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಂತರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆ: ಉಜಿರೆ ಎಸ್.ಡಿ.ಎಂ. ಕಾಲೇಜು ಪ್ರಥಮ

ಉಜಿರೆ: ಸುರತ್ಕಲ್ ಗೋವಿಂದ ದಾಸ ಕಾಲೇಜು ಹಾಗೂ ಸುರತ್ಕಲ್ ಅಗರಿ ಶ್ರೀನಿವಾಸ ಭಾಗವತರ ಸಂಸ್ಮರಣ ವೇದಿಕೆ ಆಯೋಜನೆ ಮಾಡಿರುವ “ಯಕ್ಷಯಾನ-2025” ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಂ ಕಾಲೇಜು ಯಕ್ಷಗಾನ ಕಲಾಕೇಂದ್ರದ ತಂಡ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ.

ಯಕ್ಷಗುರು ಅರುಣ್ ಕುಮಾರ್ ಧರ್ಮಸ್ಥಳ ನಿರ್ದೇಶನದ ಎಸ್.ಡಿ.ಎಂ. ತಂಡ “ಸುಧನ್ವ ಮೋಕ್ಷ” ಪ್ರಸಂಗವನ್ನು ಪ್ರಸ್ತುತ ಪಡಿಸಿ ಪ್ರಥಮ ಸ್ಥಾನ ಪಡೆದು, ನಾಲ್ಕು ವೈಯಕ್ತಿಕ ಬಹುಮಾನವನ್ನು ಪಡೆದುಕೊಂಡಿದೆ.

ಪುಂಡುವೇಷ ಪ್ರಥಮ ಸುಬ್ರಮಣ್ಯ ಭಟ್ (ಸುಧನ್ವ), ರಾಜವೇಷ ದ್ವಿತೀಯ ಸೌರವ್ ಶೆಟ್ಟಿ (ಅರ್ಜುನ), ಸ್ತ್ರೀ ವೇಷ ಪ್ರಥಮ ಸಾಕ್ಷಿ (ಪ್ರಭಾವತಿ), ಹಾಸ್ಯ ಪ್ರಥಮ ಅಮೋಘ ಶಂಕರ(ದೂತ) ವೈಯಕ್ತಿಕ ಬಹುಮಾನ. ಮಿಥುನ್ ರಾಜ್ (ಹೃಷಕೇತು), ವರ್ಷಿತ್(ಹಂಸಧ್ವಜ), ಹಾರ್ದಿಕ್ (ಅನುಸಾಲ್ವ), ಪ್ರಾವಿಣ್ಯ (ಕೃಷ್ಣ). ರಂಗಸಜ್ಜಿಕೆಯಲ್ಲಿ ಕು. ಮೋನಿಷಾ ಹಾಗೂ ಕು. ಮನಸ್ವಿ ಸಹಕರಿಸಿದರು.

ಹಿಮ್ಮೇಳದಲ್ಲಿ ಭಾಗವತರಾಗಿ ಗಿರೀಶ್ ರೈ ಕಕ್ಕೆಪದವು, ಚೆಂಡೆಯಲ್ಲಿ ಆನಂದ ಗುಡಿಗಾರ್ ಕೆರ್ವಾಶೆ, ಮದ್ದಳೆಯಲ್ಲಿ ಆದಿತ್ಯ ಹೊಳ್ಳ ಭಾಗವಹಿಸಿದರು.

Related posts

ಬಳಂಜ: ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶ್ರೀ ಗುರು ಪೂಜಾ

Suddi Udaya

ಬಂಗಾಡಿ ಸಿ ಎ ಬ್ಯಾಂಕಿನ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಸಿ.ಕೆ ಬಾಲಕೃಷ್ಣ ಗೌಡ ನಿಧನ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ಸಂವಿಧಾನ ದಿನಾಚರಣೆಯ ಪ್ರಯುಕ್ತ ರಸಪ್ರಶ್ನೆ ಕಾರ್ಯಕ್ರಮ

Suddi Udaya

ಸುರ್ಯಗುತ್ತು ಡಾ. ಸತೀಶ್ಚಂದ್ರ ಅವರ ಹಿರಿಯ ಸಹೋದರಿ ಬಂಟ್ವಾಳ ಇರ್ವತ್ತೂರು ಗುತ್ತು ಶ್ರೀಮತಿ ವಿಜಯಮ್ಮ ನಿಧನ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ನಿರ್ವಹಣಾ ತರಬೇತಿ

Suddi Udaya

ಪುದುವೆಟ್ಟು: ಅಕ್ರಮ ಮರಳು ಅಡ್ಡೆ‌ಗೆ ಧರ್ಮಸ್ಥಳ ಪೊಲೀಸ್ ದಾಳಿ

Suddi Udaya
error: Content is protected !!