23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಂತರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆ: ಉಜಿರೆ ಎಸ್.ಡಿ.ಎಂ. ಕಾಲೇಜು ಪ್ರಥಮ

ಉಜಿರೆ: ಸುರತ್ಕಲ್ ಗೋವಿಂದ ದಾಸ ಕಾಲೇಜು ಹಾಗೂ ಸುರತ್ಕಲ್ ಅಗರಿ ಶ್ರೀನಿವಾಸ ಭಾಗವತರ ಸಂಸ್ಮರಣ ವೇದಿಕೆ ಆಯೋಜನೆ ಮಾಡಿರುವ “ಯಕ್ಷಯಾನ-2025” ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಂ ಕಾಲೇಜು ಯಕ್ಷಗಾನ ಕಲಾಕೇಂದ್ರದ ತಂಡ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ.

ಯಕ್ಷಗುರು ಅರುಣ್ ಕುಮಾರ್ ಧರ್ಮಸ್ಥಳ ನಿರ್ದೇಶನದ ಎಸ್.ಡಿ.ಎಂ. ತಂಡ “ಸುಧನ್ವ ಮೋಕ್ಷ” ಪ್ರಸಂಗವನ್ನು ಪ್ರಸ್ತುತ ಪಡಿಸಿ ಪ್ರಥಮ ಸ್ಥಾನ ಪಡೆದು, ನಾಲ್ಕು ವೈಯಕ್ತಿಕ ಬಹುಮಾನವನ್ನು ಪಡೆದುಕೊಂಡಿದೆ.

ಪುಂಡುವೇಷ ಪ್ರಥಮ ಸುಬ್ರಮಣ್ಯ ಭಟ್ (ಸುಧನ್ವ), ರಾಜವೇಷ ದ್ವಿತೀಯ ಸೌರವ್ ಶೆಟ್ಟಿ (ಅರ್ಜುನ), ಸ್ತ್ರೀ ವೇಷ ಪ್ರಥಮ ಸಾಕ್ಷಿ (ಪ್ರಭಾವತಿ), ಹಾಸ್ಯ ಪ್ರಥಮ ಅಮೋಘ ಶಂಕರ(ದೂತ) ವೈಯಕ್ತಿಕ ಬಹುಮಾನ. ಮಿಥುನ್ ರಾಜ್ (ಹೃಷಕೇತು), ವರ್ಷಿತ್(ಹಂಸಧ್ವಜ), ಹಾರ್ದಿಕ್ (ಅನುಸಾಲ್ವ), ಪ್ರಾವಿಣ್ಯ (ಕೃಷ್ಣ). ರಂಗಸಜ್ಜಿಕೆಯಲ್ಲಿ ಕು. ಮೋನಿಷಾ ಹಾಗೂ ಕು. ಮನಸ್ವಿ ಸಹಕರಿಸಿದರು.

ಹಿಮ್ಮೇಳದಲ್ಲಿ ಭಾಗವತರಾಗಿ ಗಿರೀಶ್ ರೈ ಕಕ್ಕೆಪದವು, ಚೆಂಡೆಯಲ್ಲಿ ಆನಂದ ಗುಡಿಗಾರ್ ಕೆರ್ವಾಶೆ, ಮದ್ದಳೆಯಲ್ಲಿ ಆದಿತ್ಯ ಹೊಳ್ಳ ಭಾಗವಹಿಸಿದರು.

Related posts

ಮುಂಡಾಜೆ: ನಿಡಿಗಲ್ ಬಳಿ ರಸ್ತೆಯಲ್ಲೆ ಹೂತು ಹೋದ ವಾಹನಗಳು: ಗಂಟೆಗಟ್ಟಲೇ ಟ್ರಾಫಿಕ್ ಜಾಮ್: ವಾಹನ ಸವಾರರ ಪರದಾಟ

Suddi Udaya

ಕೈಕಂಬ- ಅತ್ಯಡ್ಕ- ಬಳ್ಳಿತೋಟ- ಬೋಜಾರ- ಮೂಡಾಯಿಬೆಟ್ಟು ಸಂಪರ್ಕಿಸುವ ಕೈಕಂಬ ಸೇತುವೆ ಶಿಥಿಲ: ಘನ ವಾಹನ ಸಂಚಾರ ನಿಷೇಧಿಸಿ ನಾವೂರು ಗ್ರಾ.ಪಂ. ನಿಂದ ಫಲಕ ಅಳವಡಿಕೆ

Suddi Udaya

ಜಾಗ ಮಾರಾಟದ ಅಗ್ರಿಮೆಂಟ್ ಮಾಡಿ ರೂ.45ಲಕ್ಷ ವಂಚನೆ; ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ‌ ದಾಖಲು

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ವನಮಹೋತ್ಸವ

Suddi Udaya

ಶಿಶಿಲ ದೇವಾಲಯ ವ್ಯವಸ್ಥಾಪನಾ ಸಮಿತಿ ರಚನೆಗೆ ಮೀನ ಮೇಷ..ಭಕ್ತರ ಆಕ್ರೋಶ

Suddi Udaya

ಚಿನ್ನಾಭರಣ ಪರೀಕ್ಷಕನ ವಜಾ ಪ್ರಕರಣ; ಪ್ರಕರಣದ ನಿಗೂಢತೆಯ ಬಯಲಿಗೆ ಆಗ್ರಹ; ಮಾ.18ರಂದು ಕೊಕ್ಕಡದಲ್ಲಿ ಪ್ರತಿಭಟನೆ

Suddi Udaya
error: Content is protected !!