24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿದ್ಯುತ್ ತಂತಿ ಮೇಲೆ ಬಿದ್ದ ಮರದ ಗೆಲ್ಲು: ಶಾಕ್ ತಗಲಿ ಕಾರ್ಮಿಕ ಚನನ ಗೌಡ ಮೃತ್ಯು

ಬೆಳ್ತಂಗಡಿ: ಇಲ್ಲಿಯ ಹುಣ್ಸೆಕಟ್ಟೆ ಸಮೀಪದ ಪುಂಡಿಕ್ಕು ಎಂಬಲ್ಲಿ ಮರದ ಗೆಲ್ಲು ಕಡಿಯುತ್ತಿರುವಾಗ ಆಕಸ್ಮಿಕವಾಗಿ ವಿದ್ಯುತ್ ತಂತಿ ಮೇಲೆ ಬಿದ್ದು ವಿದ್ಯುತ್ ಶಾಕ್ ತಗಲಿ ಗೆಲ್ಲು ಕಡಿಯುತ್ತಿದ್ದ ಕಾರ್ಮಿಕ ಮೃತಪಟ್ಟ ದಾರುಣ ಘಟನೆ ಇಂದು ಬೆಳಿಗ್ಗೆ ಪುಂಡಿಕ್ಕು ಎಂಬಲ್ಲಿ ನಡೆದಿದೆ.


ಬೆಳ್ತಂಗಡಿ ತಾಲೂಕಿನ ಕಸಬಾ ಗ್ರಾಮದ ಪುಂಡಿಕ್ಕು ಎಂಬಲ್ಲಿ ಚನನ ಗೌಡ (೬೯ವ) ಎಂಬವರು ಇಂದು ಬೆಳಿಗ್ಗೆ ಮೆಸ್ಕಾಂ ಇಲಾಖೆಯ ಅನುಮತಿ ಪಡೆಯದೇ, ಖಾಸಗಿ ಜಮೀನಿನಲ್ಲಿ ಇರುವ ಮರದ ಗೆಲ್ಲು ಕಡಿಯುವಾಗ, ಗೆಲ್ಲು ಆಕಸ್ಮಿಕವಾಗಿ, ಅಲ್ಲಿಯೇ ರಸ್ತೆಯಲ್ಲಿ ಹಾದು ಹೋಗಿರುವ ೧೧ಕೆವಿ ಕುವೆಟ್ಟು ಫೀಡರ್‌ನ ಹೆಚ್.ಟಿ ಲೈನ್‌ಗೆ ಬಿದ್ದು ಈ ಘಟನೆ ನಡೆದಿದೆ. ಗೆಲ್ಲು ತಂತಿ ಮೇಲೆ ಬಿದ್ದುದರಿಂದ ವಿದ್ಯುತ್ ಶಾಕ್ ತಗಲಿ, ಮರದಿಂದ ಕೆಳಗೆ ಬಿದ್ದಿದ್ದು, ಕೂಡಲೇ ಅವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಯಿತು. ಅಲ್ಲಿಯ ವೈದ್ಯರು ತಪಾಸಣೆ ನಡೆಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದು ಕೊಂಡು ಹೋಗಲು ತಿಳಿಸಿದ್ದು, ಅದರಂತೆ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಅವರು ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ.


ಈ ಬಗ್ಗೆ ಬೆಳ್ತಂಗಡಿ ಶಾಖಾಧಿಕಾರಿಯವರು ಬೆಳ್ತಂಗಡಿ ಪೋಲಿಸ್ ಠಾಣೆಯಲ್ಲಿ ದೂರನ್ನು ನೀಡಿದ್ದಾರೆ. ಮಾಹಿತಿಯನ್ನು ಇಲೆಕ್ಟ್ರಿಕಲ್ ಇನ್‌ಸ್ಪೆಕ್ಟರೇಟ್‌ಗೂ ನೀಡಲಾಗಿದೆ.

Related posts

ಬೆಳ್ತಂಗಡಿ: ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಸಿಇಟಿ ನೀಟ್ ತರಗತಿಯ ಉದ್ಘಾಟನೆ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ನಡ: ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ‘ಸೇವಾ ಭಾರತಿ’ ವತಿಯಿಂದ ಪುಸ್ತಕಗಳ ವಿತರಣೆ

Suddi Udaya

ಕುಪ್ಪೆಟ್ಟಿ ಸ.ಉ.ಪ್ರಾ.ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ

Suddi Udaya

ಜೆಸಿಐ ವಲಯ 15ರ ಮಧ್ಯಂತರ ಸಮ್ಮೇಳನ ಜೆಸಿಐ ಬೆಳ್ತಂಗಡಿಗೆ ಅತ್ಯುತ್ತಮ ಘಟಕ ವಿನ್ನರ್ ಪ್ರಶಸ್ತಿ, ಘಟಕಾಧ್ಯಕ್ಷೆ ಆಶಾಲತಾ ಪ್ರಶಾಂತ್ ರವರಿಗೆ ಅತ್ಯುತ್ತಮ ಅಧ್ಯಕ್ಷೆ ರನ್ನರ್ ಪ್ರಶಸ್ತಿ

Suddi Udaya

ಕಣಿಯೂರು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಾಗ ಪ್ರತಿಷ್ಠೆ

Suddi Udaya
error: Content is protected !!