22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಪದ್ಮುಂಜ ಶಾಲೆಯಲ್ಲಿ ಪರೀಕ್ಷೆಗೆ ಅವಕಾಶ ನೀಡಿಲ್ಲ ಎಂಬ ಆರೋಪ: ಪರೀಕ್ಷೆಗೆ ಹಾಜರಾದ ಇಬ್ಬರೂ ವಿದ್ಯಾರ್ಥಿಗಳು

ಪದ್ಮುಂಜ: ಪದ್ಮುಂಜ ಸರಕಾರಿ ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಿಂದ ಇಬ್ಬರು ವಿದ್ಯಾರ್ಥಿನಿಯರಿಗೆ ಕಲಿಕೆಯಲ್ಲಿ ಹಿಂದುಳಿದಿದ್ದಾರೆಂಬ ಕಾರಣಕ್ಕೆ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಲಾಗಿದ್ದ ಪ್ರಸಂಗ ಬಗೆಹರಿದಿದ್ದು, ಇಬ್ಬರೂ ಎ.2 ರಂದು ಪರೀಕ್ಷೆ ಬರೆದಿದ್ದಾರೆ.

ಶೇ. ನೂರು ಫಲಿತಂಶದ ಕಾರಣಕ್ಕೆ ಕಲಿಕೆಯಲ್ಲಿ ಹಿಂದುಳಿದಿರುವ ತಮಗೆ ಅವಕಾಶ ನಿರಾಕರಿಸಲಾಗಿದೆ ಎಂದು ದೂರು ನೀಡಿರುವ ಪ್ರಕರಣದಲ್ಲಿ ಮಧ್ಯಪ್ರವೇಶಿಸಿದ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ, ಇಬ್ಬರಿಗೂ ಪ್ರವೇಶ ಪತ್ರ ನೀಡಿದ್ದರು. ಆ ಬಳಿಕವೂ ವಿದ್ಯಾರ್ಥಿನಿಯರು ಪರೀಕ್ಷೆ ಬರೆಯಲು ಹಿಂದೇಟು ಹಾಕಿದ್ದರು. ಅವರ ಮನವೊಲಿಸಿದ ಪರಿಣಾಮ ಕರಾಯ ಪ್ರೌಢ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ವಿಜ್ಞಾನ ಪರೀಕ್ಷೆಯನ್ನು ಬರೆದರು. ಉಳಿದ ಒಂದು ಪರೀಕ್ಷೆಯನ್ನು ಬರೆದರೆ, ಉಳಿದ ನಾಲ್ಕು ಪರೀಕ್ಷೆಗಳನ್ನು ಮುಂದಿನ 2 ಹಂತಗಳಲ್ಲಿ ಬರೆಯಬಹುದಾಗಿದೆ.

ಪ್ರಕರಣದ ಬಗ್ಗೆ ಬಂದ ದೂರನ್ನು ಆಧರಿಸಿ ತನಿಖೆ ನಡೆಸಲಾಗುತ್ತಿದೆ. ಇನ್ನೆರಡು ಹಂತಗಳಲ್ಲೂ ತೃಪ್ತಿಕರ ಅಂಕ ಬಾರದಿದ್ದರೆ ಮೂರನೇ ಹಂತದ ಪರೀಕ್ಷೆಯನ್ನು ಬರೆಯಲು ಅವಕಾಶವಿದೆ ಎಂದು ತಾರಕೇಶರಿ ತಿಳಿಸಿದ್ದಾರೆ.

Related posts

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಭೇಟಿ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ (ನೋಂ.) , ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ಪ್ರಥಮ ತಾಲೂಕು ಅಧಿವೇಶನ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶ ದಾನ ಮಾಡಿ ಮಾದರಿಯಾದ ಕಲ್ಮಂಜದ ಕು. ನಳಿನಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಬಾಯಿ ಕ್ಯಾನ್ಸರ್‌ಗೆ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಕೊಕ್ಕಡ ಆನೆ ದಾಳಿ ದುರಂತ ಅರಣ್ಯ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya
error: Content is protected !!