May 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜಾರಿಗೆ ಬೈಲು: ಅಕ್ರಮ ಗೋ ಸಾಗಟ :ರಾಷ್ಟ್ರೀಯ ಹಿಂದೂ ಜಾಗರಣೆ ವೇದಿಕೆ ಕಾರ್ಯಕರ್ತರಿಂದ ಕಾರ್ಯಾಚರಣೆ

ಬೆಳ್ತಂಗಡಿ: ಮಂಗಳೂರಿಗೆ ಅಕ್ರಮವಾಗಿ ಗೋ ಸಾಗಾಟ ನಡೆಸಲು ಹೊರಟ ವಾಹನವನ್ನು ಕಳಿಯ ನ್ಯಾಯತರ್ಪು ಸಮೀಪದ ಜಾರಿಗೆಬೈಲು ಎಂಬಲ್ಲಿ ಇಂದು ಬೆಳ್ಳಂಬೆಳಗ್ಗೆ ಜಾನುವಾರು ಸಾಗಾಟದ ವಾಹನವನ್ನು ತಡೆಹಿಡಿಯಲಾಗಿದೆ.ಹಿಂಸಾತ್ಮಕವಾಗಿ ತರಕಾರಿ ಸಾಗಾಟದ ವಾಹನದಲ್ಲಿ ಸುಮಾರು 10 ರಿಂದ 15 ಹಸುಗಳನ್ನು ಗೋವಧೆಗೆಂದು ಸಾಗಾಟ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಹಿಂದು ಸಂಘಟನೆ ಕಾರ್ಯಕರ್ತರು ವಾಹನವನ್ನು ಹಿಂಬಾಲಿಸಿ ತಡೆಹಿಡಿದಿದ್ದಾರೆ.

ಘಟನೆಯಲ್ಲಿ ಚಾಲಕರು ವಾಹನ ಬಿಟ್ಟು ಪರಾರಿಯಾಗಿದ್ದು, ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದಂತೆ ಹಿಂಸಾತ್ಮಕವಾಗಿ ಸಾಗಾಟ ನಡೆಸುತ್ತಿದ್ದ ವಾಹನ ಹಾಗೂ 15 ಕ್ಕೂ ಅಧಿಕ ಗೋವುಗಳನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗಿದೆ.

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಮಹೇಶ್ ಶೆಟ್ಟಿ ತಿಮರೋಡಿ ಯುವಕರು ಈ ಕಾರ್ಯಾಚರಣೆ ನಡೆಸಿದ್ದಾರೆ.ಬೆಳ್ತಂಗಡಿ ತಾಲೂಕಿನ ಹಲವೆಡೆಯಿಂದ ಗೋವುಗಳನ್ನು ತುಂಬಿ ಮಂಗಳೂರಿಗೆ ಸಾಗಾಟ ನಡೆಸಲು ಉದ್ದೇಶಿಸಲಾಗಿತ್ತು ಎನ್ನಲಾಗಿದೆ.

ಖಚಿತ ಮಾಹಿತಿ ಮೇರೆಗೆ ಪೊಲೀಸರ ಸಹಕಾರದೊಂದಿಗೆ ಕಾರ್ಯಾಚರಣೆ, ಏಸ್ ವಾಹನದಲ್ಲಿ ಮೇಲ್ಬಾಗದಲ್ಲಿ ತರಕಾರಿ, ತಳಭಾಗದಲ್ಲಿ ಹಿಂಸಾತ್ಮಕವಾಗಿ ಗೋವುಗಳ ಸಾಗಾಟ.

Related posts

ಬೆಳ್ತಂಗಡಿ ತಾಲೂಕಿನ ವಿವಿಧ ಮತಗಟ್ಟೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಕಾಲ್ತುಳಿತ ದುರಂತ: ಪೂರ್ವ ತಯಾರಿ ಇಲ್ಲದೆ ರಾಜ್ಯ ಸರ್ಕಾದಿಂದ ಬೇಜವಾಬ್ದಾರಿ ಸಂಭ್ರಮಾಚರಣೆ: ಹರೀಶ್ ಪೂಂಜ

Suddi Udaya

ಬಳ್ಳಮಂಜ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮೇಷ ಜಾತ್ರೆಗೆ ಚಾಲನೆ

Suddi Udaya

ಗಂಡಿಬಾಗಿಲು ಸೆಂಟ್ ತೋಮಸ್ ಚರ್ಚ್ ನಲ್ಲಿ ಪಾಲಕರ ದಿನಾಚರಣೆ

Suddi Udaya

ಕರಾಟೆ ಚಾಂಪಿಯನ್ ಶಿಪ್ : ಬೆಳ್ತಂಗಡಿಯ ಶ್ರೇಯಸ್ ಕುಮಿಟೆಯಲ್ಲಿ ಪ್ರಥಮ ಸ್ಥಾನ

Suddi Udaya

ನಾವೂರು: ಪಿಲತ್ತಡಿ ನಿವಾಸಿ ಇಂದಿರ ನಿಧನ

Suddi Udaya
error: Content is protected !!