24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ 2 ಸ.ಉ. ಹಿ. ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರದ ಪ್ರಯುಕ್ತ ಉಚಿತ ದಂತ ತಪಾಸಣೆ

ಕನ್ಯಾಡಿ : ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಕನ್ಯಾಡಿ 2 ಶಾಲೆಯಲ್ಲಿ ಬಂಟರಯಾನೆ ನಾಡವರ ಸಂಘ, ಬಂಟರ ಮಹಿಳಾ ವಿಭಾಗ ಬೆಳ್ತಂಗಡಿ, ಇಂಡಿಯನ್ ಡೆಂಟಲ್ ಅಸೋಸಿಯೇಷನ್ ಪುತ್ತೂರು, ರೋಟರಿ ಆನ್ಸ್ ಕ್ಲಬ್ ಬೆಳ್ತಂಗಡಿ ಇವರ ಸಹಭಾಗಿತ್ವದಲ್ಲಿ ಶಾಲೆಯಲ್ಲಿ ಏರ್ಪಡಿಸಿದ ಬೇಸಿಗೆ ಶಿಬಿರದ ಪ್ರಯುಕ್ತ ” ಉಚಿತ ದಂತ ತಪಾಸಣೆ ” ನಡೆಯಿತು.

ಕಾರ್ಯಕ್ರಮದಲ್ಲಿ ಡಾ| ಆಶಾ ರಾಘವೇಂದ್ರ ಪಿದಮಲೆ, ಬೆಳ್ತಂಗಡಿ, ಡಾ. ದೀಪಾಲಿ ಡೋಂಗ್ರೆ ಉಜಿರೆ, ಡಾ| ಹರ್ಷ ಉಜಿರೆ, ಡಾ| ಸೂರಾಜ್ ಭಟ್ ಉಜಿರೆ, ಡಾ| ತುಫೈಲ ಉಜಿರೆ ಉಪಸ್ಥಿತರಿದ್ದರು.

ಹಲ್ಲಿನ ಸುರಕ್ಷತೆಯ ಬಗ್ಗೆ ಡಾ| ದೀಪಾಲಿ ಡೋಂಗ್ರೆಯವರು ಮಾಹಿತಿಯನ್ನು ನೀಡಿದರು.

ಈ ವೇಳೆ ಶಾಲಾ ಮುಖ್ಯ ಶಿಕ್ಷಕಿಯಾದ ಶ್ರೀಮತಿ ಪುಷ್ಪಾ ಎನ್ ಇವರು “ಸೈನಿಕರಿಲ್ಲದ ದೇಶವನ್ನು ಊಹಿಸಲು ಸಾಧ್ಯವಿಲ್ಲ ಅದೇ ರೀತಿ ವೈದ್ಯರು ಜೀವ ರಕ್ಷಕರು” ಎಂದು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಇದೇ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ಉಷಾ ಶಶಿಧರ್ ಶೆಟ್ಟಿ ” ಮಕ್ಕಳು ಮತ್ತು ಪೋಷಕರ ನಡುವಿನ ಮೊಬೈಲ್ ಪಾತ್ರ ” ಕುರಿತು ಮಕ್ಕಳಿಗೆ ಮೊಬೈಲ್ ನಿಮ್ಮ ಜೀವನಕ್ಕೆ ಮುಳುವಾಗದಿರಲಿ ಮಕ್ಕಳೇ ಎನ್ನುತ್ತಾ , ಅದರ ಬಳಕೆಯ ಪರಿಣಾಮ ಮತ್ತು ದುಷ್ಪರಿಣಾಮವನ್ನು ಮಕ್ಕಳಿಗೆ ಮನದಟ್ಟಾಗುವಂತೆ ವಿವರಿಸಿ ಹೇಳಿದರು.

ಈ ಕಾರ್ಯಕ್ರಮದಲ್ಲಿ ಶಾಲಾ ಎಸ್ ಡಿ ಎಂ ಸಿ ಉಪಾಧ್ಯಕ್ಷರಾದ ಶ್ರೀಮತಿ ಚಂದ್ರಾವತಿ, ಬಂಟರ ಮಹಿಳಾ ವಿಭಾಗ ಬೆಳ್ತಂಗಡಿ ಇದರ ಸದಸ್ಯೆ ಶ್ರೀಮತಿ ಪವಿತ್ರ, ಶಾಲಾ ಶಿಕ್ಷಕ ವೃಂದ, ವಿದ್ಯಾರ್ಥಿಗಳು ಮಾಹಿತಿಯನ್ನು ಪಡೆದುಕೊಂಡರು. ಮುಖ್ಯ ಶಿಕ್ಷಕರಾದ ಶಿಕ್ಷಕಿ ಶ್ರೀಮತಿ ಪುಷ್ಪಾ ಎನ್ ಸ್ವಾಗತಿಸಿ, ಸಹ ಶಿಕ್ಷಕಿ ಶ್ರೀಮತಿ ಅರ್ಚನಾ ಧನ್ಯವಾದವಿತ್ತರು. ಸಹ ಶಿಕ್ಷಕ ನಾಗರಾಜ್ ಕಾರ್ಯಕ್ರಮದ ನಿರೂಪಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಪೆನ್ಸಿಲ್ವೇನಿಯ ಯುನಿರ್ವಸಿಟಿಯ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya

ಬಳಂಜ: ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಹರೀಶ್ ವೈ ಆಯ್ಕೆ

Suddi Udaya

ಅಳದಂಗಡಿ: ಗುಡ್ ಫ್ಯೂಚರ್ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

Suddi Udaya

ಚಿಕ್ಕಮಗಳೂರಿನ ವಕೀಲ ಪ್ರೀತಮ್ ರವರ ಮೇಲೆ ಹಲ್ಲೆ ಮಾಡಿರುವ ಪೊಲೀಸರನ್ನು ಬಂಧಿಸುವಂತೆ ಒತ್ತಾಯಿಸಿ ಬೆಳ್ತಂಗಡಿ ನ್ಯಾಯಾಲಯದ ಸಂಕೀರ್ಣದಲ್ಲಿ ಪ್ರತಿಭಟನೆ

Suddi Udaya

ಮಾಚಾರು ಶ್ರೀ ಲಕ್ಷ್ಮಿ ಜನಾರ್ದನ ದೇವಸ್ಥಾನದ  ವರ್ಷಾವಧಿ ಜಾತ್ರಾ ಮಹೋತ್ಸವ ಆಮಂತ್ರಣ ಬಿಡುಗಡೆ   

Suddi Udaya

ಬಳಂಜ ಶಾಲೆಯ ಹಳೆ ವಿದ್ಯಾರ್ಥಿ ಪ್ರವೀಣ್ ಜೈನ್ ಅವರಿಗೆ ಡಾಕ್ಟರೇಟ್ ಪದವಿ

Suddi Udaya
error: Content is protected !!