23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ ಸಮಾರೋಪ ಸಮಾರಂಭ

ಧರ್ಮಸ್ಥಳ. ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳದಲ್ಲಿ ಇಂದು ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ನಡೆಯಿತು.


ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ರಾಮ್ ಚಿತ್ರಕಲಾ ಶಿಕ್ಷಕರು,ಶ್ರೀ ಧ. ಮಂ ಸೆಕೆಂಡರಿ ಶಾಲೆ ಉಜಿರೆ ಇವರು ಆಗಮಿಸಿ ಮಕ್ಕಳಿಗೆ ಡ್ರಾಯಿಂಗ್, ವಿವಿಧ ರೀತಿಯ ಪೇಪರ್ ಕ್ರಾಪ್ಟ್ ಗಳನ್ನು ಮಾಡುವ ರೀತಿಯನ್ನು ತಿಳಿಸಿಕೊಟ್ಟರು.
ಕಾರ್ಯಕ್ರಮವು ಶಾಲಾ ಮುಖ್ಯೋಪಾಧ್ಯಾಯರಾದ ಕಮಲ್ ತೇಜು ರಜಪೂತ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು . ಮುಖ್ಯ ಅತಿಥಿಗಳನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು.


ಮಕ್ಕಳು ಬೇಸಿಗೆ ಶಿಬಿರದ ಬಗ್ಗೆ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.
ಶಿಕ್ಷಕರಾದ ಶ್ರೀ ಶೇಖರ್ ಗೌಡ ಕಾರ್ಯಕ್ರಮ ನಿರ್ವಹಿಸಿದರು. ಶೋಭಾ ಸ್ವಾಗತಿಸಿ ಜೋಸೆಫ್ ವಂದಿಸಿದರು.

Related posts

ನಾಲ್ಕೂರು: ಬಾಲಸ್ನೇಹಿ ಅಂಗನವಾಡಿ ಕೇಂದ್ರದಲ್ಲಿ ಶಿಕ್ಷಕರ ದಿನಾಚರಣೆ: ಪುಟಾಣಿ ಮಕ್ಕಳು ಪ್ರೀತಿಯ ಗುರುಗಳಿಗೆ ಪೆನ್ನು,ಹೂ ನೀಡಿ ಗೌರವ ಸಲ್ಲಿಕೆ

Suddi Udaya

ಪೆರಾಡಿಯಲ್ಲಿ ಪುರುಷ ಕಟ್ಟುವ ಆಚರಣೆಯ ನೆಪದಲ್ಲಿ ಇಸ್ಲಾಂ ಧರ್ಮಕ್ಕೆ ಅವಹೇಳನ ಆರೋಪ : 17 ಮಂದಿ ಮೇಲೆ ಪ್ರಕರಣ ದಾಖಲು

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ

Suddi Udaya

ಕಸ್ತೂರಿ ರಂಗನ್ ವರದಿಯನ್ನು ಯಥಾವತ್ತಾಗಿ ಜಾರಿ ಮಾಡುತ್ತೇವೆ ಎಂಬ ರಾಜ್ಯ ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿಕೆ: ಅರಣ್ಯವಾಸಿಗಳ ಬದುಕನ್ನು ನಾಶಮಾಡುವ ಹುನ್ನಾರವಾಗಿದ್ದು , ತಕ್ಷಣ ರಾಜ್ಯ ಸರ್ಕಾರ ತನ್ನ ಜನವಿರೋಧಿ ನೀತಿಯನ್ನು ಬದಲಾವಣೆ ಮಾಡದಿದ್ದರೆ ಬೀದಿಗಿಳಿದು ಜನರ ಬದುಕುವ ಹಕ್ಕನ್ನು ಉಳಿಸಿಕೊಳ್ಳಬೇಕಾಗುತ್ತದೆ: ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಎಚ್ಚರಿಕೆ

Suddi Udaya

ಬಂದಾರು ಸ.ಹಿ. ಪ್ರಾ. ಶಾಲೆಯಲ್ಲಿ ಬೂತ್ ಸಂಖ್ಯೆ 217ರಲ್ಲಿ ತ್ರಾಂತಿಕ ದೋಷದಿಂದ ಮತದಾನ ಸ್ಥಗಿತ

Suddi Udaya

ಬೆಳ್ತಂಗಡಿ: ರತ್ನತ್ರಯತೀರ್ಥಕ್ಷೇತ್ರದಲ್ಲಿ ಪ್ರೊ. ನಾ’ವುಜಿರೆ ಸ್ಮರಣಾರ್ಥ ಶಾಸ್ತ್ರದಾನ ಕೃತಿ ಲೋಕಾರ್ಪಣೆ

Suddi Udaya
error: Content is protected !!