September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪುದುವೆಟ್ಟು ಶ್ರೀ ಧ.ಮಂ.ಅ. ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

ಪುದುವೆಟ್ಟು: ಇಲ್ಲಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರದ ಉದ್ಘಾಟನೆ ಸಮಾರಂಭವು ಎ.1ರಂದು ನಡೆಯಿತು.


ಬೇಸಿಗೆ ಶಿಬಿರದ ಉದ್ಘಾಟನೆಯನ್ನು ಅರಸಿನಮಕ್ಕಿ ಕಾಲೇಜಿನ ಉಪನ್ಯಾಸಕಿ ಶ್ರೀಮತಿ ಸೌಮ್ಯಶ್ರೀ ದೀಪ ಪ್ರಜ್ವಲನೆ ಮಾಡುವುದರ ಮೂಲಕ ಬೇಸಿಗೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ ಇಂತಹ ಬೇಸಿಗೆ ಶಿಬಿರಗಳನ್ನು ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು, ಮುಂಬರುವ ದಿನಗಳಲ್ಲಿ ಬೇಸಿಗೆ ಶಿಬಿರದಿಂದ ಆಗುವ ಉಪಯೋಗಗಳನ್ನು ವಿದ್ಯಾರ್ಥಿ ಜೀವನದಲ್ಲಿ ಮೈಗೂಡಿಸಿಕೊಂಡೋಗಬೇಕು, ವಿದ್ಯಾರ್ಥಿಗಳು ಸಾಮಾಜಿಕ ಮೌಲ್ಯಗಳನ್ನು ಬೆಳೆಸಿಕೊಂಡು ಉತ್ತಮ ಪ್ರಜೆಗಳಾಗಬೇಕು ಎಂದು ಎಂದು ತಿಳಿಸಿದರು.


ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾದ ಅಭಿನಯ ಗೀತೆಯಲ್ಲಿ ರಾಜ್ಯ ಪ್ರಶಸ್ತಿ ಪಡೆದಂತಹ ಶ್ರೀಮತಿ ರಂಜಿನಿ ಮುಂಡಾಜೆ ಉಪಸ್ಥಿತರಿದ್ದರು.


ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪ ಗೌಡರವರು ವಹಿಸಿ ಮಾತನಾಡಿ ಉತ್ತಮ ನುರಿತ ಸಂಪನ್ಮೂಲ ವ್ಯಕ್ತಿಗಳು ಬೇಸಿಗೆ ಶಿಬಿರದಲ್ಲಿ ನಿಮಗೆ ತಿಳಿಸಿಕೊಟ್ಟಂತಹ ವಿಚಾರಗಳನ್ನು ತಿಳಿದುಕೊಳ್ಳಬೇಕು ಎಂದರು..
ಸಭಾ ಕಾರ್ಯಕ್ರಮದ ನಂತರ ಶ್ರೀಮತಿ ರಂಜಿನಿ ಅವರು ವಿದ್ಯಾರ್ಥಿಗಳಿಗೆ ಅಭಿನಯ ಗೀತೆ, ನಾಟಕ ಅಭಿನಯ, ಏಕಪಾತ್ರ ಅಭಿನಯ, ಜಾನಪದ ಗೀತೆಗಳನ್ನು ತಿಳಿಸಿಕೊಟ್ಟರು. ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ಬೇಸಿಗೆ ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು.
ವಿದ್ಯಾರ್ಥಿಗಳ ಪ್ರಾರ್ಥನಾ ಗೀತೆಯೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕಿ ಶ್ರೀಮತಿ ಶೀಲಾ ಎನ್ ಸ್ವಾಗತಿಸಿ, ಶ್ರೀಮತಿ ವೇದಾವತಿ ಧನ್ಯವಾದವಿತ್ತರು. ಕಾರ್ಯಕ್ರಮವನ್ನು ಶಾಲಾ ಶಿಕ್ಷಕಿ ಪುಷ್ಪಲತಾ ನಿರೂಪಿಸಿದರು. ಶಾಲೆ ಎಲ್ಲ ಶಿಕ್ಷಕರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಸಹಕರಿಸಿದ್ದರು.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಚಪ್ಪರ ಮುಹೂರ್ತ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ‘ಉದ್ಘೋಷ’ ಪತ್ರಿಕೆ ಬಿಡುಗಡೆ ಕಾರ್ಯಕ್ರಮ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗುರುವಾಯನಕೆರೆ ಶಕ್ತಿ ನಗರದ ಜಂಕ್ಷನ್ ನಲ್ಲಿ ನಾಮಫಲಕ ಅಳವಡಿಕೆ

Suddi Udaya

ಮಂಗಳೂರು ಮಾಂಡೋವಿ ಮೋಟಾರ್ಸ್ ಉದ್ಯೋಗಿ, ಬೆಳ್ತಂಗಡಿ ತಾಲೂಕಿನ ಮುಂಡೂರು ನಿವಾಸಿ ಬೈಕ್ ಅಪಘಾತದಲ್ಲಿ ಮೃತ್ಯು

Suddi Udaya

ಪುಂಜಾಲಕಟ್ಟೆ ಕಟ್ಟೆಮನೆ ಉದಯಕುಮಾರ್ ವಿಧಿವಶ

Suddi Udaya
error: Content is protected !!