36.9 C
ಪುತ್ತೂರು, ಬೆಳ್ತಂಗಡಿ
April 10, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿದ್ಯುತ್ ತಂತಿ ಮೇಲೆ ಬಿದ್ದ ಮರದ ಗೆಲ್ಲು: ಶಾಕ್ ತಗಲಿ ಕಾರ್ಮಿಕ ಚನನ ಗೌಡ ಮೃತ್ಯು

ಬೆಳ್ತಂಗಡಿ: ಇಲ್ಲಿಯ ಹುಣ್ಸೆಕಟ್ಟೆ ಸಮೀಪದ ಪುಂಡಿಕ್ಕು ಎಂಬಲ್ಲಿ ಮರದ ಗೆಲ್ಲು ಕಡಿಯುತ್ತಿರುವಾಗ ಆಕಸ್ಮಿಕವಾಗಿ ವಿದ್ಯುತ್ ತಂತಿ ಮೇಲೆ ಬಿದ್ದು ವಿದ್ಯುತ್ ಶಾಕ್ ತಗಲಿ ಗೆಲ್ಲು ಕಡಿಯುತ್ತಿದ್ದ ಕಾರ್ಮಿಕ ಮೃತಪಟ್ಟ ದಾರುಣ ಘಟನೆ ಇಂದು ಬೆಳಿಗ್ಗೆ ಪುಂಡಿಕ್ಕು ಎಂಬಲ್ಲಿ ನಡೆದಿದೆ.


ಬೆಳ್ತಂಗಡಿ ತಾಲೂಕಿನ ಕಸಬಾ ಗ್ರಾಮದ ಪುಂಡಿಕ್ಕು ಎಂಬಲ್ಲಿ ಚನನ ಗೌಡ (೬೯ವ) ಎಂಬವರು ಇಂದು ಬೆಳಿಗ್ಗೆ ಮೆಸ್ಕಾಂ ಇಲಾಖೆಯ ಅನುಮತಿ ಪಡೆಯದೇ, ಖಾಸಗಿ ಜಮೀನಿನಲ್ಲಿ ಇರುವ ಮರದ ಗೆಲ್ಲು ಕಡಿಯುವಾಗ, ಗೆಲ್ಲು ಆಕಸ್ಮಿಕವಾಗಿ, ಅಲ್ಲಿಯೇ ರಸ್ತೆಯಲ್ಲಿ ಹಾದು ಹೋಗಿರುವ ೧೧ಕೆವಿ ಕುವೆಟ್ಟು ಫೀಡರ್‌ನ ಹೆಚ್.ಟಿ ಲೈನ್‌ಗೆ ಬಿದ್ದು ಈ ಘಟನೆ ನಡೆದಿದೆ. ಗೆಲ್ಲು ತಂತಿ ಮೇಲೆ ಬಿದ್ದುದರಿಂದ ವಿದ್ಯುತ್ ಶಾಕ್ ತಗಲಿ, ಮರದಿಂದ ಕೆಳಗೆ ಬಿದ್ದಿದ್ದು, ಕೂಡಲೇ ಅವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಯಿತು. ಅಲ್ಲಿಯ ವೈದ್ಯರು ತಪಾಸಣೆ ನಡೆಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದು ಕೊಂಡು ಹೋಗಲು ತಿಳಿಸಿದ್ದು, ಅದರಂತೆ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಅವರು ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ.


ಈ ಬಗ್ಗೆ ಬೆಳ್ತಂಗಡಿ ಶಾಖಾಧಿಕಾರಿಯವರು ಬೆಳ್ತಂಗಡಿ ಪೋಲಿಸ್ ಠಾಣೆಯಲ್ಲಿ ದೂರನ್ನು ನೀಡಿದ್ದಾರೆ. ಮಾಹಿತಿಯನ್ನು ಇಲೆಕ್ಟ್ರಿಕಲ್ ಇನ್‌ಸ್ಪೆಕ್ಟರೇಟ್‌ಗೂ ನೀಡಲಾಗಿದೆ.

Related posts

ಮುಂಡಾಜೆ ಕೀರ್ತನಾ ಕಲಾ ತಂಡದ ವತಿಯಿಂದ ನಿವೃತ್ತ ಚಂದ್ರಕಾಂತ ಪ್ರಭು ರಿಗೆ ಅಭಿನಂದನೆ ಕಾರ್ಯಕ್ರಮ

Suddi Udaya

ಓಡಿಲ್ನಾಳ: ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಸರ್ಕಾರಿ ಕರ್ತವ್ಯದ ವೇಳೆ ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆಗೆ ಯತ್ನ ಖಂಡನೀಯ: ಜಯಕೀರ್ತಿ ಜೈನ್

Suddi Udaya

ಬೆಳಾಲು ಪ್ರೌಢಶಾಲಾ ಮಕ್ಕಳಿಂದ ಬಳಂಜ ಫಾರ್ಮ್ ಭೇಟಿ

Suddi Udaya

ಉಜಿರೆ: ಕಿರಣ್ ಆಗ್ರೋಟೆಕ್, ಸ್ಥಳಾಂತರಿತ ನೂತನ ಮಳಿಗೆ ಹಾಗೂ ಸೇವಾ ಕೇಂದ್ರ ಉದ್ಘಾಟನೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ದೇವದಾಸ್ ಶೆಟ್ಟಿ ಹಿಬರೋಡಿ ರವರಿಂದ ಕೃತಕ ಕಾಲಿನ ವ್ಯವಸ್ಥೆಗೆ ಸಹಾಯಹಸ್ತ

Suddi Udaya
error: Content is protected !!