24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರ ಸಮ್ಮರ್ ಪ್ಯಾರಡೈಸ್ ಸಮಾರೋಪ ಸಮಾರಂಭ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಕಳೆದ ಮೂರು ದಿನಗಳಿಂದ ಬೇಸಿಗೆ ಶಿಬಿರ ನಡೆಯುತ್ತಿದ್ದು ಎ.4ರಂದು ಶಿಬಿರಕ್ಕೆ ತೆರೆ ಎಳೆಯಲಾಯಿತು.

ಈ ಶಿಬಿರದಲ್ಲಿ ಮಕ್ಕಳೇ ತಯಾರಿಸಿರುವ ವಿವಿಧ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ವನ್ನು ಏರ್ಪಡಿಸಲಾಗಿತ್ತು. ಈ ವ್ಯಾಪಾರ ಮಳಿಗೆಯ ಉದ್ಘಾಟನಾ ಸಮಾರಂಭವನ್ನು ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ(ಕೇಂದ್ರ ಪಠ್ಯಕ್ರಮ) ಪ್ರಾಂಶುಪಾಲರು ಮನಮೋಹನ್ ನಾಯಕ್ ಹಾಗೂ ಮುರಳಿಧರ್ ದಾಸ್ ಆಗಮಿಸಿ ದೀಪ ಪ್ರಜ್ವಲಿಸಿ ಜೊತೆಗೆ ಪ್ರತಿ ಮಳಿಗೆಯ ದರ ಪಟ್ಟಿಯನ್ನು ಬಿಡುಗಡೆಗೊಳಿಸಿ ವ್ಯಾಪಾರ ಮಳಿಗೆಗೆ ಚಾಲನೆ ನೀಡಿದರು.

ನಂತರ ಮಾತಾಡಿದ ಅವರು ಬೇಸಿಗೆ ಶಿಬಿರದಿಂದ ವಿದ್ಯಾರ್ಥಿಗಳಿಗೆ ಆಗುವ ಪ್ರಯೋಜನ ಹಾಗೂ ಅವರ ವ್ಯಕ್ತಿತ್ವ ವಿಕಸನದ ಮೇಲೆ ಅದು ಬೀರುವ ಪರಿಣಾಮವನ್ನು ವ್ಯಾಪಾರದ ಅನುಭವವನ್ನು ವಿದ್ಯಾರ್ಥಿಗಳಿಗೆ ತಿಳಿಯಲು ಉತ್ತಮ ಅವಕಾಶ ಎಂದು ಶ್ಲಾಘಿಸಿದರು. ವಿದ್ಯಾರ್ಥಿಗಳ ಆಸಕ್ತಿ ಭರಿತ ವ್ಯಾಪಾರಕ್ಕೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಸ್ವಾಗತಿಸಿ ಧನ್ಯವಾದವಿತ್ತರು. ಕಾರ್ಯಕ್ರಮದಲ್ಲಿ ಸಿದ್ದ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ (ಕೇಂದ್ರ ಪಠ್ಯಕ್ರಮ) ಇದರ ಚಿತ್ರಕಲಾ ಶಿಕ್ಷಕರಾಗಿರುವ ರವಿಚಂದ್ರ, ಶಾಲಾ‌ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ಶಾಲಾ ವಿದ್ಯಾರ್ಥಿಗಳು ಪ್ರತ್ಯಕ್ಷದರ್ಶಿಗಳಾಗಿದ್ದರು.

Related posts

ತೆಕ್ಕಾರು: ಗಾಂಜಾ ನಶೆಯಲ್ಲಿ ಅನುಚಿತ ವರ್ತನೆ: ಇಬ್ಬರು ಯುವಕರು ಪೊಲೀಸರ ವಶಕ್ಕೆ

Suddi Udaya

ಬೆಳಾಲು ಪೆರಿಯಡ್ಕ ಶಾಲಾ ಮುಖ್ಯೋಪಾಧ್ಯಾಯಿನಿ ವಿಜಯ ಅವರಿಗೆ ಬೀಳ್ಕೊಡುಗೆ ಸಮಾರಂಭ: ಶಾಲೆಯ ಪ್ರಗತಿಗೆ ಶಿಕ್ಷಕಿ ವಿಜಯರವರ ಕೊಡುಗೆ ಅಪಾರ: ಮೋಹನ್ ಕುಮಾರ್

Suddi Udaya

ಮಚ್ಚಿನ: ಬಂಗೇರಕಟ್ಟೆಯಲ್ಲಿ ರಸ್ತೆ ದುರಸ್ಥಿಗೆ ಆಗ್ರಹಿಸಿ ಎಸ್.ಡಿ.ಪಿ.ಐ ವತಿಯಿಂದ ಪ್ರತಿಭಟನೆ

Suddi Udaya

ಪಟ್ರಮೆಯಲ್ಲಿ ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸವರ್ಗ

Suddi Udaya

ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ ಅಲೆಮಾರಿ ಅಭಿವೃದ್ಧಿ ನಿಗಮದ ಜಿಲ್ಲಾ ನಾಮನಿರ್ದೇಶಿತ ಸದಸ್ಯರಾಗಿ ಜಯನಂದ್ ಪಿಲಿಕಳ ಆಯ್ಕೆ

Suddi Udaya

ತ್ರೋಬಾಲ್ ಪಂದ್ಯಾಟ: ಕೊಯ್ಯುರು ಸರಕಾರಿ ಪ್ರೌಢಶಾಲಾ ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya
error: Content is protected !!