23.6 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಂತರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆ: ಉಜಿರೆ ಎಸ್.ಡಿ.ಎಂ. ಕಾಲೇಜು ಪ್ರಥಮ

ಉಜಿರೆ: ಸುರತ್ಕಲ್ ಗೋವಿಂದ ದಾಸ ಕಾಲೇಜು ಹಾಗೂ ಸುರತ್ಕಲ್ ಅಗರಿ ಶ್ರೀನಿವಾಸ ಭಾಗವತರ ಸಂಸ್ಮರಣ ವೇದಿಕೆ ಆಯೋಜನೆ ಮಾಡಿರುವ “ಯಕ್ಷಯಾನ-2025” ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಂ ಕಾಲೇಜು ಯಕ್ಷಗಾನ ಕಲಾಕೇಂದ್ರದ ತಂಡ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ.

ಯಕ್ಷಗುರು ಅರುಣ್ ಕುಮಾರ್ ಧರ್ಮಸ್ಥಳ ನಿರ್ದೇಶನದ ಎಸ್.ಡಿ.ಎಂ. ತಂಡ “ಸುಧನ್ವ ಮೋಕ್ಷ” ಪ್ರಸಂಗವನ್ನು ಪ್ರಸ್ತುತ ಪಡಿಸಿ ಪ್ರಥಮ ಸ್ಥಾನ ಪಡೆದು, ನಾಲ್ಕು ವೈಯಕ್ತಿಕ ಬಹುಮಾನವನ್ನು ಪಡೆದುಕೊಂಡಿದೆ.

ಪುಂಡುವೇಷ ಪ್ರಥಮ ಸುಬ್ರಮಣ್ಯ ಭಟ್ (ಸುಧನ್ವ), ರಾಜವೇಷ ದ್ವಿತೀಯ ಸೌರವ್ ಶೆಟ್ಟಿ (ಅರ್ಜುನ), ಸ್ತ್ರೀ ವೇಷ ಪ್ರಥಮ ಸಾಕ್ಷಿ (ಪ್ರಭಾವತಿ), ಹಾಸ್ಯ ಪ್ರಥಮ ಅಮೋಘ ಶಂಕರ(ದೂತ) ವೈಯಕ್ತಿಕ ಬಹುಮಾನ. ಮಿಥುನ್ ರಾಜ್ (ಹೃಷಕೇತು), ವರ್ಷಿತ್(ಹಂಸಧ್ವಜ), ಹಾರ್ದಿಕ್ (ಅನುಸಾಲ್ವ), ಪ್ರಾವಿಣ್ಯ (ಕೃಷ್ಣ). ರಂಗಸಜ್ಜಿಕೆಯಲ್ಲಿ ಕು. ಮೋನಿಷಾ ಹಾಗೂ ಕು. ಮನಸ್ವಿ ಸಹಕರಿಸಿದರು.

ಹಿಮ್ಮೇಳದಲ್ಲಿ ಭಾಗವತರಾಗಿ ಗಿರೀಶ್ ರೈ ಕಕ್ಕೆಪದವು, ಚೆಂಡೆಯಲ್ಲಿ ಆನಂದ ಗುಡಿಗಾರ್ ಕೆರ್ವಾಶೆ, ಮದ್ದಳೆಯಲ್ಲಿ ಆದಿತ್ಯ ಹೊಳ್ಳ ಭಾಗವಹಿಸಿದರು.

Related posts

ಪದ್ಮುಂಜ: ಶ್ರೀ ವಿಷ್ಣು ಅಸೋಸಿಯೇಟ್ಸ್, ಗ್ರಾಮ ಒನ್, ಶ್ರೀ ವಿಷ್ಣು ಡಿಜಿಟಲ್ ಸೇವಾ ಕೇಂದ್ರದಲ್ಲಿ ಇ -ಸ್ಟ್ಯಾಂಪ್ (ಠಸ್ಸೆ) ಪೇಪರ್ ಸೇವೆಯ ಶುಭಾರoಭ ಹಾಗೂ ವಿಶೇಷ ಸಾಧಕರಿಗೆ ಸನ್ಮಾನ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಬೆಳ್ತಂಗಡಿ ತಾ| ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya

ಟೀಂ ಅಭಯಹಸ್ತ ವತಿಯಿಂದ ಸುಲ್ಕೇರಿಮೊಗ್ರು ಸರ್ಕಾರಿ ಶಾಲೆಗೆ ಆರ್ಥಿಕ ಸಹಕಾರದ ಹಸ್ತಾಂತರ-ಬಹುಮಾನ ವಿತರಣೆ

Suddi Udaya

ಇಂದಬೆಟ್ಟು: ಪಿಲಿಕಜೆ ನಿವಾಸಿ ಓಬಯ್ಯ ಗೌಡ ನಿಧನ

Suddi Udaya

ಪಡ್ಡಂದಡ್ಕದಲ್ಲಿ ಶ್ರೀ ಮಂಜುನಾಥೇಶ್ವರ ಕುಣಿತ ಭಜನಾ ಮಂಡಳಿಗೆ ಚಾಲನೆ

Suddi Udaya

ತಣ್ಣೀರುಪಂತ ಗ್ರಾ.ಪಂ. ಡಾ.ಶಿವರಾಮ ಕಾರಂತ್‌ ಪ್ರಶಸ್ತಿಗೆ ಆಯ್ಕೆ: ಫೆ.10 ರಂದು “ಹೊಳಪು-2024 ಗ್ರಾಮ ಸರ್ಕಾರದ ದಿಬ್ಬಣ” ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ

Suddi Udaya
error: Content is protected !!