July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ತೆಕ್ಕಾರು: ಭಟ್ರಬೈಲು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ದೇವರ ಮೂರ್ತಿಯ ಪುರಪ್ರವೇಶದ ಅದ್ದೂರಿ ಮೆರವಣಿಗೆ

ಬೆಳ್ತಂಗಡಿ: ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ದೇವರ ಮೂರ್ತಿಯ ಪುರಪ್ರವೇಶದ ಮೆರವಣಿಗೆಗೆ ಎ.5 ರಂದು ಬ್ರಹ್ಮಕಲಸ ಸಮಿತಿ ಅಧ್ಯಕ್ಷ ಶಶಿಧರ ಶೆಟ್ಟಿ ಗುರುವಾಯನಕೆರೆ ಬರೋಡ ನಿವಾಸದಲ್ಲಿ ಕಾಶಿ ಶೆಟ್ಟಿ ನವಶಕ್ತಿ ರವರು ಚಾಲನೆ ನೀಡಿದರು.

ಎ.4 ರಂದು ಶುಕ್ರವಾರ ಕಾರ್ಕಳದಿಂದ ಶ್ರೀ ಗೋಪಾಲಕೃಷ್ಣ ದೇವರ ಮೂರ್ತಿಯು ಬ್ರಹ್ಮಕಲಸದ ಸಮಿತಿ ಅಧ್ಯಕ್ಷ ಶಶಿಧರ ಶೆಟ್ಟಿ ಬರೋಡರ ನಿವಾಸಕ್ಕೆ ಬಂದು ಅದೇ ದಿನ ರಾತ್ರಿ ಗಂಟೆ 7 ರಿಂದ ಸಾಂಸ್ಕೃತಿಕ ಕಾರ್ಯಕ್ರಮವು ಜರಗಿತು.

ಸಮೀಪಿಸುತ್ತಿರುವ ಬ್ರಹ್ಮಕಲಶೋತ್ಸವದ ದಿನ:
ತೆಕ್ಕಾರು ಗ್ರಾಮದ ಭಟ್ರಬೈಲು ದೇವರಗುಡ್ಡೆ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಜೀರ್ಣೋದ್ಧಾರ ಕಾರ್ಯ ನಡೆಯುತ್ತಿದ್ದು ಕೆಲವೇ ದಿನಗಳಲ್ಲಿ ಬ್ರಹ್ಮಕಲಶೋತ್ಸವ ನಡೆಯಲಿದೆ. ಕಳೆದ ವರ್ಷದಲ್ಲಿ ಶಿಲಾನ್ಯಾಸ ನೆರವೇರಿ ಇದೀಗ ಜೀರ್ಣೋದ್ಧಾರ ಕಾರ್ಯಗಳು ಭರದಿಂದ ಸಾಗುತ್ತಿದ್ದು ಇನ್ನೇನು ಕೆಲವೇ ದಿನಗಳಲ್ಲಿ ಬ್ರಹ್ಮಕಲಶೋತ್ಸವದ ಗತವೈಭವಕ್ಕೆ ಅಣಿಯಾಗಲಿದೆ.

ಅದ್ದೂರಿ ಮೆರವಣಿಗೆ :
ದೇವರ ಮೂರ್ತಿಯನ್ನು ಅದ್ಧೂರಿ ಮೆರವಣಿಗೆಯ ಮುಖಾಂತರ ಗುರುವಾಯನಕೆರೆ, ಗೇರುಕಟ್ಟೆ, ಕುಪ್ಪೆಟ್ಟಿ, ಕರಾಯ, ಉಪ್ಪಿನಂಗಡಿ, ಮಾರ್ಗವಾಗಿ ಬಂದು ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಪೂಜೆ ಗೈದು , ಪೆದಮಲೆ, ಪಿಲಿಗೂಡು, ಸರಳಿಕಟ್ಟೆ, ಹೊಸಮೊಗ್ರು, ಬಾಜಾರ, ನೆಲ್ಲಿಪಲ್ಕೆಯಾಗಿ ಭಟ್ರಬೈಲು ದೇವರಗುಡ್ಡೆ ಕ್ಷೇತ್ರಕ್ಕೆ ಸಾಗಲಿದೆ. ಊರ ಮಧ್ಯೆ ಭಕ್ತರು ದೇವರ ಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸಿದರು. ಚೆಂಡೆ ವಾದ್ಯ, ಉದ್ಘೋಷದ ಮೂಲಕ ಮೆರವಣಿಗೆ ನಡೆಯಿತು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಬ್ರಹ್ಮಕಲಶೋತ್ಸವದ ಸಮಿತಿ ಅಧ್ಯಕ್ಷ ಶಶಿಧರ ಶೆಟ್ಟಿ ಬರೋಡ ನವಶಕ್ತಿ, ಟ್ರಸ್ಟ್ ಅಧ್ಯಕ್ಷ ನಾಗಭೂಷಣ್ ರಾವ್, ತುಕಾರಾಂ ನಾಯಕ, ಬ್ರಹ್ಮಕಲಶೋತ್ಸವದ ಸಮಿತಿ ಗೌರವಾಧ್ಯಕ್ಷರಾದ ಗಣೇಶ್ ರಾವ್ ಕರವಾಳಿ ಕಾಲೇಜು, ಕರುಣಾಕರ ಸುವರ್ಣ , ಯೋಗೀಂದ್ರ ಭಟ್ ಉಳಿ, ಕಾರ್ಯಾಧ್ಯಕ್ಷ ಲಕ್ಷಣ್, ಪ್ರಧಾನ ಕಾರ್ಯದರ್ಶಿ ಪ್ರವೀಣ್ ರೈ, ಕೋಶಾಧಿಕಾರಿ ಅಣ್ಣು ಪೂಜಾರಿ ,

ಪ್ರಮುಖರಾದ ಮಂಜುನಾಥ್ ಸಾಲ್ಯಾನ್, ರಾಜೇಶ್ ಶೆಟ್ಟಿ ನವಶಕ್ತಿ, ರಕ್ಷಿತ್ ಶೆಟ್ಟಿ ಪಣೆಕ್ಕರ, ರಾಜು ಪ್ರಕಾಶ್ ಶೆಟ್ಟಿ ಮದ್ದಡ್ಕ ಸಹಿತ ಮತ್ತಿತರರು ಹಾಗೂ ವಿವಿಧ ಉಪ ಸಮಿತಿಗಳ ಸಂಚಾಲಕರು ಉಪಸ್ಥಿತರಿದ್ದರು.

Related posts

ಉಜಿರೆ: ಹಳೆಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ: ಅರ್ಸುಲೈನ್ ಧರ್ಮಭಗಿನಿ ಸಿ. ಎಮಿಲ್ಡಾ ಕ್ರಾಸ್ತಾ ನಿಧನ

Suddi Udaya

ಬೆಳ್ತಂಗಡಿ: ಲಯನ್ಸ್ ಸೇವಾ ಭವನ ನಿರ್ಮಾಣಡಾ.ಡಿ. ವೀರೇಂದ್ರ ಹೆಗ್ಗಡೆಯವರು ನೀಡಿದ ಸಹಾಯಧನದ ಮಂಜೂರಾತಿ ಪತ್ರ ಹಸ್ತಾಂತರ

Suddi Udaya

ಧರ್ಮಸ್ಥಳ ಪ್ರಕರಣದ ಬಗ್ಗೆ ಡಾ| ವೀರೇಂದ್ರ ಹೆಗ್ಗಡೆಯವರ ಮೊದಲ ಪ್ರತಿಕ್ರಿಯೆ: ಆರೋಪಗಳು ಆಧಾರ ರಹಿತ, ತನಿಖೆಯಿಂದ ಸತ್ಯ ಹೊರ ಬರಲಿದೆ: ಡಾ| ಹೆಗ್ಗಡೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಸೌತಡ್ಕ ಶ್ರೀ ಕಾಮಧೇನು ಗೋಶಾಲೆಗೆ ಡಾ. ಪ್ರಸನ್ನ ಹೆಬ್ಬಾರ್ ಭೇಟಿ

Suddi Udaya
error: Content is protected !!