25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಚ್ಚೂರು ಶ್ರೀ ಬಾಲಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆಯ ಸಂದರ್ಭ ಸುರೇಶ ಪುತ್ತೂರಾಯರಿಗೆ ಸನ್ಮಾನ

ಇಳಂತಿಲ : ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯಲ್ಲಿ 70ನೇ ಕಾರ್ಯಕ್ರಮವಾಗಿ ಇಳಂತಿಲ ಗ್ರಾಮದ ಇಚ್ಚೂರು ಶ್ರೀ ಬಾಲಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆಯ ಸಂದರ್ಭದಲ್ಲಿ ಕರ್ಣ ದಿಗ್ವಿಜಯ ತಾಳಮದ್ದಳೆ ನಡೆಯಿತು.

ಈ ಸಂದರ್ಭದಲ್ಲಿ ಕಲಾಪೋಷಕರಾದ ದೇವಳದ ಪ್ರಧಾನ ಅರ್ಚಕ ಸುರೇಶ ಪುತ್ತೂರಾಯ ಇವರನ್ನು ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ ವತಿಯಿಂದ ಗೌರವಿಸಲಾಯಿತು.

ಕಾಳಿಕಾಂಬ ಯಕ್ಷಗಾನ ಸೇವಾ ಸಂಘದ ಅಧ್ಯಕ್ಷ ದಿವಾಕರ್ ಆಚಾರ್ಯ ಗೇರುಕಟ್ಟೆ ಅಭಿನಂದನ ನುಡಿಗಳನ್ನಾಡಿದರು. ಹಿರಿಯ ಯಕ್ಷಗಾನ ಹಿಮ್ಮೇಳವಾದಕರಾದ ಲಕ್ಷ್ಮೀಶ ಅಮ್ಮಣ್ಣಾಯ, ನೆಲ್ಯಾಡಿ ವಿನಾಯಕ ಯಕ್ಷಗಾನ ಸಂಘದ ಅಧ್ಯಕ್ಷ ಜಯರಾಮ ಬಲ್ಯ, ಧಾರ್ಮಿಕ ದತ್ತಿ ಇಲಾಖೆಯ ಪರಿವೀಕ್ಷಕರಾದ ಶ್ರೀಧರ ಎಸ್ ಪಿ ಸುರತ್ಕಲ್ ಇವರು ಪುತ್ತುರಾಯರನ್ನು ಗೌರವಿಸಿದರು.
ಸಂಘದ ಕಾರ್ಯದರ್ಶಿ ಶ್ರೀಪತಿ ಭಟ್ ಉಪ್ಪಿನಂಗಡಿ, ಪಾತಾಳ ಅಂಬಾ ಪ್ರಸಾದ್ ಮತ್ತು ಸಂಘದ ಸದಸ್ಯರು ಉಪಸ್ಥಿತರಿದ್ದರು.

ಸುಂದರ ಶೆಟ್ಟಿ ಇಳಂತಿಲ ಸ್ವಾಗತಿಸಿ ಪೂರ್ಣಿಮಾ ರಾವ್ ಬೆಳ್ತಂಗಡಿ ಕಾರ್ಯಕ್ರಮ ನಿರೂಪಿಸಿದರು.

Related posts

ಲಾಯಿಲ: ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಜೆಸಿಐ ವಲಯ 15ರ ಮಧ್ಯಂತರ ಸಮ್ಮೇಳನ ಜೆಸಿಐ ಬೆಳ್ತಂಗಡಿಗೆ ಅತ್ಯುತ್ತಮ ಘಟಕ ವಿನ್ನರ್ ಪ್ರಶಸ್ತಿ, ಘಟಕಾಧ್ಯಕ್ಷೆ ಆಶಾಲತಾ ಪ್ರಶಾಂತ್ ರವರಿಗೆ ಅತ್ಯುತ್ತಮ ಅಧ್ಯಕ್ಷೆ ರನ್ನರ್ ಪ್ರಶಸ್ತಿ

Suddi Udaya

ಇಂಡಸ್ ಟವರ್ಸ್ ಕಾರ್ಮಿಕರ ಶಾಂತಿಯುತ ಪ್ರತಿಭಟನೆಗೆ ದ.ಕ. ಜಿಲ್ಲಾ ಬಿಎಂಎಸ್ ಘಟಕದಿಂದ ಬೆಂಬಲ

Suddi Udaya

ಮಚ್ಚಿನ: ಕಾಂಗ್ರೆಸ್ ಹಿರಿಯ ಕಾರ್ಯಕರ್ತ ಸೇಸು ಮೂಲ್ಯ ನಿಧನ

Suddi Udaya

ಕುತ್ಲೂರು: ಮಂಜುಶ್ರೀ ಭಜನಾ ಮಂಡಳಿಯಿಂದ 29ನೇ ವಾರ್ಷಿಕೋತ್ಸವ ಮತ್ತು ಸಾರ್ವಜನಿಕ ಸತ್ಯನಾರಾಯಣ ಪೂಜೆ

Suddi Udaya

ಬೆಳ್ತಂಗಡಿ: ವಾಣಿ ಪ.ಪೂ. ಕಾಲೇಜಿನ ಎನ್. ಎಸ್. ಎಸ್. ವಿದ್ಯಾರ್ಥಿ ತೇಜಸ್ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಆಯ್ಕೆ

Suddi Udaya
error: Content is protected !!