
ವೇಣೂರು : ಇಲ್ಲಿಯ ಕುಂಭಶ್ರೀ ಶಾಲೆಯ ಬಳಿ ಕಾರು ಹಾಗೂ ರಿಕ್ಷಾ ನಡುವೆ ಅಪಘಾತವಾಗಿ ರಿಕ್ಷಾ ಚಾಲಕನಿಗೆ ಗಾಯವಾದ ಘಟನೆ ಎ.3 ರಂದು ನಡೆದಿದೆ.


ಘಟನೆ ವಿವರ:ಗುರುವಾಯನಕೆರೆ – ವೇಣೂರು- ಮೂಡಬಿದ್ರೆ ರಾಜ್ಯ ಹೆದ್ದಾರಿ ರಸ್ತೆಯಲ್ಲಿ ವೇಣೂರು ಕಡೆಯಿಂದ ಕಾರು ಅದರ ಚಾಲಕ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಲಾರಿಯೊಂದನ್ನು ಓವರ್ ಟೇಕ್ ಮಾಡಿಕೊಂಡು ಒಮ್ಮೆಲೆ ರಸ್ತೆಯ ರಾಂಗ್ ಸೈಡಿಗೆ ಚಲಾಯಿಸಿ ಎದುರಿನಿಂದ ಅಂದರೆ ಗುರುವಾಯನಕೆರೆ ಕಡೆಯಿಂದ ಪ್ರಯಾಣಿಸುತ್ತಿದ್ದ ಆಟೋರಿಕ್ಷಾಕ್ಕೆ ರಭಸದಿಂದ ಡಿಕ್ಕಿ ಹೊಡೆದು ಬಳಿಕ ಕಾರು ಚಾಲಕನ ಹತೋಟಿ ತಪ್ಪಿ ರಸ್ತೆ ಬದಿ ಮಗುಚಿ ಬಿದ್ದು, ವಾಹನಗಳೆರಡೂ ಜಖಂಗೊಂಡಿದ್ದು, ಆಟೋರಿಕ್ಷಾದಲ್ಲಿದ್ದ ಚಾಲಕ ನೌಶಾದ್ ರವರ ಹಣೆಗೆ, ಕೈಗಳಿಗೆ ರಕ್ತಗಾಯ ಹಾಗೂ ಸೊಂಟಕ್ಕೆ ಗುದ್ದಿದ ನೋವು ಗಾಯಗಳಾಗಿ ಮೂಡಬಿದ್ರೆ ಆಳ್ವಾಸ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆ ಬಗ್ಗೆ ಮಂಗಳೂರು ಹೈಲ್ಯಾಂಡ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿರುತ್ತಾರೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.













