25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಬೆಳ್ತಂಗಡಿ : ಮೂರುಗೋಳಿಯ ಪ್ರವೀಣ್.ಎಂ‌‌ ಅವರಿಗೆ ಮುಖ್ಯಮಂತ್ರಿ ಪದಕ ಪ್ರದಾನ:

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಂಭೀರ ಪ್ರಕರಣ ನಡೆದರೂ ವಿಶೇಷ ಪೊಲೀಸ್ ತಂಡದ ಜೊತೆಗೆ ಇದ್ದು ಹಿರಿಯ ಅಧಿಕಾರಿಗಳು ಹೇಳಿದಂತೆ ಕರ್ತವ್ಯ ನಿರ್ವಹಿಸಿ ಭೇದಿಸುವ ಪೊಲೀಸ್ ಹೆಡ್ ಕಾನ್ಟೇಬಲ್ ಮೂರುಗೋಳಿಯ ಪ್ರವೀಣ್.ಎಂ ಇವರಿಗೆ ಈ ಭಾರಿ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾಗಿದ್ದು, ಎಪ್ರಿಲ್ 2 ರಂದು ಕರ್ನಾಟಕ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಪದಕ ಪ್ರದಾನ ಮಾಡಿದರು.

ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ಮೂರುಗೋಳಿ ನಿವಾಸಿ ಅಣ್ಣು ದೇವಾಡಿಗ ಮತ್ತು ಬೇಬಿ ದೇವಾಡಿಗರ ಪ್ರಥಮ ಪುತ್ರ ಪ್ರವೀಣ್.ಎಂ ಅವರು 2002 ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡರು.

ಮೊದಲ ಕರ್ತವ್ಯವನ್ನು ಮಂಗಳೂರು ಬಂದರು ಪೊಲೀಸ್ ಠಾಣೆಯಲ್ಲಿ ಸಲ್ಲಿಸಿದ್ದು, ಬಳಿಕ ಬೆಳ್ತಂಗಡಿ ವೃತ್ತ ಕಚೇರಿ, ದಕ್ಷಿಣ ಕನ್ನಡ ಜಿಲ್ಲಾ ಅಪರಾಧ ಪತ್ತೆ ದಳ(DCIB) , ಬಂಟ್ವಾಳ ಡಿವೈಎಸ್ಪಿ ವಿಶೇಷ ಅಪರಾಧ ದಳ , ವೇಣೂರು ಪೊಲೀಸ್ ಠಾಣೆ, ಸದ್ಯ ಈಗ ದಕ್ಷಿಣ ಕನ್ನಡ ಸೈಬರ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

NIA ಅಧಿಕಾರಿಗಳ ಜೊತೆ ಕರ್ತವ್ಯ:

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಸಂದರ್ಭದಲ್ಲಿ NIA ತನಿಖಾ ದಳದೊಂದಿಗೆ 6 ತಿಂಗಳು ಕರ್ತವ್ಯ ನಿರ್ವಹಿಸುತ್ತಿದ್ದು. ಬಳಿಕ ಬಿಹಾರದಲ್ಲಿ ಮೋದಿ ಹತ್ಯೆ ಯತ್ನ ಪ್ರಕರಣದಲ್ಲಿ NIA ಜೊತೆ 3 ತಿಂಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ನಡುವೆ ಎರಡು ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ದಳ(NIA) ಜೊತೆಗೆ ಕರ್ತವ್ಯ ನಿರ್ವಹಿಸಿದ್ದಾರೆ.

ಹಲವು ಗಂಭೀರ ಪ್ರಕರಣದಲ್ಲಿ ದಕ್ಷತೆಯಿಂದ ಸೇವೆ
ಶರತ್ ಮಾಡಿವಾಳ ಹತ್ಯೆ ಪ್ರಕರಣ, ಫರಂಗಿಪೇಟೆ ಡಬಲ್ ಮರ್ಡರ್, ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ, 9 ದೇವಾಲಯ ಕಳವು ಪ್ರಕರಣ, ಬೆಳ್ತಂಗಡಿ ಬಂಗಾಡಿ ಬಸದಿ ಸೇರಿ 9 ದೇವಾಲಯ ಕಳ್ಳತನ ಪ್ರಕರಣ, ವಿಟ್ಲ ಕರ್ನಾಟಕ ಬ್ಯಾಂಕ್ ದರೋಡೆ, ಪುತ್ತೂರು ಗ್ರಾಮಾಂತರ ವ್ಯಾಪ್ತಿಯಲ್ಲಿ ನಡೆದ ದರೋಡೆ, ವಗ್ಗ ಮನೆ ದರೋಡೆ ಪ್ರಕರಣ, ವಿಟ್ಲ ಸಿಂಗಾರಿ ಬೀಡಿ ನಕಲಿ ಇಡಿ ಅಧಿಕಾರಿಗಳ ಸೋಗಿನಲ್ಲಿ ದರೋಡೆ, ಫರಂಗಿಪೇಟೆ ದಿಗಂತ್ ನಾಪತ್ತೆ ಪ್ರಕರಣ ಹಾಗೂ ಇನ್ನಿತರ ಗಂಭೀರ ಪ್ರಕರಣದಲ್ಲಿ ವಿಶೇಷ ತಂಡದ ಜೊತೆ ಪ್ರಮುಖ ಪಾತ್ರವನ್ನು ವಹಿಸಿ ಪ್ರಕರಣ ಭೇದಿಸಿ ಹಿರಿಯ ಅಧಿಕಾರಿಗಳ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ನಗದು ಪುರಸ್ಕಾರ& ಪ್ರಶಸ್ತಿ: ಪ್ರವೀಣ್ ಅಪರಾಧ ಪತ್ತೆ ಪ್ರಕರಣದ ಕರ್ತವ್ಯಕ್ಕೆ ನಗದು ಪುರಸ್ಕಾರ ಬಹುಮಾನ ಹಾಗೂ ಇತರ ಪ್ರಶಸ್ತಿ ಲಭಿಸಿದೆ.

Related posts

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಟೋಟ ಪ್ರಕರಣ: ಘಟನಾ ಸ್ಥಳಕ್ಕೆ ಡಿಐಜಿ ರವಿ.ಡಿ.ಚೆನ್ನಣ್ಣವರ್ ಭೇಟಿ: ಸ್ಥಳ ಪರಿಶೀಲನೆ

Suddi Udaya

ಉಜಿರೆ ಗ್ರಾಮ ಪಂಚಾಯತ್ ಗೆ ಲಕ್ಷ ದ್ವೀಪದ ಅಧಿಕಾರಿಗಳು ಭೇಟಿ

Suddi Udaya

ಮಚ್ಚಿನ : ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಹಾಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರ ಕಾರ್ಯಕರ್ತರ ಜೊತೆ ಸಂವಾದ ಕಾರ್ಯಕ್ರಮದ ವೀಕ್ಷಣೆ

Suddi Udaya

ಕೊಯ್ಯೂರು ಭಾರಿ ಮಳೆಗೆ ಹಟ್ಟಿ ಗೊಡೆ ಕುಸಿತ,ಉತ್ಸಾಹಿ ತಂಡದ ಸ್ವಯಂಸೇವಕರಿಂದ ಶ್ರಮದಾನ

Suddi Udaya

ಮುಂಡಾಜೆ: ತಾಲೂಕು ಮಟ್ಟದ ಕೇರಂ ಪಂದ್ಯಾಟ: ವಿಜೇತರಿಗೆ ಬಹುಮಾನ

Suddi Udaya
error: Content is protected !!