37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಂತರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆ: ಉಜಿರೆ ಎಸ್.ಡಿ.ಎಂ. ಕಾಲೇಜು ಪ್ರಥಮ

ಉಜಿರೆ: ಸುರತ್ಕಲ್ ಗೋವಿಂದ ದಾಸ ಕಾಲೇಜು ಹಾಗೂ ಸುರತ್ಕಲ್ ಅಗರಿ ಶ್ರೀನಿವಾಸ ಭಾಗವತರ ಸಂಸ್ಮರಣ ವೇದಿಕೆ ಆಯೋಜನೆ ಮಾಡಿರುವ “ಯಕ್ಷಯಾನ-2025” ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಂ ಕಾಲೇಜು ಯಕ್ಷಗಾನ ಕಲಾಕೇಂದ್ರದ ತಂಡ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ.

ಯಕ್ಷಗುರು ಅರುಣ್ ಕುಮಾರ್ ಧರ್ಮಸ್ಥಳ ನಿರ್ದೇಶನದ ಎಸ್.ಡಿ.ಎಂ. ತಂಡ “ಸುಧನ್ವ ಮೋಕ್ಷ” ಪ್ರಸಂಗವನ್ನು ಪ್ರಸ್ತುತ ಪಡಿಸಿ ಪ್ರಥಮ ಸ್ಥಾನ ಪಡೆದು, ನಾಲ್ಕು ವೈಯಕ್ತಿಕ ಬಹುಮಾನವನ್ನು ಪಡೆದುಕೊಂಡಿದೆ.

ಪುಂಡುವೇಷ ಪ್ರಥಮ ಸುಬ್ರಮಣ್ಯ ಭಟ್ (ಸುಧನ್ವ), ರಾಜವೇಷ ದ್ವಿತೀಯ ಸೌರವ್ ಶೆಟ್ಟಿ (ಅರ್ಜುನ), ಸ್ತ್ರೀ ವೇಷ ಪ್ರಥಮ ಸಾಕ್ಷಿ (ಪ್ರಭಾವತಿ), ಹಾಸ್ಯ ಪ್ರಥಮ ಅಮೋಘ ಶಂಕರ(ದೂತ) ವೈಯಕ್ತಿಕ ಬಹುಮಾನ. ಮಿಥುನ್ ರಾಜ್ (ಹೃಷಕೇತು), ವರ್ಷಿತ್(ಹಂಸಧ್ವಜ), ಹಾರ್ದಿಕ್ (ಅನುಸಾಲ್ವ), ಪ್ರಾವಿಣ್ಯ (ಕೃಷ್ಣ). ರಂಗಸಜ್ಜಿಕೆಯಲ್ಲಿ ಕು. ಮೋನಿಷಾ ಹಾಗೂ ಕು. ಮನಸ್ವಿ ಸಹಕರಿಸಿದರು.

ಹಿಮ್ಮೇಳದಲ್ಲಿ ಭಾಗವತರಾಗಿ ಗಿರೀಶ್ ರೈ ಕಕ್ಕೆಪದವು, ಚೆಂಡೆಯಲ್ಲಿ ಆನಂದ ಗುಡಿಗಾರ್ ಕೆರ್ವಾಶೆ, ಮದ್ದಳೆಯಲ್ಲಿ ಆದಿತ್ಯ ಹೊಳ್ಳ ಭಾಗವಹಿಸಿದರು.

Related posts

ಮದ್ದಡ್ಕ ಪಲ್ಕೆ ಎಂಬಲ್ಲಿ ಮಾರಿ ಪೂಜೆ ಹಾಗೂ ಗುಳಿಗ ದೈವದ ಗಗ್ಗರ ಸೇವೆ

Suddi Udaya

ಮುಂಡಾಜೆ ಮತ್ತು ಕಲ್ಮಂಜದಲ್ಲಿ ಸಂಪರ್ಕ ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಅನುದಾನ ಪೂರೈಸಿದ ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯ ಸಿಮ್ ಕಾರ್ಡ್ ಪ್ರಕರಣದಲ್ಲಿ ಆರೋಪಿಗಳಿಗೆ ಜಾಮೀನು

Suddi Udaya

ಮುಂಡಾಜೆ ಪ್ರಾ.ಕೃ.ಪ.ಸ. ಸಂಘದ ನೂತನ ವಾಸ್ತವ್ಯದ ಮನೆ, ಸಭಾಭವನ ಉದ್ಘಾಟನೆ

Suddi Udaya

ಬಹುಮುಖ ಕ್ಷೇತ್ರದ ಸಾಧಕ ಬಿ. ಸೋಮಶೇಖರ ಶೆಟ್ಟಿ ಉಜಿರೆ

Suddi Udaya

ಪುತ್ತಿಲ ಹೇರಾಜೆ ಶ್ರೀ ವಿಘ್ನೇಶ್ವರ ಭಜನಾ ಮಂಡಳಿ ಯಿಂದ ಮದೂರು ಶ್ರೀ ಮದನಂತೇಶ್ವರ ದೇವಸ್ಥಾನದಲ್ಲಿ ಭಜನಾ ಸೇವೆ

Suddi Udaya
error: Content is protected !!