25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರ ಸಮ್ಮರ್ ಪ್ಯಾರಡೈಸ್ ಸಮಾರೋಪ ಸಮಾರಂಭ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಕಳೆದ ಮೂರು ದಿನಗಳಿಂದ ಬೇಸಿಗೆ ಶಿಬಿರ ನಡೆಯುತ್ತಿದ್ದು ಎ.4ರಂದು ಶಿಬಿರಕ್ಕೆ ತೆರೆ ಎಳೆಯಲಾಯಿತು.

ಈ ಶಿಬಿರದಲ್ಲಿ ಮಕ್ಕಳೇ ತಯಾರಿಸಿರುವ ವಿವಿಧ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ವನ್ನು ಏರ್ಪಡಿಸಲಾಗಿತ್ತು. ಈ ವ್ಯಾಪಾರ ಮಳಿಗೆಯ ಉದ್ಘಾಟನಾ ಸಮಾರಂಭವನ್ನು ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ(ಕೇಂದ್ರ ಪಠ್ಯಕ್ರಮ) ಪ್ರಾಂಶುಪಾಲರು ಮನಮೋಹನ್ ನಾಯಕ್ ಹಾಗೂ ಮುರಳಿಧರ್ ದಾಸ್ ಆಗಮಿಸಿ ದೀಪ ಪ್ರಜ್ವಲಿಸಿ ಜೊತೆಗೆ ಪ್ರತಿ ಮಳಿಗೆಯ ದರ ಪಟ್ಟಿಯನ್ನು ಬಿಡುಗಡೆಗೊಳಿಸಿ ವ್ಯಾಪಾರ ಮಳಿಗೆಗೆ ಚಾಲನೆ ನೀಡಿದರು.

ನಂತರ ಮಾತಾಡಿದ ಅವರು ಬೇಸಿಗೆ ಶಿಬಿರದಿಂದ ವಿದ್ಯಾರ್ಥಿಗಳಿಗೆ ಆಗುವ ಪ್ರಯೋಜನ ಹಾಗೂ ಅವರ ವ್ಯಕ್ತಿತ್ವ ವಿಕಸನದ ಮೇಲೆ ಅದು ಬೀರುವ ಪರಿಣಾಮವನ್ನು ವ್ಯಾಪಾರದ ಅನುಭವವನ್ನು ವಿದ್ಯಾರ್ಥಿಗಳಿಗೆ ತಿಳಿಯಲು ಉತ್ತಮ ಅವಕಾಶ ಎಂದು ಶ್ಲಾಘಿಸಿದರು. ವಿದ್ಯಾರ್ಥಿಗಳ ಆಸಕ್ತಿ ಭರಿತ ವ್ಯಾಪಾರಕ್ಕೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಸ್ವಾಗತಿಸಿ ಧನ್ಯವಾದವಿತ್ತರು. ಕಾರ್ಯಕ್ರಮದಲ್ಲಿ ಸಿದ್ದ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ (ಕೇಂದ್ರ ಪಠ್ಯಕ್ರಮ) ಇದರ ಚಿತ್ರಕಲಾ ಶಿಕ್ಷಕರಾಗಿರುವ ರವಿಚಂದ್ರ, ಶಾಲಾ‌ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ಶಾಲಾ ವಿದ್ಯಾರ್ಥಿಗಳು ಪ್ರತ್ಯಕ್ಷದರ್ಶಿಗಳಾಗಿದ್ದರು.

Related posts

ಎಕ್ಸೆಲ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಂದ ರಾಷ್ಟ್ರೀಯ ವಿಜ್ಞಾನ ಒಲಿಂಪಿಯಾಡ್‌ನಲ್ಲಿ ಅಭೂತಪೂರ್ವ ಸಾಧನೆ

Suddi Udaya

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯ ಅಂಗನವಾಡಿ, ಶಾಲೆಗಳಿಗೆ ಸಾವಯವ ಗೊಬ್ಬರ ವಿತರಣೆ

Suddi Udaya

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿಗೆ ಶೇ.98.31 ಫಲಿತಾಂಶ

Suddi Udaya

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಕನ್ಯಾಡಿ ಸ್ವಾಮೀಜಿಯವರಿಂದ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಡಿ.13ರಂದು ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!