23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೀಯಾರು ಕೆಮ್ಮಟ್ಟೆಯಲ್ಲಿ ಎಸ್.ಕೆ.ಡಿ.ಆರ್.ಡಿ.ಪಿ ಟ್ರಸ್ಟ್ ವತಿಯಿಂದ ನೀರು ಉಳಿಸಿ ಭವಿಷ್ಯದ ನೀರು ಇಂದಿನ ಕಾಳಜಿ ಅಭಿಯಾನ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ) ಧರ್ಮಸ್ಥಳ ಯುನಿಸೆಫ್ ಹೈದರಾಬಾದ್ ಇದರ ಜಂಟಿ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ|| ಶ್ರೀ ಡಿ ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಂತೆ ನೀರು ಉಳಿಸಿ ಮಹಾ ಅಭಿಯಾನ ಹಮ್ಮಿಕೊಳ್ಳಲಾಯಿತು.

ಶುದ್ಧ ನೀರು ಯಾಕೆ ಬೇಕು,ನೀರಿನ ನಿರ್ವಹಣೆಯ ಅವಶ್ಯಕತೆ ಏಕೆದೆ, ಪ್ರಸ್ತುತ ರಾಜ್ಯದಲ್ಲಿ ಮತ್ತು ಜಿಲ್ಲೆಯಲ್ಲಿ ನೀರಿನ ಪರಿಸ್ಥಿತಿ ಹೇಗಿದೆ,ನೀರಿನ ಸಂರಕ್ಷಣೆಯಲ್ಲಿ ನಮ್ಮ ಹೊಣೆಗಾರಿಕೆ ಏನು,ನಾವು ಸಣ್ಣ ಮಟ್ಟದಲ್ಲಿ ಹೇಗೆ ನೀರನ್ನು ಉಳಿತಾಯ ಮಾಡಬಹುದು ಎನ್ನುವ ವಿಚಾರವಾಗಿ ವಲಯ ಮೇಲ್ವಿಚಾರಕರಾದ ಚಿತ್ತರಂಜನ್ ರವರು ಸವಿಸ್ತಾರವಾಗಿ ಮಾಹಿತಿಯನ್ನು ನೀಡಿದರು.

ಮನೆಯಲ್ಲಿ ಇಂಗು ಗುಂಡಿಯನ್ನು ನಿರ್ಮಾಣ ಮಾಡಿ ಮನೆಯ ಸುತ್ತಮುತ್ತಲಿನ ನೀರನ್ನು ಭೂಮಿಗೆ ಇಂಗಿಸುವಂತೆ ಮಾಡುವುದು.
ಸಮುದಾಯದ ಭಾಗಗಳಲ್ಲಿ ಇಂಗು ಗುಂಡಿ ನಿರ್ಮಿಸಿ, ಆ ನೀರನ್ನು ಭೂಮಿಗೆ ಇಂಗಿಸುವಂತೆ ಮಾಡುವುದು.
ಟ್ಯಾಪ್ ತೋರದಂತೆ ನೋಡಿಕೊಳ್ಳುವುದು, ಮನೆಯಲ್ಲಿ ಹಲ್ಲುಜ್ಜುವಾಗ,ಸೇವಿಂಗ್ ಮಾಡುವಾಗ, ಸ್ನಾನ ಮಾಡುತ್ತಿರುವಾಗ ಟ್ಯಾಪಿನಲ್ಲಿ ನಿರಂತರವಾಗಿ ನೀರು ಸೋರದಂತೆ ನೋಡುತ್ತಿರುವುದು, ಗಿಡಗಳಿಗೆ ಯಥೇಚ್ಛವಾಗಿ ನೀರು ನೀಡದೆ ಇರುವುದು ಈ ರೀತಿಯಾಗಿ ನಾವು ನೀರನ್ನು ಉಳಿಕೆ ಮಾಡಬಹುದು ಎಂದು ತಿಳಿಸಲಾಯಿತು.

ಈ ಸಂದರ್ಭ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಅಪೂರ್ವ ಜೈನ್ ರವರು ಪರಿಸರದ ಸಂರಕ್ಷಣೆಯೊಂದಿಗೆ ನೀರು ಉಳಿಸುವುದು ಇಂದಿನ ದಿನದಲ್ಲಿ ಅನಿವಾರ್ಯವಾಗಿದೆ ಎಂದು ತಿಳಿಸಿದರು, ಪದಾಧಿಕಾರಿಯಾದ ನಿತಿನ್ ,ನವೀನ್ ಸೇವಾಪ್ರತಿನಿಧಿ ಚೈತ್ರ, ನವ್ಯ ಹಾಗೂ ಒಕ್ಕೂಟದ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು..

Related posts

ಧರ್ಮಸ್ಥಳದಲ್ಲಿ ಬಿವೋಕ್‌ ವಿದ್ಯಾರ್ಥಿಗಳಿಗೆ ಸ್ಟಾಪ್‌ ಮೋಶನ್‌ ಅನಿಮೇಶನ್‌ ಕಾರ್ಯಾಗಾರ

Suddi Udaya

ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತ: ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

Suddi Udaya

ಡಾ. ಡಿ ವಿರೇಂದ್ರ ಹೆಗ್ಗಡೆ ರವರ ಹುಟ್ಟು ಹಬ್ಬದ ಪ್ರಯುಕ್ತ ಪುಂಜಾಲಕಟ್ಟೆ ಮತ್ತು ಮಂಜಲ್ಪಲಿಕ್ಕೆ ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಕಿಂಡರ್‌ಗಾರ್ಟನ್ ವಿಭಾಗದಲ್ಲಿ “ಜಂಗಲ್ ಜಂಬೂರಿ” ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಎಂ.ಆರ್ ಡ್ರೆಸ್ಸಸ್ ನಲ್ಲಿ ಕ್ಲಿಯರೆನ್ಸ್ ಸೇಲ್: ಪ್ರತಿ ಖರೀದಿಯ ಮೇಲೆ ಶೇ. 30 ರಷ್ಟು ರಿಯಾಯಿತಿ

Suddi Udaya

ಬೆಳ್ತಂಗಡಿ : ಮಕ್ಕಳ ಹಕ್ಕುಗಳ ಮಾಸೋತ್ಸವ ಉದ್ಘಾಟನೆ

Suddi Udaya
error: Content is protected !!