22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿದ್ಯುತ್ ತಂತಿ ಮೇಲೆ ಬಿದ್ದ ಮರದ ಗೆಲ್ಲು: ಶಾಕ್ ತಗಲಿ ಕಾರ್ಮಿಕ ಚನನ ಗೌಡ ಮೃತ್ಯು

ಬೆಳ್ತಂಗಡಿ: ಇಲ್ಲಿಯ ಹುಣ್ಸೆಕಟ್ಟೆ ಸಮೀಪದ ಪುಂಡಿಕ್ಕು ಎಂಬಲ್ಲಿ ಮರದ ಗೆಲ್ಲು ಕಡಿಯುತ್ತಿರುವಾಗ ಆಕಸ್ಮಿಕವಾಗಿ ವಿದ್ಯುತ್ ತಂತಿ ಮೇಲೆ ಬಿದ್ದು ವಿದ್ಯುತ್ ಶಾಕ್ ತಗಲಿ ಗೆಲ್ಲು ಕಡಿಯುತ್ತಿದ್ದ ಕಾರ್ಮಿಕ ಮೃತಪಟ್ಟ ದಾರುಣ ಘಟನೆ ಇಂದು ಬೆಳಿಗ್ಗೆ ಪುಂಡಿಕ್ಕು ಎಂಬಲ್ಲಿ ನಡೆದಿದೆ.


ಬೆಳ್ತಂಗಡಿ ತಾಲೂಕಿನ ಕಸಬಾ ಗ್ರಾಮದ ಪುಂಡಿಕ್ಕು ಎಂಬಲ್ಲಿ ಚನನ ಗೌಡ (೬೯ವ) ಎಂಬವರು ಇಂದು ಬೆಳಿಗ್ಗೆ ಮೆಸ್ಕಾಂ ಇಲಾಖೆಯ ಅನುಮತಿ ಪಡೆಯದೇ, ಖಾಸಗಿ ಜಮೀನಿನಲ್ಲಿ ಇರುವ ಮರದ ಗೆಲ್ಲು ಕಡಿಯುವಾಗ, ಗೆಲ್ಲು ಆಕಸ್ಮಿಕವಾಗಿ, ಅಲ್ಲಿಯೇ ರಸ್ತೆಯಲ್ಲಿ ಹಾದು ಹೋಗಿರುವ ೧೧ಕೆವಿ ಕುವೆಟ್ಟು ಫೀಡರ್‌ನ ಹೆಚ್.ಟಿ ಲೈನ್‌ಗೆ ಬಿದ್ದು ಈ ಘಟನೆ ನಡೆದಿದೆ. ಗೆಲ್ಲು ತಂತಿ ಮೇಲೆ ಬಿದ್ದುದರಿಂದ ವಿದ್ಯುತ್ ಶಾಕ್ ತಗಲಿ, ಮರದಿಂದ ಕೆಳಗೆ ಬಿದ್ದಿದ್ದು, ಕೂಡಲೇ ಅವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಯಿತು. ಅಲ್ಲಿಯ ವೈದ್ಯರು ತಪಾಸಣೆ ನಡೆಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದು ಕೊಂಡು ಹೋಗಲು ತಿಳಿಸಿದ್ದು, ಅದರಂತೆ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಅವರು ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ.


ಈ ಬಗ್ಗೆ ಬೆಳ್ತಂಗಡಿ ಶಾಖಾಧಿಕಾರಿಯವರು ಬೆಳ್ತಂಗಡಿ ಪೋಲಿಸ್ ಠಾಣೆಯಲ್ಲಿ ದೂರನ್ನು ನೀಡಿದ್ದಾರೆ. ಮಾಹಿತಿಯನ್ನು ಇಲೆಕ್ಟ್ರಿಕಲ್ ಇನ್‌ಸ್ಪೆಕ್ಟರೇಟ್‌ಗೂ ನೀಡಲಾಗಿದೆ.

Related posts

ಧರ್ಮಸ್ಥಳ ಬೂತ್ ಸಂಖ್ಯೆ 163ರ ಅಧ್ಯಕ್ಷ ಉಮಾನಾಥ್ ರವರ ಮನೆಗೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya

ಮಚ್ಚಿನ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ

Suddi Udaya

ಅಜಿತ್ ಪೂಜಾರಿ ಕನ್ಯಾಡಿ ರಚಿಸಿರುವ ‘ಬಂದೆನು ಶಾಲೆಗೆ ಓಡೋಡಿ’ ಹಾಡು ಬಿಡುಗಡೆ

Suddi Udaya

ಜನಮಂಗಳ ಕಾರ್ಯಕ್ರಮದಡಿ ನೆರಿಯದ ಶಾಂತಪ್ಪ ರವರಿಗೆ ಊರುಗೋಲು ವಿತರಣೆ

Suddi Udaya

ನಾಳ ದೇವಸ್ಥಾನದಲ್ಲಿ ಪತ್ತನಾಜೆ ಪ್ರಯುಕ್ತ ವಿಶೇಷ ಪೂಜೆ, ರಾತ್ರಿ ಭಜನೆ, ರಂಗಪೂಜೆ

Suddi Udaya

ನಾವೂರು ಪರಾರಿ ನಿವಾಸಿ ತುಂಗಮ್ಮ ನಿಧನ

Suddi Udaya
error: Content is protected !!