September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಂತರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆ: ಉಜಿರೆ ಎಸ್.ಡಿ.ಎಂ. ಕಾಲೇಜು ಪ್ರಥಮ

ಉಜಿರೆ: ಸುರತ್ಕಲ್ ಗೋವಿಂದ ದಾಸ ಕಾಲೇಜು ಹಾಗೂ ಸುರತ್ಕಲ್ ಅಗರಿ ಶ್ರೀನಿವಾಸ ಭಾಗವತರ ಸಂಸ್ಮರಣ ವೇದಿಕೆ ಆಯೋಜನೆ ಮಾಡಿರುವ “ಯಕ್ಷಯಾನ-2025” ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಂ ಕಾಲೇಜು ಯಕ್ಷಗಾನ ಕಲಾಕೇಂದ್ರದ ತಂಡ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ.

ಯಕ್ಷಗುರು ಅರುಣ್ ಕುಮಾರ್ ಧರ್ಮಸ್ಥಳ ನಿರ್ದೇಶನದ ಎಸ್.ಡಿ.ಎಂ. ತಂಡ “ಸುಧನ್ವ ಮೋಕ್ಷ” ಪ್ರಸಂಗವನ್ನು ಪ್ರಸ್ತುತ ಪಡಿಸಿ ಪ್ರಥಮ ಸ್ಥಾನ ಪಡೆದು, ನಾಲ್ಕು ವೈಯಕ್ತಿಕ ಬಹುಮಾನವನ್ನು ಪಡೆದುಕೊಂಡಿದೆ.

ಪುಂಡುವೇಷ ಪ್ರಥಮ ಸುಬ್ರಮಣ್ಯ ಭಟ್ (ಸುಧನ್ವ), ರಾಜವೇಷ ದ್ವಿತೀಯ ಸೌರವ್ ಶೆಟ್ಟಿ (ಅರ್ಜುನ), ಸ್ತ್ರೀ ವೇಷ ಪ್ರಥಮ ಸಾಕ್ಷಿ (ಪ್ರಭಾವತಿ), ಹಾಸ್ಯ ಪ್ರಥಮ ಅಮೋಘ ಶಂಕರ(ದೂತ) ವೈಯಕ್ತಿಕ ಬಹುಮಾನ. ಮಿಥುನ್ ರಾಜ್ (ಹೃಷಕೇತು), ವರ್ಷಿತ್(ಹಂಸಧ್ವಜ), ಹಾರ್ದಿಕ್ (ಅನುಸಾಲ್ವ), ಪ್ರಾವಿಣ್ಯ (ಕೃಷ್ಣ). ರಂಗಸಜ್ಜಿಕೆಯಲ್ಲಿ ಕು. ಮೋನಿಷಾ ಹಾಗೂ ಕು. ಮನಸ್ವಿ ಸಹಕರಿಸಿದರು.

ಹಿಮ್ಮೇಳದಲ್ಲಿ ಭಾಗವತರಾಗಿ ಗಿರೀಶ್ ರೈ ಕಕ್ಕೆಪದವು, ಚೆಂಡೆಯಲ್ಲಿ ಆನಂದ ಗುಡಿಗಾರ್ ಕೆರ್ವಾಶೆ, ಮದ್ದಳೆಯಲ್ಲಿ ಆದಿತ್ಯ ಹೊಳ್ಳ ಭಾಗವಹಿಸಿದರು.

Related posts

ಹಳೆಕೋಟೆ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಹೆಚ್. ಪದ್ಮ ಗೌಡ, ಉಪಾಧ್ಯಕ್ಷರಾಗಿ ಕುಶಾಲಪ್ಪ ಗೌಡ ಪೂವಾಜೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ

Suddi Udaya

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ಶಾಲಾ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ಪ್ರಮಾಣ ವಚನ ಸ್ವೀಕಾರ

Suddi Udaya

ಸೌತಡ್ಕ ದೇವಾಲಯಗಳಲ್ಲಿ ಕಾನೂನು ಬಾಹಿರವಾಗಿ ಮತ್ತು ಭಕ್ತಾದಿಗಳ ನಂಬಿಕೆಗೆ ವಿರುದ್ಧವಾಗಿ ನಡೆಸಿರುವ ಅವ್ಯವಹಾರದ ಕುರಿತು ಪ್ರಶಾಂತ್ ಪೂವಾಜೆ ಯವರಿಂದ ಪತ್ರಿಕಾಗೋಷ್ಠಿ

Suddi Udaya

ಎ.6-11: ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ಜಾತ್ರೋತ್ಸವ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya
error: Content is protected !!