31.2 C
ಪುತ್ತೂರು, ಬೆಳ್ತಂಗಡಿ
April 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿದ್ಯುತ್ ತಂತಿ ಮೇಲೆ ಬಿದ್ದ ಮರದ ಗೆಲ್ಲು: ಶಾಕ್ ತಗಲಿ ಕಾರ್ಮಿಕ ಚನನ ಗೌಡ ಮೃತ್ಯು

ಬೆಳ್ತಂಗಡಿ: ಇಲ್ಲಿಯ ಹುಣ್ಸೆಕಟ್ಟೆ ಸಮೀಪದ ಪುಂಡಿಕ್ಕು ಎಂಬಲ್ಲಿ ಮರದ ಗೆಲ್ಲು ಕಡಿಯುತ್ತಿರುವಾಗ ಆಕಸ್ಮಿಕವಾಗಿ ವಿದ್ಯುತ್ ತಂತಿ ಮೇಲೆ ಬಿದ್ದು ವಿದ್ಯುತ್ ಶಾಕ್ ತಗಲಿ ಗೆಲ್ಲು ಕಡಿಯುತ್ತಿದ್ದ ಕಾರ್ಮಿಕ ಮೃತಪಟ್ಟ ದಾರುಣ ಘಟನೆ ಇಂದು ಬೆಳಿಗ್ಗೆ ಪುಂಡಿಕ್ಕು ಎಂಬಲ್ಲಿ ನಡೆದಿದೆ.


ಬೆಳ್ತಂಗಡಿ ತಾಲೂಕಿನ ಕಸಬಾ ಗ್ರಾಮದ ಪುಂಡಿಕ್ಕು ಎಂಬಲ್ಲಿ ಚನನ ಗೌಡ (೬೯ವ) ಎಂಬವರು ಇಂದು ಬೆಳಿಗ್ಗೆ ಮೆಸ್ಕಾಂ ಇಲಾಖೆಯ ಅನುಮತಿ ಪಡೆಯದೇ, ಖಾಸಗಿ ಜಮೀನಿನಲ್ಲಿ ಇರುವ ಮರದ ಗೆಲ್ಲು ಕಡಿಯುವಾಗ, ಗೆಲ್ಲು ಆಕಸ್ಮಿಕವಾಗಿ, ಅಲ್ಲಿಯೇ ರಸ್ತೆಯಲ್ಲಿ ಹಾದು ಹೋಗಿರುವ ೧೧ಕೆವಿ ಕುವೆಟ್ಟು ಫೀಡರ್‌ನ ಹೆಚ್.ಟಿ ಲೈನ್‌ಗೆ ಬಿದ್ದು ಈ ಘಟನೆ ನಡೆದಿದೆ. ಗೆಲ್ಲು ತಂತಿ ಮೇಲೆ ಬಿದ್ದುದರಿಂದ ವಿದ್ಯುತ್ ಶಾಕ್ ತಗಲಿ, ಮರದಿಂದ ಕೆಳಗೆ ಬಿದ್ದಿದ್ದು, ಕೂಡಲೇ ಅವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಯಿತು. ಅಲ್ಲಿಯ ವೈದ್ಯರು ತಪಾಸಣೆ ನಡೆಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದು ಕೊಂಡು ಹೋಗಲು ತಿಳಿಸಿದ್ದು, ಅದರಂತೆ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಅವರು ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ.


ಈ ಬಗ್ಗೆ ಬೆಳ್ತಂಗಡಿ ಶಾಖಾಧಿಕಾರಿಯವರು ಬೆಳ್ತಂಗಡಿ ಪೋಲಿಸ್ ಠಾಣೆಯಲ್ಲಿ ದೂರನ್ನು ನೀಡಿದ್ದಾರೆ. ಮಾಹಿತಿಯನ್ನು ಇಲೆಕ್ಟ್ರಿಕಲ್ ಇನ್‌ಸ್ಪೆಕ್ಟರೇಟ್‌ಗೂ ನೀಡಲಾಗಿದೆ.

Related posts

ಬೆಳ್ತಂಗಡಿ:ಕಾಂಗ್ರೆಸ್ ನಿಂದ ಸಂವಿಧಾನ ,ಪ್ರಜಾಪ್ರಭುತ್ವ ,ಶಿಷ್ಟಾಚಾರ ವಿರೋಧಿ ನಡವಳಿಕೆ. ರಾಜ್ಯದ ಮಂತ್ರಿಗಳ ಸರ್ವಾಧಿಕಾರಿ ಧೋರಣೆ, ಹಿರಿಯಕ್ಕನ ಚಾಳಿ ಮನೆ ಮಂದಿಗೆಂಬಂತೆ ಇದು ತಳಮಟ್ಟಕ್ಕೂ ತಲುಪುತ್ತಿದೆ: ವಿಧಾನಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್ ಆರೋಪ

Suddi Udaya

ದಾರುಲ್ ಮುಸ್ತಫಾ ಮೋರಲ್ ಅಕಾಡೆಮಿ ಇದರ 8 ನೇ ವಾರ್ಷಿಕ ಹಾಗೂ 3 ನೇ ಸನದುದಾನ ಮಹಾ ಸಮ್ಮೇಳನ

Suddi Udaya

ಜಿಲ್ಲಾಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ: ಮಚ್ಚಿನ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಜೆಇಇ ಪರೀಕ್ಷೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Suddi Udaya

ಸುರ್ಯ ದೇವಸ್ಥಾನ: ದೇವದಾಸ್ ಕಾಪಿಕಾಡ್ ಹಾಗೂ ಶ್ರೀನಿವಾಸ ಹೆಬ್ಬಾರ್‌ರಿಗೆ ಸನ್ಮಾನ

Suddi Udaya

ಮಚ್ಚಿನ: ಶ್ರೀ ವಿದ್ಯಾಸಾಗರ ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!