28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಸಮಾಲೋಚನೆ ಸಭೆ

ಬೆಳ್ತಂಗಡಿ: ಬೆಲೆ ಏರಿಕೆಯ ಬರೆಯಿಂದ ತತ್ತರಿಸುತ್ತಿರುವ ರಾಜ್ಯದ ಜನತೆಗೆ ನ್ಯಾಯ ದೊರಕಿಸುವವರೆಗೂ ನಾವು ಶ್ರಮಿಸುವುದಿಲ್ಲ.ಎ. 9 ರಂದು ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಹೋರಾಟ ನಡೆಯಲಿದ್ದು, ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಂಡು ಕಾಂಗ್ರೆಸ್ ಸರಕಾರದ ದುರಾಡಳಿತ ನೀತಿಯನ್ನು ಖಂಡಿಸೋಣ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದರು.

ಅವರು ಎ. 4 ರಂದು ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿಯ ಕಚೇರಿಯಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಮಾತನಾಡಿದರು.

ಎಪ್ರಿಲ್ 6 ರಂದು ನಡೆಯುವ ಸಂಸ್ಥಾಪನ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗಹಿಸಬೇಕು ಹಾಗೂ ಎಪ್ರಿಲ್ 9 ರಂದು ನಡೆಯುವ ಜನಾಕ್ರೋಶ ಯಾತ್ರೆಯಲ್ಲಿಯೂ ಭಾಗವಹಿಸಬೇಕೆಂದರು.

ಈ ಸಂದರ್ಭದಲ್ಲಿ ವಿಧಾನ‌ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಭಾಜಪಾ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ,ಕೋಶಾಧಿಕಾರಿ ಸಂಜಯ್ ಪ್ರಭು,ಬಿಜೆಪಿ ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷ ನಂದನ್ ಮಲ್ಯ, ಜಿಲ್ಲಾ ಓಬಿಸಿ ಮೋರ್ಚಾ ಅಧ್ಯಕ್ಷ ಮಹೇಶ್ ಜೋಗಿ, ಬೆಳ್ತಂಗಡಿ ಮಂಡಲ ಪ್ರ‌ಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಜಯಾನಂದ ಗೌಡ ಪ್ರಜ್ವಲ್, ಮಾಧ್ಯಮ ಪ್ರಮುಖ್ ವಸಂತ ಪೂಜಾರಿ, ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಬಿ.ಎಸ್, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಗಣೇಶ್ ಗೌಡ ನಾವೂರು, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇ‍ಷ ಪೂಜೆ

Suddi Udaya

ಬೆಳ್ತಂಗಡಿ : ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ಅರಣ್ಯ ಇಲಾಖೆಯಿಂದ ವಿದ್ಯುತ್ ಭಾಗ್ಯಕ್ಕೆ ಅನುಮತಿ

Suddi Udaya

ಕಳೆಂಜ ಹಲ್ಲೆಗೊಳಗಾಗಿದ್ದ ರಾಜೇಶ್ ಎಂ.ಕೆ ಯವರ ಆರೋಗ್ಯ ವಿಚಾರಿಸಿದ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್

Suddi Udaya

ಕೊಕ್ಕಡ: ಡಾ.ಬಿ ಮೋಹನ್ ದಾಸ್ ಗೌಡ ರವರ 90ನೇ ವರ್ಷದ ನವತಿ ಕಾರ್ಯಕ್ರಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

Suddi Udaya

ನಿಡ್ಲೆ : ಕಾಟ್ಲ ಪರಿಸರದಲ್ಲಿ ಕಾಡಾನೆ ಹಾವಳಿ

Suddi Udaya
error: Content is protected !!