28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಸಮಾಲೋಚನೆ ಸಭೆ

ಬೆಳ್ತಂಗಡಿ: ಬೆಲೆ ಏರಿಕೆಯ ಬರೆಯಿಂದ ತತ್ತರಿಸುತ್ತಿರುವ ರಾಜ್ಯದ ಜನತೆಗೆ ನ್ಯಾಯ ದೊರಕಿಸುವವರೆಗೂ ನಾವು ಶ್ರಮಿಸುವುದಿಲ್ಲ.ಎ. 9 ರಂದು ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಹೋರಾಟ ನಡೆಯಲಿದ್ದು, ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಂಡು ಕಾಂಗ್ರೆಸ್ ಸರಕಾರದ ದುರಾಡಳಿತ ನೀತಿಯನ್ನು ಖಂಡಿಸೋಣ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದರು.

ಅವರು ಎ. 4 ರಂದು ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿಯ ಕಚೇರಿಯಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಮಾತನಾಡಿದರು.

ಎಪ್ರಿಲ್ 6 ರಂದು ನಡೆಯುವ ಸಂಸ್ಥಾಪನ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗಹಿಸಬೇಕು ಹಾಗೂ ಎಪ್ರಿಲ್ 9 ರಂದು ನಡೆಯುವ ಜನಾಕ್ರೋಶ ಯಾತ್ರೆಯಲ್ಲಿಯೂ ಭಾಗವಹಿಸಬೇಕೆಂದರು.

ಈ ಸಂದರ್ಭದಲ್ಲಿ ವಿಧಾನ‌ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಭಾಜಪಾ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ,ಕೋಶಾಧಿಕಾರಿ ಸಂಜಯ್ ಪ್ರಭು,ಬಿಜೆಪಿ ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷ ನಂದನ್ ಮಲ್ಯ, ಜಿಲ್ಲಾ ಓಬಿಸಿ ಮೋರ್ಚಾ ಅಧ್ಯಕ್ಷ ಮಹೇಶ್ ಜೋಗಿ, ಬೆಳ್ತಂಗಡಿ ಮಂಡಲ ಪ್ರ‌ಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಜಯಾನಂದ ಗೌಡ ಪ್ರಜ್ವಲ್, ಮಾಧ್ಯಮ ಪ್ರಮುಖ್ ವಸಂತ ಪೂಜಾರಿ, ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಬಿ.ಎಸ್, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಗಣೇಶ್ ಗೌಡ ನಾವೂರು, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್ ಹಾಗೂ ಇತರರು ಉಪಸ್ಥಿತರಿದ್ದರು.

Related posts

ವಿಜಯರತ್ನ ಪ್ರಶಸ್ತಿ ಪುರಸ್ಕೃತ, ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರನ್ನು ಅಭಿನಂದಿಸಿದ ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಪದಾಧಿಕಾರಿಗಳು

Suddi Udaya

ಅಡಿಕೆ ಕ್ಷೇತ್ರದ ದಿಗ್ಗಜರಿಂದ ನಿಡ್ಲೆಯ ಅಗ್ರಿಲೀಫ್ ಗೆ ಭೇಟಿ: ಎಐ ಆಧಾರಿತ ಅಡಿಕೆ ಗ್ರೇಡಿಂಗ್ ತಂತ್ರಜ್ಞಾನಕ್ಕೆ ಮೆಚ್ಚುಗೆ

Suddi Udaya

ಕುವೆಟ್ಟು: ಕೇದಳಿಕೆ ನಿವಾಸಿ ಬಾಬು ನಾಯ್ಕ್ ನಿಧನ

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿ ವಿದ್ಯಾರ್ಥಿಗಳಿಂದ ಅತ್ಯುನ್ನತ ಸಾಧನೆ : ಕಾಲೇಜಿಗೆ ಹೆಮ್ಮೆ ತಂದ ಫಲಿತಾಂಶ

Suddi Udaya

ನಡ: ಸಿಡಿಲು ಬಡಿದು ಹಾನಿಗೊಂಡ ಮನೆಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ್ ಗೌಡ ಭೇಟಿ, ಧನಸಹಾಯ

Suddi Udaya

ನೂತನ ಉಪರಾಷ್ಟ್ರಪತಿಯಾಗಿ ಎ ನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್

Suddi Udaya
error: Content is protected !!