25.9 C
ಪುತ್ತೂರು, ಬೆಳ್ತಂಗಡಿ
August 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು: ಕುಂಭಶ್ರೀ ಶಾಲೆಯ ಬಳಿ ಕಾರು ಹಾಗೂ ರಿಕ್ಷಾ ನಡುವೆ ಅಪಘಾತ: ರಿಕ್ಷಾ ಚಾಲಕನಿಗೆ ಗಾಯ

ವೇಣೂರು : ಇಲ್ಲಿಯ ಕುಂಭಶ್ರೀ ಶಾಲೆಯ ಬಳಿ ಕಾರು ಹಾಗೂ ರಿಕ್ಷಾ ನಡುವೆ ಅಪಘಾತವಾಗಿ ರಿಕ್ಷಾ ಚಾಲಕನಿಗೆ ಗಾಯವಾದ ಘಟನೆ ಎ.3 ರಂದು ನಡೆದಿದೆ.

ಘಟನೆ ವಿವರ:ಗುರುವಾಯನಕೆರೆ – ವೇಣೂರು- ಮೂಡಬಿದ್ರೆ ರಾಜ್ಯ ಹೆದ್ದಾರಿ ರಸ್ತೆಯಲ್ಲಿ ವೇಣೂರು ಕಡೆಯಿಂದ ಕಾರು ಅದರ ಚಾಲಕ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಲಾರಿಯೊಂದನ್ನು ಓವರ್ ಟೇಕ್‌ ಮಾಡಿಕೊಂಡು ಒಮ್ಮೆಲೆ ರಸ್ತೆಯ ರಾಂಗ್ ಸೈಡಿಗೆ ಚಲಾಯಿಸಿ ಎದುರಿನಿಂದ ಅಂದರೆ ಗುರುವಾಯನಕೆರೆ ಕಡೆಯಿಂದ ಪ್ರಯಾಣಿಸುತ್ತಿದ್ದ ಆಟೋರಿಕ್ಷಾಕ್ಕೆ ರಭಸದಿಂದ ಡಿಕ್ಕಿ ಹೊಡೆದು ಬಳಿಕ ಕಾರು ಚಾಲಕನ ಹತೋಟಿ ತಪ್ಪಿ ರಸ್ತೆ ಬದಿ ಮಗುಚಿ ಬಿದ್ದು, ವಾಹನಗಳೆರಡೂ ಜಖಂಗೊಂಡಿದ್ದು, ಆಟೋರಿಕ್ಷಾದಲ್ಲಿದ್ದ ಚಾಲಕ ನೌಶಾದ್‌ ರವರ ಹಣೆಗೆ, ಕೈಗಳಿಗೆ ರಕ್ತಗಾಯ ಹಾಗೂ ಸೊಂಟಕ್ಕೆ ಗುದ್ದಿದ ನೋವು ಗಾಯಗಳಾಗಿ ಮೂಡಬಿದ್ರೆ ಆಳ್ವಾಸ್‌ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆ ಬಗ್ಗೆ ಮಂಗಳೂರು ಹೈಲ್ಯಾಂಡ್‌ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿರುತ್ತಾರೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಕ್ಯಾಂಟಿನ್ ಒಳಗಡೆ ವೇಶ್ಯಾವಟಿಕೆ ದಂಧೆ ಪ್ರಕರಣ: ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ

Suddi Udaya

ನಾರಾವಿ: ಮಧುವನ ಕಾಂಪ್ಲೆಕ್ಸ್ ನಲ್ಲಿ ವಕ್ರಾಂಗಿ ಯುಪಿಐ ಮಿನಿ ಎಟಿಎಂ ಕೇಂದ್ರ ಶುಭಾರಂಭ

Suddi Udaya

ವಿಧಾನಸಭೆ ಚುನಾವಣೆ ಹಿನ್ನೆಲೆ ವಿವಿಧ ಚೆಕ್ ಪೋಸ್ಟ್ ಗಳಿಗೆ ಮತ್ತು ನಕ್ಸಲ್ ಪೀಡಿತ ಪ್ರದೇಶಗಳಿಗೆಭೇಟಿ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ನೂತನ ಸಭಾಭವನದ ಉದ್ಘಾಟನೆ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya
error: Content is protected !!