23.6 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ: ಶ್ರೀ ರಾಮ‌ ನಾಮ ಸಪ್ತಾಹದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಭಜನಾ ಸೇವೆ

ಬೆಳ್ತಂಗಡಿ: ದಕ್ಷಿಣದ ಅಯೋಧ್ಯೆಯೆಂದೇ ಪ್ರಸಿದ್ಧಿ ಪಡೆದಿರುವ ಶ್ರೀರಾಮ ಕ್ಷೇತ್ರ ಕನ್ಯಾಡಿಯಲ್ಲಿ ನಡೆಯುತ್ತಿರುವ 65 ನೇ ವರ್ಷದ ಶ್ರೀರಾಮ ನಾಮ ಸಪ್ತಾಹದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯ ಸಹಕಾರದೊಂದಿಗೆ ಭಾಗವಹಿಸಿ ಎರಡು ಗಂಟೆ ಭಜನಾ ಸೇವೆ ಸಲ್ಲಿಸಲಾಯಿತು. ಬಳಿಕ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆಯಲಾಯಿತು.

ಈ ಸಂದರ್ಭದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಬಳಂಜ, ಸಂಘದ ಮಾಜಿ ಕಾರ್ಯದರ್ಶಿ ಸದಾನಂದ ಪಿ ಸಾಲಿಯಾನ್, ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿ ಸಂಚಾಲಕ ಹರೀಶ್ ವೈ ಚಂದ್ರಮ,ಸೂಳಬೆಟ್ಟು ಭಜನಾ ತಂಡದ ಮುಖ್ಯಸ್ಥ ಪ್ರಮೋದ್ ಪೂಜಾರಿ, ಭಜನಾ ತರಬೇತುದಾರೆ ಮಾನ್ಯ ಹಾಗೂ ಭಜನಾ ವಿದ್ಯಾರ್ಥಿಗಳು ಭಾಗಿಯಾದರು.

Related posts

ಬೆಳ್ತಂಗಡಿ: ಕರಾವಳಿ ವಿಕಿಮೀಡಿಯನ್ಸ್ ಯೂಸರ್ ಗ್ರೂಪ್ ಮಂಗಳೂರು ,ವಾಣಿ ಪ.ಪೂ. ಕಾಲೇಜು ಬೆಳ್ತಂಗಡಿ ಸಿಐಎಸ್‌ಎ2ಕೆ ಬೆಂಗಳೂರು ಸಂಸ್ಥೆಗಳ ಸಹಯೋಗದಲ್ಲಿ ತುಳು ಭಾಷೆಯ ಮೊದಲ ಸಂಶೋಧನಾತ್ಮಕ ಸಾಕ್ಷ್ಯಚಿತ್ರ ಪುರ್ಸ ಕಟ್ಟುನ ಇನಿ-ಕೋಡೆ-ಎಲ್ಲೆ ಬಿಡುಗಡೆ

Suddi Udaya

ಬೆಳಾಲು : ಕಾನನದಲ್ಲಿ ಸಿಕ್ಕ ಮಗುವಿನ ಪೋಷಕರ ಪತ್ತೆಗೆ ಮನವಿ

Suddi Udaya

ಉಜಿರೆ: ಕುಂಟಿನಿ ಮದ್ರಸದ ವಿದ್ಯಾರ್ಥಿ ಶಾಝ್ಮಿ ಎಸ್.ಜೆ.ಎಮ್ ಉಜಿರೆ ರೇಂಜ್ ಮಟ್ಟದಲ್ಲಿ ಪ್ರಥಮ ಸ್ಥಾನ

Suddi Udaya

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಬೆಳ್ತಂಗಡಿ ಮುರ ನಿವಾಸಿ ಬೈಕ್ ಸವಾರ ಗಂಭೀರ, ಬೈಕ್ ನಲ್ಲಿದ್ದ ಪುಟ್ಟ ಮಗು ಸ್ಥಳದಲ್ಲೇ ಮೃತ್ಯು

Suddi Udaya

ಯಶೋಧ ಕೃಷ್ಣ ವೀಡಿಯೋ ಸ್ಪರ್ಧೆ: ಕಲ್ಮಂಜದ ರಿದ್ವಿ ಡಿ.ಆರ್ ಹಾಗೂ ಭಕ್ತಿ ಜಿ. ವಿನ್ನರ್

Suddi Udaya

ಬೆಳ್ತಂಗಡಿಯ ರಾಮದಾಸ್ ಜಿ ಬಾಳಿಗ ನಿಧನ

Suddi Udaya
error: Content is protected !!