23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಪದ್ಮುಂಜ ಶಾಲೆಯಲ್ಲಿ ಪರೀಕ್ಷೆಗೆ ಅವಕಾಶ ನೀಡಿಲ್ಲ ಎಂಬ ಆರೋಪ: ಪರೀಕ್ಷೆಗೆ ಹಾಜರಾದ ಇಬ್ಬರೂ ವಿದ್ಯಾರ್ಥಿಗಳು

ಪದ್ಮುಂಜ: ಪದ್ಮುಂಜ ಸರಕಾರಿ ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಿಂದ ಇಬ್ಬರು ವಿದ್ಯಾರ್ಥಿನಿಯರಿಗೆ ಕಲಿಕೆಯಲ್ಲಿ ಹಿಂದುಳಿದಿದ್ದಾರೆಂಬ ಕಾರಣಕ್ಕೆ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಲಾಗಿದ್ದ ಪ್ರಸಂಗ ಬಗೆಹರಿದಿದ್ದು, ಇಬ್ಬರೂ ಎ.2 ರಂದು ಪರೀಕ್ಷೆ ಬರೆದಿದ್ದಾರೆ.

ಶೇ. ನೂರು ಫಲಿತಂಶದ ಕಾರಣಕ್ಕೆ ಕಲಿಕೆಯಲ್ಲಿ ಹಿಂದುಳಿದಿರುವ ತಮಗೆ ಅವಕಾಶ ನಿರಾಕರಿಸಲಾಗಿದೆ ಎಂದು ದೂರು ನೀಡಿರುವ ಪ್ರಕರಣದಲ್ಲಿ ಮಧ್ಯಪ್ರವೇಶಿಸಿದ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ, ಇಬ್ಬರಿಗೂ ಪ್ರವೇಶ ಪತ್ರ ನೀಡಿದ್ದರು. ಆ ಬಳಿಕವೂ ವಿದ್ಯಾರ್ಥಿನಿಯರು ಪರೀಕ್ಷೆ ಬರೆಯಲು ಹಿಂದೇಟು ಹಾಕಿದ್ದರು. ಅವರ ಮನವೊಲಿಸಿದ ಪರಿಣಾಮ ಕರಾಯ ಪ್ರೌಢ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ವಿಜ್ಞಾನ ಪರೀಕ್ಷೆಯನ್ನು ಬರೆದರು. ಉಳಿದ ಒಂದು ಪರೀಕ್ಷೆಯನ್ನು ಬರೆದರೆ, ಉಳಿದ ನಾಲ್ಕು ಪರೀಕ್ಷೆಗಳನ್ನು ಮುಂದಿನ 2 ಹಂತಗಳಲ್ಲಿ ಬರೆಯಬಹುದಾಗಿದೆ.

ಪ್ರಕರಣದ ಬಗ್ಗೆ ಬಂದ ದೂರನ್ನು ಆಧರಿಸಿ ತನಿಖೆ ನಡೆಸಲಾಗುತ್ತಿದೆ. ಇನ್ನೆರಡು ಹಂತಗಳಲ್ಲೂ ತೃಪ್ತಿಕರ ಅಂಕ ಬಾರದಿದ್ದರೆ ಮೂರನೇ ಹಂತದ ಪರೀಕ್ಷೆಯನ್ನು ಬರೆಯಲು ಅವಕಾಶವಿದೆ ಎಂದು ತಾರಕೇಶರಿ ತಿಳಿಸಿದ್ದಾರೆ.

Related posts

ತಣ್ಣೀರುಪಂತ ಗ್ರಾಮ ಪಂಚಾಯತ್ ನಲ್ಲಿ ಶಾಂತಿ ಸಭೆ

Suddi Udaya

ಸರಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಮಾವೇಶದ ಬಗ್ಗೆ ಪಾರಂಕಿ, ಕುಕ್ಕಳ ಗ್ರಾಮದ ಕಾರ್ಯಕರ್ತರ ಸಭೆ

Suddi Udaya

ಸಂತ ತೆರೇಸಾ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯ ರಕ್ಷಕ ಶಿಕ್ಷಕ ಮಹಾಸಭೆ

Suddi Udaya

ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ವೀಡಿಯೊ ಹಾಗೂ ಮಾಹಿತಿಪತ್ರ ಅನಾವರಣ

Suddi Udaya

ಸುಲ್ಕೇರಿಮೊಗ್ರು: ವಿಶಿಷ್ಟ ಸಾಧಕ ರಘು ಮಾಳಿಗೆ ನಿಧನ

Suddi Udaya

ಕನ್ಯಾಡಿ ಸರ್ಕಾರಿ ಶಾಲೆಯ ಪ್ರಾರಂಭೋತ್ಸವ

Suddi Udaya
error: Content is protected !!