23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ತೆಕ್ಕಾರು: ಭಟ್ರಬೈಲು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ದೇವರ ಮೂರ್ತಿಯ ಪುರಪ್ರವೇಶದ ಅದ್ದೂರಿ ಮೆರವಣಿಗೆ

ಬೆಳ್ತಂಗಡಿ: ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ದೇವರ ಮೂರ್ತಿಯ ಪುರಪ್ರವೇಶದ ಮೆರವಣಿಗೆಗೆ ಎ.5 ರಂದು ಬ್ರಹ್ಮಕಲಸ ಸಮಿತಿ ಅಧ್ಯಕ್ಷ ಶಶಿಧರ ಶೆಟ್ಟಿ ಗುರುವಾಯನಕೆರೆ ಬರೋಡ ನಿವಾಸದಲ್ಲಿ ಕಾಶಿ ಶೆಟ್ಟಿ ನವಶಕ್ತಿ ರವರು ಚಾಲನೆ ನೀಡಿದರು.

ಎ.4 ರಂದು ಶುಕ್ರವಾರ ಕಾರ್ಕಳದಿಂದ ಶ್ರೀ ಗೋಪಾಲಕೃಷ್ಣ ದೇವರ ಮೂರ್ತಿಯು ಬ್ರಹ್ಮಕಲಸದ ಸಮಿತಿ ಅಧ್ಯಕ್ಷ ಶಶಿಧರ ಶೆಟ್ಟಿ ಬರೋಡರ ನಿವಾಸಕ್ಕೆ ಬಂದು ಅದೇ ದಿನ ರಾತ್ರಿ ಗಂಟೆ 7 ರಿಂದ ಸಾಂಸ್ಕೃತಿಕ ಕಾರ್ಯಕ್ರಮವು ಜರಗಿತು.

ಸಮೀಪಿಸುತ್ತಿರುವ ಬ್ರಹ್ಮಕಲಶೋತ್ಸವದ ದಿನ:
ತೆಕ್ಕಾರು ಗ್ರಾಮದ ಭಟ್ರಬೈಲು ದೇವರಗುಡ್ಡೆ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಜೀರ್ಣೋದ್ಧಾರ ಕಾರ್ಯ ನಡೆಯುತ್ತಿದ್ದು ಕೆಲವೇ ದಿನಗಳಲ್ಲಿ ಬ್ರಹ್ಮಕಲಶೋತ್ಸವ ನಡೆಯಲಿದೆ. ಕಳೆದ ವರ್ಷದಲ್ಲಿ ಶಿಲಾನ್ಯಾಸ ನೆರವೇರಿ ಇದೀಗ ಜೀರ್ಣೋದ್ಧಾರ ಕಾರ್ಯಗಳು ಭರದಿಂದ ಸಾಗುತ್ತಿದ್ದು ಇನ್ನೇನು ಕೆಲವೇ ದಿನಗಳಲ್ಲಿ ಬ್ರಹ್ಮಕಲಶೋತ್ಸವದ ಗತವೈಭವಕ್ಕೆ ಅಣಿಯಾಗಲಿದೆ.

ಅದ್ದೂರಿ ಮೆರವಣಿಗೆ :
ದೇವರ ಮೂರ್ತಿಯನ್ನು ಅದ್ಧೂರಿ ಮೆರವಣಿಗೆಯ ಮುಖಾಂತರ ಗುರುವಾಯನಕೆರೆ, ಗೇರುಕಟ್ಟೆ, ಕುಪ್ಪೆಟ್ಟಿ, ಕರಾಯ, ಉಪ್ಪಿನಂಗಡಿ, ಮಾರ್ಗವಾಗಿ ಬಂದು ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಪೂಜೆ ಗೈದು , ಪೆದಮಲೆ, ಪಿಲಿಗೂಡು, ಸರಳಿಕಟ್ಟೆ, ಹೊಸಮೊಗ್ರು, ಬಾಜಾರ, ನೆಲ್ಲಿಪಲ್ಕೆಯಾಗಿ ಭಟ್ರಬೈಲು ದೇವರಗುಡ್ಡೆ ಕ್ಷೇತ್ರಕ್ಕೆ ಸಾಗಲಿದೆ. ಊರ ಮಧ್ಯೆ ಭಕ್ತರು ದೇವರ ಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸಿದರು. ಚೆಂಡೆ ವಾದ್ಯ, ಉದ್ಘೋಷದ ಮೂಲಕ ಮೆರವಣಿಗೆ ನಡೆಯಿತು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಬ್ರಹ್ಮಕಲಶೋತ್ಸವದ ಸಮಿತಿ ಅಧ್ಯಕ್ಷ ಶಶಿಧರ ಶೆಟ್ಟಿ ಬರೋಡ ನವಶಕ್ತಿ, ಟ್ರಸ್ಟ್ ಅಧ್ಯಕ್ಷ ನಾಗಭೂಷಣ್ ರಾವ್, ತುಕಾರಾಂ ನಾಯಕ, ಬ್ರಹ್ಮಕಲಶೋತ್ಸವದ ಸಮಿತಿ ಗೌರವಾಧ್ಯಕ್ಷರಾದ ಗಣೇಶ್ ರಾವ್ ಕರವಾಳಿ ಕಾಲೇಜು, ಕರುಣಾಕರ ಸುವರ್ಣ , ಯೋಗೀಂದ್ರ ಭಟ್ ಉಳಿ, ಕಾರ್ಯಾಧ್ಯಕ್ಷ ಲಕ್ಷಣ್, ಪ್ರಧಾನ ಕಾರ್ಯದರ್ಶಿ ಪ್ರವೀಣ್ ರೈ, ಕೋಶಾಧಿಕಾರಿ ಅಣ್ಣು ಪೂಜಾರಿ ,

ಪ್ರಮುಖರಾದ ಮಂಜುನಾಥ್ ಸಾಲ್ಯಾನ್, ರಾಜೇಶ್ ಶೆಟ್ಟಿ ನವಶಕ್ತಿ, ರಕ್ಷಿತ್ ಶೆಟ್ಟಿ ಪಣೆಕ್ಕರ, ರಾಜು ಪ್ರಕಾಶ್ ಶೆಟ್ಟಿ ಮದ್ದಡ್ಕ ಸಹಿತ ಮತ್ತಿತರರು ಹಾಗೂ ವಿವಿಧ ಉಪ ಸಮಿತಿಗಳ ಸಂಚಾಲಕರು ಉಪಸ್ಥಿತರಿದ್ದರು.

Related posts

ಜಾರಿಗೆಬೈಲು ಬದ್ರ್ ಜುಮ್ಮಾ ಮಸೀದಿಯ ಅಧ್ಯಕ್ಷರಾಗಿ ಹಾಜಿ ಕೆ.ಎಂ ಅಬೂಬಕ್ಕರ್, ಕಾರ್ಯದರ್ಶಿಯಾಗಿ ಹಾರಿಶ್ ಆಯ್ಕೆ

Suddi Udaya

ರಸ್ತೆಯಲ್ಲೇ ಹರಿದ ಮಳೆ ನೀರು: ಶಾಸಕ ಹರೀಶ್ ಪೂಂಜರಿಂದ ತುರ್ತು ಸ್ಪಂದನೆ , ಚರಂಡಿ ದುರಸ್ತಿ

Suddi Udaya

ಮರೋಡಿ: ಪಾಣಾಲು-ಉಚ್ಚೂರು ಸಂಪರ್ಕ ರಸ್ತೆಗೆ ದಾನಿಗಳಿಂದ ವೃತ್ತ ನಿರ್ಮಾಣ

Suddi Udaya

ಗುರುವಾಯನಕೆರೆ: ಶ್ರೀ ಲಕ್ಷ್ಮಿ ಫ್ಯಾನ್ಸಿಯಲ್ಲಿ ಚಪ್ಪಲ್ ಮೇಲೆ 10-50% ಡಿಸ್ಕೌಂಟ್ ಸೇಲ್

Suddi Udaya

ಸೆ.10: ನಾಲ್ಕೂರು ಯುವಶಕ್ತಿ ಫ್ರೆಂಡ್ಸ್ ನಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಧಾರ್ಮಿಕ ಕಾರ್ಯಕ್ರಮ, ಮುದ್ದು ಕೃಷ್ಣ ಸ್ಪರ್ಧೆ, ವಿವಿಧ ಆಟೋಟ ಸ್ಪರ್ದೆಗಳು

Suddi Udaya

ಮುಂಡಾಜೆ ಮಾಲತಿ ಪ್ರಭು ನಿಧನ

Suddi Udaya
error: Content is protected !!