23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಪದ್ಮುಂಜ ಶಾಲೆಯಲ್ಲಿ ಪರೀಕ್ಷೆಗೆ ಅವಕಾಶ ನೀಡಿಲ್ಲ ಎಂಬ ಆರೋಪ: ಪರೀಕ್ಷೆಗೆ ಹಾಜರಾದ ಇಬ್ಬರೂ ವಿದ್ಯಾರ್ಥಿಗಳು

ಪದ್ಮುಂಜ: ಪದ್ಮುಂಜ ಸರಕಾರಿ ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಿಂದ ಇಬ್ಬರು ವಿದ್ಯಾರ್ಥಿನಿಯರಿಗೆ ಕಲಿಕೆಯಲ್ಲಿ ಹಿಂದುಳಿದಿದ್ದಾರೆಂಬ ಕಾರಣಕ್ಕೆ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಲಾಗಿದ್ದ ಪ್ರಸಂಗ ಬಗೆಹರಿದಿದ್ದು, ಇಬ್ಬರೂ ಎ.2 ರಂದು ಪರೀಕ್ಷೆ ಬರೆದಿದ್ದಾರೆ.

ಶೇ. ನೂರು ಫಲಿತಂಶದ ಕಾರಣಕ್ಕೆ ಕಲಿಕೆಯಲ್ಲಿ ಹಿಂದುಳಿದಿರುವ ತಮಗೆ ಅವಕಾಶ ನಿರಾಕರಿಸಲಾಗಿದೆ ಎಂದು ದೂರು ನೀಡಿರುವ ಪ್ರಕರಣದಲ್ಲಿ ಮಧ್ಯಪ್ರವೇಶಿಸಿದ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ, ಇಬ್ಬರಿಗೂ ಪ್ರವೇಶ ಪತ್ರ ನೀಡಿದ್ದರು. ಆ ಬಳಿಕವೂ ವಿದ್ಯಾರ್ಥಿನಿಯರು ಪರೀಕ್ಷೆ ಬರೆಯಲು ಹಿಂದೇಟು ಹಾಕಿದ್ದರು. ಅವರ ಮನವೊಲಿಸಿದ ಪರಿಣಾಮ ಕರಾಯ ಪ್ರೌಢ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ವಿಜ್ಞಾನ ಪರೀಕ್ಷೆಯನ್ನು ಬರೆದರು. ಉಳಿದ ಒಂದು ಪರೀಕ್ಷೆಯನ್ನು ಬರೆದರೆ, ಉಳಿದ ನಾಲ್ಕು ಪರೀಕ್ಷೆಗಳನ್ನು ಮುಂದಿನ 2 ಹಂತಗಳಲ್ಲಿ ಬರೆಯಬಹುದಾಗಿದೆ.

ಪ್ರಕರಣದ ಬಗ್ಗೆ ಬಂದ ದೂರನ್ನು ಆಧರಿಸಿ ತನಿಖೆ ನಡೆಸಲಾಗುತ್ತಿದೆ. ಇನ್ನೆರಡು ಹಂತಗಳಲ್ಲೂ ತೃಪ್ತಿಕರ ಅಂಕ ಬಾರದಿದ್ದರೆ ಮೂರನೇ ಹಂತದ ಪರೀಕ್ಷೆಯನ್ನು ಬರೆಯಲು ಅವಕಾಶವಿದೆ ಎಂದು ತಾರಕೇಶರಿ ತಿಳಿಸಿದ್ದಾರೆ.

Related posts

ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತರಾದ ಭರತ್‌ ಭೂಷಣ್‌ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ಶಾಸಕ ಹರೀಶ್ ಪೂಂಜ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ

Suddi Udaya

ಲಾಯಿಲ ಸೌಮ್ಯ ರವರ ಮನೆಯಲ್ಲಿ ನಾಗರ ಹಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್ ಲಾಯಿಲ

Suddi Udaya

ಇಳಂತಿಲ ಗ್ರಾಮ ಪಂಚಾಯತ್ ಮಾಜಿ ಸದಸ್ಯ ರೊನಾಲ್ಡ್ ಪಿಂಟೋ ನಿಧನ

Suddi Udaya

ಮಸೀದಿ ಬಳಿ ನಿಲ್ಲಿಸಿದ್ದ ಧರ್ಮಗುರುಗಳ ಬೈಕ್ ಕಳವು : ಕಳ್ಳತನ ಕೃತ್ಯ ಸಿಸಿ ಕ್ಯಾಮರದಲ್ಲಿ ಸೆರೆ

Suddi Udaya

ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಹೋಗುವವರ ಗಮನಕ್ಕೆ: ಜುಲೈ 31ರವರೆಗೆ ವಾಹನ ಸಂಚಾರ ನಿರ್ಬಂಧ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ಅಧ್ಯಕ್ಷರಾಗಿ ನಿತ್ಯಾನಂದ ಬಿ. ಮಾಲಾಡಿ

Suddi Udaya
error: Content is protected !!