22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೀಯಾರು ಕೆಮ್ಮಟ್ಟೆಯಲ್ಲಿ ಎಸ್.ಕೆ.ಡಿ.ಆರ್.ಡಿ.ಪಿ ಟ್ರಸ್ಟ್ ವತಿಯಿಂದ ನೀರು ಉಳಿಸಿ ಭವಿಷ್ಯದ ನೀರು ಇಂದಿನ ಕಾಳಜಿ ಅಭಿಯಾನ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ) ಧರ್ಮಸ್ಥಳ ಯುನಿಸೆಫ್ ಹೈದರಾಬಾದ್ ಇದರ ಜಂಟಿ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ|| ಶ್ರೀ ಡಿ ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಂತೆ ನೀರು ಉಳಿಸಿ ಮಹಾ ಅಭಿಯಾನ ಹಮ್ಮಿಕೊಳ್ಳಲಾಯಿತು.

ಶುದ್ಧ ನೀರು ಯಾಕೆ ಬೇಕು,ನೀರಿನ ನಿರ್ವಹಣೆಯ ಅವಶ್ಯಕತೆ ಏಕೆದೆ, ಪ್ರಸ್ತುತ ರಾಜ್ಯದಲ್ಲಿ ಮತ್ತು ಜಿಲ್ಲೆಯಲ್ಲಿ ನೀರಿನ ಪರಿಸ್ಥಿತಿ ಹೇಗಿದೆ,ನೀರಿನ ಸಂರಕ್ಷಣೆಯಲ್ಲಿ ನಮ್ಮ ಹೊಣೆಗಾರಿಕೆ ಏನು,ನಾವು ಸಣ್ಣ ಮಟ್ಟದಲ್ಲಿ ಹೇಗೆ ನೀರನ್ನು ಉಳಿತಾಯ ಮಾಡಬಹುದು ಎನ್ನುವ ವಿಚಾರವಾಗಿ ವಲಯ ಮೇಲ್ವಿಚಾರಕರಾದ ಚಿತ್ತರಂಜನ್ ರವರು ಸವಿಸ್ತಾರವಾಗಿ ಮಾಹಿತಿಯನ್ನು ನೀಡಿದರು.

ಮನೆಯಲ್ಲಿ ಇಂಗು ಗುಂಡಿಯನ್ನು ನಿರ್ಮಾಣ ಮಾಡಿ ಮನೆಯ ಸುತ್ತಮುತ್ತಲಿನ ನೀರನ್ನು ಭೂಮಿಗೆ ಇಂಗಿಸುವಂತೆ ಮಾಡುವುದು.
ಸಮುದಾಯದ ಭಾಗಗಳಲ್ಲಿ ಇಂಗು ಗುಂಡಿ ನಿರ್ಮಿಸಿ, ಆ ನೀರನ್ನು ಭೂಮಿಗೆ ಇಂಗಿಸುವಂತೆ ಮಾಡುವುದು.
ಟ್ಯಾಪ್ ತೋರದಂತೆ ನೋಡಿಕೊಳ್ಳುವುದು, ಮನೆಯಲ್ಲಿ ಹಲ್ಲುಜ್ಜುವಾಗ,ಸೇವಿಂಗ್ ಮಾಡುವಾಗ, ಸ್ನಾನ ಮಾಡುತ್ತಿರುವಾಗ ಟ್ಯಾಪಿನಲ್ಲಿ ನಿರಂತರವಾಗಿ ನೀರು ಸೋರದಂತೆ ನೋಡುತ್ತಿರುವುದು, ಗಿಡಗಳಿಗೆ ಯಥೇಚ್ಛವಾಗಿ ನೀರು ನೀಡದೆ ಇರುವುದು ಈ ರೀತಿಯಾಗಿ ನಾವು ನೀರನ್ನು ಉಳಿಕೆ ಮಾಡಬಹುದು ಎಂದು ತಿಳಿಸಲಾಯಿತು.

ಈ ಸಂದರ್ಭ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಅಪೂರ್ವ ಜೈನ್ ರವರು ಪರಿಸರದ ಸಂರಕ್ಷಣೆಯೊಂದಿಗೆ ನೀರು ಉಳಿಸುವುದು ಇಂದಿನ ದಿನದಲ್ಲಿ ಅನಿವಾರ್ಯವಾಗಿದೆ ಎಂದು ತಿಳಿಸಿದರು, ಪದಾಧಿಕಾರಿಯಾದ ನಿತಿನ್ ,ನವೀನ್ ಸೇವಾಪ್ರತಿನಿಧಿ ಚೈತ್ರ, ನವ್ಯ ಹಾಗೂ ಒಕ್ಕೂಟದ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು..

Related posts

ಇಸ್ಲಾಮಿಕ್ ಎಜುಕೇಶನ್ ಬೋರ್ಡ್ ಪರೀಕ್ಷೆ: ಉಜಿರೆಯ ಗಾಂಧಿನಗರದ ವಿದ್ಯಾರ್ಥಿನಿಯ ಸಾಧನೆ

Suddi Udaya

ಉಜಿರೆ: ಜೀನಿಯಸ್ ಕೋಚಿಂಗ್ ಸೆಂಟರ್ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಚಾರ್ಮಾಡಿ: ಸಂಚರಿಸುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ ಸಂಪೂರ್ಣ ಸುಟ್ಟು ಹೋದ ಮೆಕ್ಕೆಜೋಳದ ಲಾರಿ

Suddi Udaya

ಎಕ್ಸೆಲ್ ನ ವಿದ್ಯಾರ್ಥಿ ಸಂಜನಾ ಜೆ ಇ ಇ ಅಡ್ವಾನ್ಸ್ ನಲ್ಲಿ ರಾಷ್ಟ್ರಕ್ಕೆ 731 ರಾಂಕ್

Suddi Udaya

ಎ.30: ಲಾಯಿಲ 48ನೇ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಇಂದಬೆಟ್ಟು ಎಂಜೆಎಂ ಮಸೀದಿಯಲ್ಲಿ ಈದ್ ಆಚರಣೆ

Suddi Udaya
error: Content is protected !!