25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ 2 ಸ.ಉ. ಹಿ. ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರದ ಪ್ರಯುಕ್ತ ಉಚಿತ ದಂತ ತಪಾಸಣೆ

ಕನ್ಯಾಡಿ : ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಕನ್ಯಾಡಿ 2 ಶಾಲೆಯಲ್ಲಿ ಬಂಟರಯಾನೆ ನಾಡವರ ಸಂಘ, ಬಂಟರ ಮಹಿಳಾ ವಿಭಾಗ ಬೆಳ್ತಂಗಡಿ, ಇಂಡಿಯನ್ ಡೆಂಟಲ್ ಅಸೋಸಿಯೇಷನ್ ಪುತ್ತೂರು, ರೋಟರಿ ಆನ್ಸ್ ಕ್ಲಬ್ ಬೆಳ್ತಂಗಡಿ ಇವರ ಸಹಭಾಗಿತ್ವದಲ್ಲಿ ಶಾಲೆಯಲ್ಲಿ ಏರ್ಪಡಿಸಿದ ಬೇಸಿಗೆ ಶಿಬಿರದ ಪ್ರಯುಕ್ತ ” ಉಚಿತ ದಂತ ತಪಾಸಣೆ ” ನಡೆಯಿತು.

ಕಾರ್ಯಕ್ರಮದಲ್ಲಿ ಡಾ| ಆಶಾ ರಾಘವೇಂದ್ರ ಪಿದಮಲೆ, ಬೆಳ್ತಂಗಡಿ, ಡಾ. ದೀಪಾಲಿ ಡೋಂಗ್ರೆ ಉಜಿರೆ, ಡಾ| ಹರ್ಷ ಉಜಿರೆ, ಡಾ| ಸೂರಾಜ್ ಭಟ್ ಉಜಿರೆ, ಡಾ| ತುಫೈಲ ಉಜಿರೆ ಉಪಸ್ಥಿತರಿದ್ದರು.

ಹಲ್ಲಿನ ಸುರಕ್ಷತೆಯ ಬಗ್ಗೆ ಡಾ| ದೀಪಾಲಿ ಡೋಂಗ್ರೆಯವರು ಮಾಹಿತಿಯನ್ನು ನೀಡಿದರು.

ಈ ವೇಳೆ ಶಾಲಾ ಮುಖ್ಯ ಶಿಕ್ಷಕಿಯಾದ ಶ್ರೀಮತಿ ಪುಷ್ಪಾ ಎನ್ ಇವರು “ಸೈನಿಕರಿಲ್ಲದ ದೇಶವನ್ನು ಊಹಿಸಲು ಸಾಧ್ಯವಿಲ್ಲ ಅದೇ ರೀತಿ ವೈದ್ಯರು ಜೀವ ರಕ್ಷಕರು” ಎಂದು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಇದೇ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ಉಷಾ ಶಶಿಧರ್ ಶೆಟ್ಟಿ ” ಮಕ್ಕಳು ಮತ್ತು ಪೋಷಕರ ನಡುವಿನ ಮೊಬೈಲ್ ಪಾತ್ರ ” ಕುರಿತು ಮಕ್ಕಳಿಗೆ ಮೊಬೈಲ್ ನಿಮ್ಮ ಜೀವನಕ್ಕೆ ಮುಳುವಾಗದಿರಲಿ ಮಕ್ಕಳೇ ಎನ್ನುತ್ತಾ , ಅದರ ಬಳಕೆಯ ಪರಿಣಾಮ ಮತ್ತು ದುಷ್ಪರಿಣಾಮವನ್ನು ಮಕ್ಕಳಿಗೆ ಮನದಟ್ಟಾಗುವಂತೆ ವಿವರಿಸಿ ಹೇಳಿದರು.

ಈ ಕಾರ್ಯಕ್ರಮದಲ್ಲಿ ಶಾಲಾ ಎಸ್ ಡಿ ಎಂ ಸಿ ಉಪಾಧ್ಯಕ್ಷರಾದ ಶ್ರೀಮತಿ ಚಂದ್ರಾವತಿ, ಬಂಟರ ಮಹಿಳಾ ವಿಭಾಗ ಬೆಳ್ತಂಗಡಿ ಇದರ ಸದಸ್ಯೆ ಶ್ರೀಮತಿ ಪವಿತ್ರ, ಶಾಲಾ ಶಿಕ್ಷಕ ವೃಂದ, ವಿದ್ಯಾರ್ಥಿಗಳು ಮಾಹಿತಿಯನ್ನು ಪಡೆದುಕೊಂಡರು. ಮುಖ್ಯ ಶಿಕ್ಷಕರಾದ ಶಿಕ್ಷಕಿ ಶ್ರೀಮತಿ ಪುಷ್ಪಾ ಎನ್ ಸ್ವಾಗತಿಸಿ, ಸಹ ಶಿಕ್ಷಕಿ ಶ್ರೀಮತಿ ಅರ್ಚನಾ ಧನ್ಯವಾದವಿತ್ತರು. ಸಹ ಶಿಕ್ಷಕ ನಾಗರಾಜ್ ಕಾರ್ಯಕ್ರಮದ ನಿರೂಪಿಸಿದರು.

Related posts

ಶ್ರೀ ಧ.ಮಂ. ಯೋಗ ಮತ್ತು ಪ್ರಕೃತಿ ಚಿಕಿತ್ಸೆಗಳ ಮಹಾವಿದ್ಯಾಲಯ ಹಾಗೂ ಕಾಲೇಜಿನ ಎನ್.ಎಸ್.ಎಸ್ ವತಿಯಿಂದ ಉಚಿತ ಯೋಗ ಶಿಬಿರ

Suddi Udaya

ಫೆ15-28: ಮುಳಿಯ ಜುವೆಲ್ಸ್‌ನ ಪುತ್ತೂರು ಹಾಗೂ ಬೆಳ್ತಂಗಡಿ ಮಳಿಗೆಯಲ್ಲಿ ನವರತ್ನ ಆಭರಣಗಳ ಅಮೋಘ ಸಂಗ್ರಹ,

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿಯ ಉಸ್ತುವಾರಿಯಾಗಿ ಶೇಖರ್ ಕುಕ್ಕೇಡಿ ಆಯ್ಕೆ

Suddi Udaya

ಮೂಡುಕೋಡಿ ಶೀನ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಕೊಯ್ಯುರು : ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ನಕಲಿ ನಂಬರ್ ಪ್ಲೇಟ್ ಅಳವಡಿಸಿದ್ದ ಬೈಕ್ ವಿರುದ್ಧ ಪ್ರಕರಣ ದಾಖಲು

Suddi Udaya
error: Content is protected !!