22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಪದ್ಮುಂಜ ಶಾಲೆಯಲ್ಲಿ ಪರೀಕ್ಷೆಗೆ ಅವಕಾಶ ನೀಡಿಲ್ಲ ಎಂಬ ಆರೋಪ: ಪರೀಕ್ಷೆಗೆ ಹಾಜರಾದ ಇಬ್ಬರೂ ವಿದ್ಯಾರ್ಥಿಗಳು

ಪದ್ಮುಂಜ: ಪದ್ಮುಂಜ ಸರಕಾರಿ ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಿಂದ ಇಬ್ಬರು ವಿದ್ಯಾರ್ಥಿನಿಯರಿಗೆ ಕಲಿಕೆಯಲ್ಲಿ ಹಿಂದುಳಿದಿದ್ದಾರೆಂಬ ಕಾರಣಕ್ಕೆ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಲಾಗಿದ್ದ ಪ್ರಸಂಗ ಬಗೆಹರಿದಿದ್ದು, ಇಬ್ಬರೂ ಎ.2 ರಂದು ಪರೀಕ್ಷೆ ಬರೆದಿದ್ದಾರೆ.

ಶೇ. ನೂರು ಫಲಿತಂಶದ ಕಾರಣಕ್ಕೆ ಕಲಿಕೆಯಲ್ಲಿ ಹಿಂದುಳಿದಿರುವ ತಮಗೆ ಅವಕಾಶ ನಿರಾಕರಿಸಲಾಗಿದೆ ಎಂದು ದೂರು ನೀಡಿರುವ ಪ್ರಕರಣದಲ್ಲಿ ಮಧ್ಯಪ್ರವೇಶಿಸಿದ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ, ಇಬ್ಬರಿಗೂ ಪ್ರವೇಶ ಪತ್ರ ನೀಡಿದ್ದರು. ಆ ಬಳಿಕವೂ ವಿದ್ಯಾರ್ಥಿನಿಯರು ಪರೀಕ್ಷೆ ಬರೆಯಲು ಹಿಂದೇಟು ಹಾಕಿದ್ದರು. ಅವರ ಮನವೊಲಿಸಿದ ಪರಿಣಾಮ ಕರಾಯ ಪ್ರೌಢ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ವಿಜ್ಞಾನ ಪರೀಕ್ಷೆಯನ್ನು ಬರೆದರು. ಉಳಿದ ಒಂದು ಪರೀಕ್ಷೆಯನ್ನು ಬರೆದರೆ, ಉಳಿದ ನಾಲ್ಕು ಪರೀಕ್ಷೆಗಳನ್ನು ಮುಂದಿನ 2 ಹಂತಗಳಲ್ಲಿ ಬರೆಯಬಹುದಾಗಿದೆ.

ಪ್ರಕರಣದ ಬಗ್ಗೆ ಬಂದ ದೂರನ್ನು ಆಧರಿಸಿ ತನಿಖೆ ನಡೆಸಲಾಗುತ್ತಿದೆ. ಇನ್ನೆರಡು ಹಂತಗಳಲ್ಲೂ ತೃಪ್ತಿಕರ ಅಂಕ ಬಾರದಿದ್ದರೆ ಮೂರನೇ ಹಂತದ ಪರೀಕ್ಷೆಯನ್ನು ಬರೆಯಲು ಅವಕಾಶವಿದೆ ಎಂದು ತಾರಕೇಶರಿ ತಿಳಿಸಿದ್ದಾರೆ.

Related posts

ಚಿನ್ನಯ್ಯ ಪರ ವಕೀಲರುಗಳ ವಿರುದ್ಧ ಎಸ್.ಐ.ಟಿಗೆ ಧರ್ಮಸ್ಥಳ ಗ್ರಾಮಸ್ಥರಿಂದ ದೂರು:

Suddi Udaya

ಮೈರೋಳ್ತಡ್ಕ ಇದರ ಸಂಯುಕ್ತ ಆಶ್ರಯದಲ್ಲಿ 35ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ

Suddi Udaya

ಎಸ್ ಎಸ್ ಎಲ್ ಸಿ: ರಾಜ್ಯಕ್ಕೆ 4 ಸ್ಥಾನ. ಪಡೆದಿರುವ ಚಿರಾಗ್ ನಾಯಕ್ ನನ್ನು ಶಾಲಾ ಶಿಕ್ಷಣ ಇಲಾಖೆಯಿಂದಸನ್ಮಾನ

Suddi Udaya

ಮುಂಡಾಜೆ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ದೀಪಾವಳಿ ಗೋ ಪೂಜೆ ಪ್ರಯುಕ್ತ ಡಾ| ಡಿ. ವೀರೇಂದ್ರ ಹೆಗ್ಗಡೆ ದಂಪತಿಯಿಂದ ಗೋವುಗಳಿಗೆ ಉಪಾಹಾರ

Suddi Udaya

ಕಂಡವರ ಮನದಲ್ಲಿ ಶ್ರೀ ವಿಶ್ವೇಶತೀರ್ಥರು.ಟಿ ನಾರಾಯಣ ಭಟ್ ರಾಮ ಕುಂಜ ಇವರ ಕೃತಿ ಬಿಡುಗಡೆ.

Suddi Udaya
error: Content is protected !!