30.1 C
ಪುತ್ತೂರು, ಬೆಳ್ತಂಗಡಿ
June 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು: ಕುಂಭಶ್ರೀ ಶಾಲೆಯ ಬಳಿ ಕಾರು ಹಾಗೂ ರಿಕ್ಷಾ ನಡುವೆ ಅಪಘಾತ: ರಿಕ್ಷಾ ಚಾಲಕನಿಗೆ ಗಾಯ

ವೇಣೂರು : ಇಲ್ಲಿಯ ಕುಂಭಶ್ರೀ ಶಾಲೆಯ ಬಳಿ ಕಾರು ಹಾಗೂ ರಿಕ್ಷಾ ನಡುವೆ ಅಪಘಾತವಾಗಿ ರಿಕ್ಷಾ ಚಾಲಕನಿಗೆ ಗಾಯವಾದ ಘಟನೆ ಎ.3 ರಂದು ನಡೆದಿದೆ.

ಘಟನೆ ವಿವರ:ಗುರುವಾಯನಕೆರೆ – ವೇಣೂರು- ಮೂಡಬಿದ್ರೆ ರಾಜ್ಯ ಹೆದ್ದಾರಿ ರಸ್ತೆಯಲ್ಲಿ ವೇಣೂರು ಕಡೆಯಿಂದ ಕಾರು ಅದರ ಚಾಲಕ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಲಾರಿಯೊಂದನ್ನು ಓವರ್ ಟೇಕ್‌ ಮಾಡಿಕೊಂಡು ಒಮ್ಮೆಲೆ ರಸ್ತೆಯ ರಾಂಗ್ ಸೈಡಿಗೆ ಚಲಾಯಿಸಿ ಎದುರಿನಿಂದ ಅಂದರೆ ಗುರುವಾಯನಕೆರೆ ಕಡೆಯಿಂದ ಪ್ರಯಾಣಿಸುತ್ತಿದ್ದ ಆಟೋರಿಕ್ಷಾಕ್ಕೆ ರಭಸದಿಂದ ಡಿಕ್ಕಿ ಹೊಡೆದು ಬಳಿಕ ಕಾರು ಚಾಲಕನ ಹತೋಟಿ ತಪ್ಪಿ ರಸ್ತೆ ಬದಿ ಮಗುಚಿ ಬಿದ್ದು, ವಾಹನಗಳೆರಡೂ ಜಖಂಗೊಂಡಿದ್ದು, ಆಟೋರಿಕ್ಷಾದಲ್ಲಿದ್ದ ಚಾಲಕ ನೌಶಾದ್‌ ರವರ ಹಣೆಗೆ, ಕೈಗಳಿಗೆ ರಕ್ತಗಾಯ ಹಾಗೂ ಸೊಂಟಕ್ಕೆ ಗುದ್ದಿದ ನೋವು ಗಾಯಗಳಾಗಿ ಮೂಡಬಿದ್ರೆ ಆಳ್ವಾಸ್‌ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆ ಬಗ್ಗೆ ಮಂಗಳೂರು ಹೈಲ್ಯಾಂಡ್‌ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿರುತ್ತಾರೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಮಾ.10: ಮೂಲ್ಕಿಯಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ “ಬೆಳ್ಳಿ ಹಬ್ಬ ಸಂಭ್ರಮ”: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು,ಓಡಿಲ್ನಾಳ ಗ್ರಾಮ ಸಮಿತಿಯಿಂದ ಸಮಾಲೋಚನೆ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರೌಡಿ ಶೀಟರ್ ಗಳು ಹಾಗೂ ಇತರ ಅಪರಾಧ ಹಿನ್ನೆಲೆಯನ್ನು ಹೊಂದಿರುವ ಆರೋಪಿಗಳ ಮನೆಗೆ ಪೊಲೀಸ್ ಭೇಟಿ ಪರಿಶೀಲನೆ

Suddi Udaya

ಆನ್ ಲೈನ್ ಜಾಬ್ ಆಫರ್ ನೀಡಿ ಮಹಿಳೆಗೆ ರೂ. 4.25 ಲಕ್ಷ ವಂಚನೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂ.ಮಾ. ಶಾಲೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನ ಆಚರಣೆ

Suddi Udaya

ಸ್ಪಂದನಾ ವಿಜಯರಾಘವೇಂದ್ರ ಪಾರ್ಥೀವ ಶರೀರದ ದರ್ಶನ ಪಡೆದ ಶಾಸಕ ಹರೀಶ್ ಪೂಂಜ

Suddi Udaya

ಕಾಯರ್ತಡ್ಕ ಸರಕಾರಿ ಪ್ರೌಢಶಾಲೆಗೆ ಕ್ಯಾನ್ ಫಿನ್ ಹೋಂಮ್ಸ್ ವತಿಯಿಂದ ಕೊಡುಗೆ

Suddi Udaya
error: Content is protected !!