September 6, 2026
Uncategorized

ಪದ್ಮುಂಜ ಶಾಲೆಯಲ್ಲಿ ಪರೀಕ್ಷೆಗೆ ಅವಕಾಶ ನೀಡಿಲ್ಲ ಎಂಬ ಆರೋಪ: ಪರೀಕ್ಷೆಗೆ ಹಾಜರಾದ ಇಬ್ಬರೂ ವಿದ್ಯಾರ್ಥಿಗಳು

ಪದ್ಮುಂಜ: ಪದ್ಮುಂಜ ಸರಕಾರಿ ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಿಂದ ಇಬ್ಬರು ವಿದ್ಯಾರ್ಥಿನಿಯರಿಗೆ ಕಲಿಕೆಯಲ್ಲಿ ಹಿಂದುಳಿದಿದ್ದಾರೆಂಬ ಕಾರಣಕ್ಕೆ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಲಾಗಿದ್ದ ಪ್ರಸಂಗ ಬಗೆಹರಿದಿದ್ದು, ಇಬ್ಬರೂ ಎ.2 ರಂದು ಪರೀಕ್ಷೆ ಬರೆದಿದ್ದಾರೆ.

ಶೇ. ನೂರು ಫಲಿತಂಶದ ಕಾರಣಕ್ಕೆ ಕಲಿಕೆಯಲ್ಲಿ ಹಿಂದುಳಿದಿರುವ ತಮಗೆ ಅವಕಾಶ ನಿರಾಕರಿಸಲಾಗಿದೆ ಎಂದು ದೂರು ನೀಡಿರುವ ಪ್ರಕರಣದಲ್ಲಿ ಮಧ್ಯಪ್ರವೇಶಿಸಿದ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ, ಇಬ್ಬರಿಗೂ ಪ್ರವೇಶ ಪತ್ರ ನೀಡಿದ್ದರು. ಆ ಬಳಿಕವೂ ವಿದ್ಯಾರ್ಥಿನಿಯರು ಪರೀಕ್ಷೆ ಬರೆಯಲು ಹಿಂದೇಟು ಹಾಕಿದ್ದರು. ಅವರ ಮನವೊಲಿಸಿದ ಪರಿಣಾಮ ಕರಾಯ ಪ್ರೌಢ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ವಿಜ್ಞಾನ ಪರೀಕ್ಷೆಯನ್ನು ಬರೆದರು. ಉಳಿದ ಒಂದು ಪರೀಕ್ಷೆಯನ್ನು ಬರೆದರೆ, ಉಳಿದ ನಾಲ್ಕು ಪರೀಕ್ಷೆಗಳನ್ನು ಮುಂದಿನ 2 ಹಂತಗಳಲ್ಲಿ ಬರೆಯಬಹುದಾಗಿದೆ.

ಪ್ರಕರಣದ ಬಗ್ಗೆ ಬಂದ ದೂರನ್ನು ಆಧರಿಸಿ ತನಿಖೆ ನಡೆಸಲಾಗುತ್ತಿದೆ. ಇನ್ನೆರಡು ಹಂತಗಳಲ್ಲೂ ತೃಪ್ತಿಕರ ಅಂಕ ಬಾರದಿದ್ದರೆ ಮೂರನೇ ಹಂತದ ಪರೀಕ್ಷೆಯನ್ನು ಬರೆಯಲು ಅವಕಾಶವಿದೆ ಎಂದು ತಾರಕೇಶರಿ ತಿಳಿಸಿದ್ದಾರೆ.

Related posts

ನಾವೂರು: ಮೋರ್ತಾಜೆ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಉದ್ಘಾಟನೆ

Suddi Udaya

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ಆಷಾಡ (ಆಟಿ) ಮೆಗಾ ಡಿಸ್ಕೌಂಟ್ ಸೇಲ್: ಹೊಚ್ಚ ಹೊಸ ಸಂಗ್ರಹದೊಂದಿಗೆ 10% ರಿಂದ 50% ಪ್ರತಿ ಖರೀದಿಯ ಮೇಲೆ ಡಿಸ್ಕೌಂಟ್

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಡಂತ್ಯಾರು ಶಾಖೆಯಲ್ಲಿ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ತಪಾಸಣೆ ಚಿಕಿತ್ಸಾ ಶಿಬಿರ

Suddi Udaya

ಮಿತ್ತಬಾಗಿಲು ಚೌಕಿಬೆಟ್ಟು ನಿವಾಸಿ ತನಿಯಪ್ಪ ಪೂಜಾರಿ ನಿಧನ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ಚಾರ್ಮಾಡಿ ಗ್ರಾ.ಪಂ. ನಲ್ಲಿ ಬೃಹತ್ ಪ್ರತಿಭಟನೆ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya
error: Content is protected !!