May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ 2 ಸ.ಉ. ಹಿ. ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರದ ಪ್ರಯುಕ್ತ ಉಚಿತ ದಂತ ತಪಾಸಣೆ

ಕನ್ಯಾಡಿ : ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಕನ್ಯಾಡಿ 2 ಶಾಲೆಯಲ್ಲಿ ಬಂಟರಯಾನೆ ನಾಡವರ ಸಂಘ, ಬಂಟರ ಮಹಿಳಾ ವಿಭಾಗ ಬೆಳ್ತಂಗಡಿ, ಇಂಡಿಯನ್ ಡೆಂಟಲ್ ಅಸೋಸಿಯೇಷನ್ ಪುತ್ತೂರು, ರೋಟರಿ ಆನ್ಸ್ ಕ್ಲಬ್ ಬೆಳ್ತಂಗಡಿ ಇವರ ಸಹಭಾಗಿತ್ವದಲ್ಲಿ ಶಾಲೆಯಲ್ಲಿ ಏರ್ಪಡಿಸಿದ ಬೇಸಿಗೆ ಶಿಬಿರದ ಪ್ರಯುಕ್ತ ” ಉಚಿತ ದಂತ ತಪಾಸಣೆ ” ನಡೆಯಿತು.

ಕಾರ್ಯಕ್ರಮದಲ್ಲಿ ಡಾ| ಆಶಾ ರಾಘವೇಂದ್ರ ಪಿದಮಲೆ, ಬೆಳ್ತಂಗಡಿ, ಡಾ. ದೀಪಾಲಿ ಡೋಂಗ್ರೆ ಉಜಿರೆ, ಡಾ| ಹರ್ಷ ಉಜಿರೆ, ಡಾ| ಸೂರಾಜ್ ಭಟ್ ಉಜಿರೆ, ಡಾ| ತುಫೈಲ ಉಜಿರೆ ಉಪಸ್ಥಿತರಿದ್ದರು.

ಹಲ್ಲಿನ ಸುರಕ್ಷತೆಯ ಬಗ್ಗೆ ಡಾ| ದೀಪಾಲಿ ಡೋಂಗ್ರೆಯವರು ಮಾಹಿತಿಯನ್ನು ನೀಡಿದರು.

ಈ ವೇಳೆ ಶಾಲಾ ಮುಖ್ಯ ಶಿಕ್ಷಕಿಯಾದ ಶ್ರೀಮತಿ ಪುಷ್ಪಾ ಎನ್ ಇವರು “ಸೈನಿಕರಿಲ್ಲದ ದೇಶವನ್ನು ಊಹಿಸಲು ಸಾಧ್ಯವಿಲ್ಲ ಅದೇ ರೀತಿ ವೈದ್ಯರು ಜೀವ ರಕ್ಷಕರು” ಎಂದು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಇದೇ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ಉಷಾ ಶಶಿಧರ್ ಶೆಟ್ಟಿ ” ಮಕ್ಕಳು ಮತ್ತು ಪೋಷಕರ ನಡುವಿನ ಮೊಬೈಲ್ ಪಾತ್ರ ” ಕುರಿತು ಮಕ್ಕಳಿಗೆ ಮೊಬೈಲ್ ನಿಮ್ಮ ಜೀವನಕ್ಕೆ ಮುಳುವಾಗದಿರಲಿ ಮಕ್ಕಳೇ ಎನ್ನುತ್ತಾ , ಅದರ ಬಳಕೆಯ ಪರಿಣಾಮ ಮತ್ತು ದುಷ್ಪರಿಣಾಮವನ್ನು ಮಕ್ಕಳಿಗೆ ಮನದಟ್ಟಾಗುವಂತೆ ವಿವರಿಸಿ ಹೇಳಿದರು.

ಈ ಕಾರ್ಯಕ್ರಮದಲ್ಲಿ ಶಾಲಾ ಎಸ್ ಡಿ ಎಂ ಸಿ ಉಪಾಧ್ಯಕ್ಷರಾದ ಶ್ರೀಮತಿ ಚಂದ್ರಾವತಿ, ಬಂಟರ ಮಹಿಳಾ ವಿಭಾಗ ಬೆಳ್ತಂಗಡಿ ಇದರ ಸದಸ್ಯೆ ಶ್ರೀಮತಿ ಪವಿತ್ರ, ಶಾಲಾ ಶಿಕ್ಷಕ ವೃಂದ, ವಿದ್ಯಾರ್ಥಿಗಳು ಮಾಹಿತಿಯನ್ನು ಪಡೆದುಕೊಂಡರು. ಮುಖ್ಯ ಶಿಕ್ಷಕರಾದ ಶಿಕ್ಷಕಿ ಶ್ರೀಮತಿ ಪುಷ್ಪಾ ಎನ್ ಸ್ವಾಗತಿಸಿ, ಸಹ ಶಿಕ್ಷಕಿ ಶ್ರೀಮತಿ ಅರ್ಚನಾ ಧನ್ಯವಾದವಿತ್ತರು. ಸಹ ಶಿಕ್ಷಕ ನಾಗರಾಜ್ ಕಾರ್ಯಕ್ರಮದ ನಿರೂಪಿಸಿದರು.

Related posts

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸಂಚಾರಿ ನಿಯಮ ಪಾಲನೆ ಮತ್ತು ಕಾನೂನು ಮಾಹಿತಿ ಕಾರ್ಯಕ್ರಮ

Suddi Udaya

ಬಳಂಜ ಶಾಲಾ ಅಮೃತ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗಮಕ ಸಮ್ಮೇಳನ ಡಾ. ಹೆಗ್ಗಡೆಯವರಿಂದ ಆಮಂತ್ರಣ ಬಿಡುಗಡೆ

Suddi Udaya

ನ್ಯಾಯತರ್ಫು: ಅಬ್ದುಲ್ ರಹಿಮಾನ್ ರವರ ಮನೆಗೆ ಸಿಡಿಲು ಬಡಿದು ಭಾಗಶಃ ಹಾನಿ

Suddi Udaya

ವೇಣೂರು ಪೆರ್ಮುಡ ಸೂರ್ಯ-ಚಂದ್ರ ಜೋಡುಕೆರೆ ಬಯಲು ಕಂಬಳದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಚಿಬಿದ್ರೆ ಪರವಾನಿಗೆ ಇಲ್ಲದೆ ಮರ ಕಡಿದು ಸಾಗಾಟಕ್ಕೆ ಯತ್ನ :ಬೆಳ್ತಂಗಡಿ ಅರಣ್ಯ ಇಲಾಖೆಯಿಂದ ಮರ ಮತ್ತು ಕಟ್ಟಿಗೆಗಳ ವಶ

Suddi Udaya
error: Content is protected !!