September 6, 2026
Uncategorized

ಪದ್ಮುಂಜ ಶಾಲೆಯಲ್ಲಿ ಪರೀಕ್ಷೆಗೆ ಅವಕಾಶ ನೀಡಿಲ್ಲ ಎಂಬ ಆರೋಪ: ಪರೀಕ್ಷೆಗೆ ಹಾಜರಾದ ಇಬ್ಬರೂ ವಿದ್ಯಾರ್ಥಿಗಳು

ಪದ್ಮುಂಜ: ಪದ್ಮುಂಜ ಸರಕಾರಿ ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಿಂದ ಇಬ್ಬರು ವಿದ್ಯಾರ್ಥಿನಿಯರಿಗೆ ಕಲಿಕೆಯಲ್ಲಿ ಹಿಂದುಳಿದಿದ್ದಾರೆಂಬ ಕಾರಣಕ್ಕೆ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಲಾಗಿದ್ದ ಪ್ರಸಂಗ ಬಗೆಹರಿದಿದ್ದು, ಇಬ್ಬರೂ ಎ.2 ರಂದು ಪರೀಕ್ಷೆ ಬರೆದಿದ್ದಾರೆ.

ಶೇ. ನೂರು ಫಲಿತಂಶದ ಕಾರಣಕ್ಕೆ ಕಲಿಕೆಯಲ್ಲಿ ಹಿಂದುಳಿದಿರುವ ತಮಗೆ ಅವಕಾಶ ನಿರಾಕರಿಸಲಾಗಿದೆ ಎಂದು ದೂರು ನೀಡಿರುವ ಪ್ರಕರಣದಲ್ಲಿ ಮಧ್ಯಪ್ರವೇಶಿಸಿದ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ, ಇಬ್ಬರಿಗೂ ಪ್ರವೇಶ ಪತ್ರ ನೀಡಿದ್ದರು. ಆ ಬಳಿಕವೂ ವಿದ್ಯಾರ್ಥಿನಿಯರು ಪರೀಕ್ಷೆ ಬರೆಯಲು ಹಿಂದೇಟು ಹಾಕಿದ್ದರು. ಅವರ ಮನವೊಲಿಸಿದ ಪರಿಣಾಮ ಕರಾಯ ಪ್ರೌಢ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ವಿಜ್ಞಾನ ಪರೀಕ್ಷೆಯನ್ನು ಬರೆದರು. ಉಳಿದ ಒಂದು ಪರೀಕ್ಷೆಯನ್ನು ಬರೆದರೆ, ಉಳಿದ ನಾಲ್ಕು ಪರೀಕ್ಷೆಗಳನ್ನು ಮುಂದಿನ 2 ಹಂತಗಳಲ್ಲಿ ಬರೆಯಬಹುದಾಗಿದೆ.

ಪ್ರಕರಣದ ಬಗ್ಗೆ ಬಂದ ದೂರನ್ನು ಆಧರಿಸಿ ತನಿಖೆ ನಡೆಸಲಾಗುತ್ತಿದೆ. ಇನ್ನೆರಡು ಹಂತಗಳಲ್ಲೂ ತೃಪ್ತಿಕರ ಅಂಕ ಬಾರದಿದ್ದರೆ ಮೂರನೇ ಹಂತದ ಪರೀಕ್ಷೆಯನ್ನು ಬರೆಯಲು ಅವಕಾಶವಿದೆ ಎಂದು ತಾರಕೇಶರಿ ತಿಳಿಸಿದ್ದಾರೆ.

Related posts

ಸೆ.6;ಕಲಾಸಾಧನ ವತಿಯಿಂದ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಸಂಭ್ರಮ ‘ ರಾಗ ಸುಧಾ’

Suddi Udaya

ಜಮೀಯತುಲ್ ಫಲಾಹ್ ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ವಿಧ್ಯಾರ್ಥಿ ವೇತನ ಹಾಗೂ ಪ್ರತಿಭಾ ಪುರಸ್ಕಾರ

Suddi Udaya

ಕುವೆಟ್ಟು ಗ್ರಾ.ಪಂ. ಅಧ್ಯಕ್ಷರಿಂದ ವಿವಾದಿತ ಹೇಳಿಕೆ : ಎಸ್.ಡಿ.ಟಿ.ಯು ವತಿಯಿಂದ ದೂರು ದಾಖಲು

Suddi Udaya

ಅಭ್ಯಾಸ ಪದವಿಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯೋತ್ಸವ-ದೇಶಸೇವೆಯಲ್ಲಿ ವಿದ್ಯಾರ್ಥಿಗಳ ಜವಾಬ್ದಾರಿ ಮಹತ್ವದ್ದು: ನಿವೃತ್ತ ನೌಕಾದಳ ಸೇನಾನಿ ಶ್ರೀಕೃಷ್ಣ ಭಟ್

Suddi Udaya

ಅಂಡಿಂಜೆ ಗ್ರಾ.ಪಂ. ವತಿಯಿಂದ ಪ.ಜಾತಿ, ಪ. ಪಂಗಡದ ಕುಟುಂಬಗಳಿಗೆ ಹಾಗೂ ವಿಶೇಷ ಚೇತನರಿಗೆ ತಲಾ ಎರಡರಂತೆ ಚಯರ್ ವಿತರಣೆ

Suddi Udaya

ವೇಣೂರು: ಬಜಿರೆಯಲ್ಲಿ ಮನೆಯ ಬಾವಿ ತಡೆಗೋಡೆ ಕುಸಿತ

Suddi Udaya
error: Content is protected !!