28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ 2 ಸ.ಉ. ಹಿ. ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರದ ಪ್ರಯುಕ್ತ ಉಚಿತ ದಂತ ತಪಾಸಣೆ

ಕನ್ಯಾಡಿ : ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಕನ್ಯಾಡಿ 2 ಶಾಲೆಯಲ್ಲಿ ಬಂಟರಯಾನೆ ನಾಡವರ ಸಂಘ, ಬಂಟರ ಮಹಿಳಾ ವಿಭಾಗ ಬೆಳ್ತಂಗಡಿ, ಇಂಡಿಯನ್ ಡೆಂಟಲ್ ಅಸೋಸಿಯೇಷನ್ ಪುತ್ತೂರು, ರೋಟರಿ ಆನ್ಸ್ ಕ್ಲಬ್ ಬೆಳ್ತಂಗಡಿ ಇವರ ಸಹಭಾಗಿತ್ವದಲ್ಲಿ ಶಾಲೆಯಲ್ಲಿ ಏರ್ಪಡಿಸಿದ ಬೇಸಿಗೆ ಶಿಬಿರದ ಪ್ರಯುಕ್ತ ” ಉಚಿತ ದಂತ ತಪಾಸಣೆ ” ನಡೆಯಿತು.

ಕಾರ್ಯಕ್ರಮದಲ್ಲಿ ಡಾ| ಆಶಾ ರಾಘವೇಂದ್ರ ಪಿದಮಲೆ, ಬೆಳ್ತಂಗಡಿ, ಡಾ. ದೀಪಾಲಿ ಡೋಂಗ್ರೆ ಉಜಿರೆ, ಡಾ| ಹರ್ಷ ಉಜಿರೆ, ಡಾ| ಸೂರಾಜ್ ಭಟ್ ಉಜಿರೆ, ಡಾ| ತುಫೈಲ ಉಜಿರೆ ಉಪಸ್ಥಿತರಿದ್ದರು.

ಹಲ್ಲಿನ ಸುರಕ್ಷತೆಯ ಬಗ್ಗೆ ಡಾ| ದೀಪಾಲಿ ಡೋಂಗ್ರೆಯವರು ಮಾಹಿತಿಯನ್ನು ನೀಡಿದರು.

ಈ ವೇಳೆ ಶಾಲಾ ಮುಖ್ಯ ಶಿಕ್ಷಕಿಯಾದ ಶ್ರೀಮತಿ ಪುಷ್ಪಾ ಎನ್ ಇವರು “ಸೈನಿಕರಿಲ್ಲದ ದೇಶವನ್ನು ಊಹಿಸಲು ಸಾಧ್ಯವಿಲ್ಲ ಅದೇ ರೀತಿ ವೈದ್ಯರು ಜೀವ ರಕ್ಷಕರು” ಎಂದು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಇದೇ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ಉಷಾ ಶಶಿಧರ್ ಶೆಟ್ಟಿ ” ಮಕ್ಕಳು ಮತ್ತು ಪೋಷಕರ ನಡುವಿನ ಮೊಬೈಲ್ ಪಾತ್ರ ” ಕುರಿತು ಮಕ್ಕಳಿಗೆ ಮೊಬೈಲ್ ನಿಮ್ಮ ಜೀವನಕ್ಕೆ ಮುಳುವಾಗದಿರಲಿ ಮಕ್ಕಳೇ ಎನ್ನುತ್ತಾ , ಅದರ ಬಳಕೆಯ ಪರಿಣಾಮ ಮತ್ತು ದುಷ್ಪರಿಣಾಮವನ್ನು ಮಕ್ಕಳಿಗೆ ಮನದಟ್ಟಾಗುವಂತೆ ವಿವರಿಸಿ ಹೇಳಿದರು.

ಈ ಕಾರ್ಯಕ್ರಮದಲ್ಲಿ ಶಾಲಾ ಎಸ್ ಡಿ ಎಂ ಸಿ ಉಪಾಧ್ಯಕ್ಷರಾದ ಶ್ರೀಮತಿ ಚಂದ್ರಾವತಿ, ಬಂಟರ ಮಹಿಳಾ ವಿಭಾಗ ಬೆಳ್ತಂಗಡಿ ಇದರ ಸದಸ್ಯೆ ಶ್ರೀಮತಿ ಪವಿತ್ರ, ಶಾಲಾ ಶಿಕ್ಷಕ ವೃಂದ, ವಿದ್ಯಾರ್ಥಿಗಳು ಮಾಹಿತಿಯನ್ನು ಪಡೆದುಕೊಂಡರು. ಮುಖ್ಯ ಶಿಕ್ಷಕರಾದ ಶಿಕ್ಷಕಿ ಶ್ರೀಮತಿ ಪುಷ್ಪಾ ಎನ್ ಸ್ವಾಗತಿಸಿ, ಸಹ ಶಿಕ್ಷಕಿ ಶ್ರೀಮತಿ ಅರ್ಚನಾ ಧನ್ಯವಾದವಿತ್ತರು. ಸಹ ಶಿಕ್ಷಕ ನಾಗರಾಜ್ ಕಾರ್ಯಕ್ರಮದ ನಿರೂಪಿಸಿದರು.

Related posts

ಕಾಶಿಬೆಟ್ಟು ಬಳಿ ಕೆಟ್ಟು ನಿಂತ ಕೆ.ಎಸ್ ಆರ್ ಟಿ.ಸಿ ಬಸ್ : ಟ್ರಾಫಿಕ್ ಜಾಮ್

Suddi Udaya

ಅಳದಂಗಡಿ ಅರಮನೆಗೆ ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ಭೇಟಿ

Suddi Udaya

ಮುಂಡಾಜೆ ಮತಗಟ್ಟೆ 74 ರಲ್ಲಿ ಕೈ ಕೊಟ್ಟ ಮತಯಂತ್ರ

Suddi Udaya

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿಡಾ. ಹೆಗ್ಗಡೆ ಸಂತಾಪ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಅನ್ನಪೂರ್ಣ ಛತ್ರದಲ್ಲಿ ಸೆಲ್ಕೋ ಪೌಂಢೇಶನ್ ಪ್ರಾಯೋಜಕತ್ವದಲ್ಲಿ ಅಳವಡಿಸಲಾದ ಸೌರ ವಿದ್ಯುತ್ ಘಟಕಕ್ಕೆ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಚಾಲನೆ

Suddi Udaya

ಕಲ್ಮಂಜ : ಗುರಿಪಳ್ಳ ನಿವಾಸಿ ಮೇಸ್ತ್ರಿ ನಾರಾಯಣ ಮೂಲ್ಯ ನಿಧನ

Suddi Udaya
error: Content is protected !!