May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು: ಕುಂಭಶ್ರೀ ಶಾಲೆಯ ಬಳಿ ಕಾರು ಹಾಗೂ ರಿಕ್ಷಾ ನಡುವೆ ಅಪಘಾತ: ರಿಕ್ಷಾ ಚಾಲಕನಿಗೆ ಗಾಯ

ವೇಣೂರು : ಇಲ್ಲಿಯ ಕುಂಭಶ್ರೀ ಶಾಲೆಯ ಬಳಿ ಕಾರು ಹಾಗೂ ರಿಕ್ಷಾ ನಡುವೆ ಅಪಘಾತವಾಗಿ ರಿಕ್ಷಾ ಚಾಲಕನಿಗೆ ಗಾಯವಾದ ಘಟನೆ ಎ.3 ರಂದು ನಡೆದಿದೆ.

ಘಟನೆ ವಿವರ:ಗುರುವಾಯನಕೆರೆ – ವೇಣೂರು- ಮೂಡಬಿದ್ರೆ ರಾಜ್ಯ ಹೆದ್ದಾರಿ ರಸ್ತೆಯಲ್ಲಿ ವೇಣೂರು ಕಡೆಯಿಂದ ಕಾರು ಅದರ ಚಾಲಕ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಲಾರಿಯೊಂದನ್ನು ಓವರ್ ಟೇಕ್‌ ಮಾಡಿಕೊಂಡು ಒಮ್ಮೆಲೆ ರಸ್ತೆಯ ರಾಂಗ್ ಸೈಡಿಗೆ ಚಲಾಯಿಸಿ ಎದುರಿನಿಂದ ಅಂದರೆ ಗುರುವಾಯನಕೆರೆ ಕಡೆಯಿಂದ ಪ್ರಯಾಣಿಸುತ್ತಿದ್ದ ಆಟೋರಿಕ್ಷಾಕ್ಕೆ ರಭಸದಿಂದ ಡಿಕ್ಕಿ ಹೊಡೆದು ಬಳಿಕ ಕಾರು ಚಾಲಕನ ಹತೋಟಿ ತಪ್ಪಿ ರಸ್ತೆ ಬದಿ ಮಗುಚಿ ಬಿದ್ದು, ವಾಹನಗಳೆರಡೂ ಜಖಂಗೊಂಡಿದ್ದು, ಆಟೋರಿಕ್ಷಾದಲ್ಲಿದ್ದ ಚಾಲಕ ನೌಶಾದ್‌ ರವರ ಹಣೆಗೆ, ಕೈಗಳಿಗೆ ರಕ್ತಗಾಯ ಹಾಗೂ ಸೊಂಟಕ್ಕೆ ಗುದ್ದಿದ ನೋವು ಗಾಯಗಳಾಗಿ ಮೂಡಬಿದ್ರೆ ಆಳ್ವಾಸ್‌ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆ ಬಗ್ಗೆ ಮಂಗಳೂರು ಹೈಲ್ಯಾಂಡ್‌ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿರುತ್ತಾರೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಗ್ರಾಮಕರಣಿಕ ಮಹೇಶ್ ಗೆ ಜೈಲು ಶಿಕ್ಷೆ

Suddi Udaya

ಸುದೆಮುಗೇರು ವೃದ್ಧಾಶ್ರಮದಲ್ಲಿ. ದೇಶದ ಪ್ರಥಮ ಮಹಿಳಾ ಪ್ರಧಾನಿ , ಭೂಸುಧಾರಣಾ ಕಾಯ್ದೆಯ ರೂವಾರಿ ಶ್ರೀಮತಿ ಇಂದಿರಾ ಗಾಂಧಿಯವರ ಜನ್ಮದಿನಾಚರಣೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜು : ಜೆ ಇ ಇ ಮೈನ್ಸ್ ನಲ್ಲಿ ಅತ್ಯುತ್ತಮ ಫಲಿತಾಂಶ

Suddi Udaya

ಬೆನಕ ಆಸ್ಪತ್ರೆಯಿಂದ ಡಾ| ಕೇಶವ ರವರಿಗೆ ಗೌರವಾರ್ಪಣೆ

Suddi Udaya

ಖಿಳ್ರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ಬೆಳ್ತಂಗಡಿ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ನೀರಿನಲ್ಲಿ ಕೊಚ್ಚಿ ಹೋದ ಬೈಕ್ ಪ್ರಕರಣ: ಸ್ಥಳಕ್ಕೆ ರಕ್ಷಿತ್ ಶಿವರಾಂ ಭೇಟಿ, ಪರಿಶೀಲನೆ

Suddi Udaya
error: Content is protected !!