July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಂತರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆ: ಉಜಿರೆ ಎಸ್.ಡಿ.ಎಂ. ಕಾಲೇಜು ಪ್ರಥಮ

ಉಜಿರೆ: ಸುರತ್ಕಲ್ ಗೋವಿಂದ ದಾಸ ಕಾಲೇಜು ಹಾಗೂ ಸುರತ್ಕಲ್ ಅಗರಿ ಶ್ರೀನಿವಾಸ ಭಾಗವತರ ಸಂಸ್ಮರಣ ವೇದಿಕೆ ಆಯೋಜನೆ ಮಾಡಿರುವ “ಯಕ್ಷಯಾನ-2025” ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಂ ಕಾಲೇಜು ಯಕ್ಷಗಾನ ಕಲಾಕೇಂದ್ರದ ತಂಡ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ.

ಯಕ್ಷಗುರು ಅರುಣ್ ಕುಮಾರ್ ಧರ್ಮಸ್ಥಳ ನಿರ್ದೇಶನದ ಎಸ್.ಡಿ.ಎಂ. ತಂಡ “ಸುಧನ್ವ ಮೋಕ್ಷ” ಪ್ರಸಂಗವನ್ನು ಪ್ರಸ್ತುತ ಪಡಿಸಿ ಪ್ರಥಮ ಸ್ಥಾನ ಪಡೆದು, ನಾಲ್ಕು ವೈಯಕ್ತಿಕ ಬಹುಮಾನವನ್ನು ಪಡೆದುಕೊಂಡಿದೆ.

ಪುಂಡುವೇಷ ಪ್ರಥಮ ಸುಬ್ರಮಣ್ಯ ಭಟ್ (ಸುಧನ್ವ), ರಾಜವೇಷ ದ್ವಿತೀಯ ಸೌರವ್ ಶೆಟ್ಟಿ (ಅರ್ಜುನ), ಸ್ತ್ರೀ ವೇಷ ಪ್ರಥಮ ಸಾಕ್ಷಿ (ಪ್ರಭಾವತಿ), ಹಾಸ್ಯ ಪ್ರಥಮ ಅಮೋಘ ಶಂಕರ(ದೂತ) ವೈಯಕ್ತಿಕ ಬಹುಮಾನ. ಮಿಥುನ್ ರಾಜ್ (ಹೃಷಕೇತು), ವರ್ಷಿತ್(ಹಂಸಧ್ವಜ), ಹಾರ್ದಿಕ್ (ಅನುಸಾಲ್ವ), ಪ್ರಾವಿಣ್ಯ (ಕೃಷ್ಣ). ರಂಗಸಜ್ಜಿಕೆಯಲ್ಲಿ ಕು. ಮೋನಿಷಾ ಹಾಗೂ ಕು. ಮನಸ್ವಿ ಸಹಕರಿಸಿದರು.

ಹಿಮ್ಮೇಳದಲ್ಲಿ ಭಾಗವತರಾಗಿ ಗಿರೀಶ್ ರೈ ಕಕ್ಕೆಪದವು, ಚೆಂಡೆಯಲ್ಲಿ ಆನಂದ ಗುಡಿಗಾರ್ ಕೆರ್ವಾಶೆ, ಮದ್ದಳೆಯಲ್ಲಿ ಆದಿತ್ಯ ಹೊಳ್ಳ ಭಾಗವಹಿಸಿದರು.

Related posts

ಶಿಶಿಲ: ಉಮ್ಮಂತಿಮಾರ್ ಎಂಬಲ್ಲಿ ಕಿಂಡಿ ಅಣೆಕಟ್ಟು–ಒಟ್ಲದಲ್ಲಿ ಸೇತುವೆ ನಿರ್ಮಾಣಕ್ಕೆ ಶಾಸಕರಿಂದ ಶಿಲಾನ್ಯಾಸ

Suddi Udaya

ನಾವೂರು ಆಟೋ ಚಾಲಕ ಲಿಂಗಪ್ಪಗೌಡರ ಚಿಕಿತ್ಸಾ ನೆರವಿಗೆ ಮನವಿ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳಿಗೆ ಟ್ರ್ಯಾಕ್ ಸೂಟ್ ವಿತರಣೆ

Suddi Udaya

ದ.ಕ ಜಿಲ್ಲಾ ಮಟ್ಟದ ಕೆ.ಡಿ.ಪಿ ಸಮಿತಿ ಸದಸ್ಯರಾಗಿ ನ್ಯಾಯವಾದಿ ಸಂತೋಷ್ ಕುಮಾರ್ ಲಾಯಿಲ ನೇಮಕ

Suddi Udaya

ಕುಕ್ಕೇಡಿ ಗ್ರಾ.ಪಂ. ವತಿಯಿಂದ “ಆಧಾರ್ ಸೀಡಿಂಗ್” ಕ್ಯಾಂಪ್

Suddi Udaya

ಇತ್ತೀಚೆಗೆ ನಿಧನರಾದ ಮಾಜಿ ಶಾಸಕ ಕೆ. ವಸಂತ ಬಂಗೇರರ ಹಳೆಕೋಟೆಯ ಮನೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ; ಕುಟುಂಬಸ್ಥರಿಗೆ ಸಾಂತ್ವಾನ

Suddi Udaya
error: Content is protected !!