31.2 C
ಪುತ್ತೂರು, ಬೆಳ್ತಂಗಡಿ
April 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಪ್ರೇರಣಾ ಶಿಬಿರದ ಉದ್ಘಾಟನೆ

ಸುಲ್ಕೇರಿ : ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ , ಸುಲ್ಕೇರಿ ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲೆ , ಸುಲ್ಕೇರಿ ಶ್ರೀರಾಮ ಪ್ರೌಢ ಶಾಲೆ ಸುಲ್ಕೇರಿ ಮಾತೃ ಸಂಸ್ಥೆ: ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು, 2024 -2025 ನೇ ಶೈಕ್ಷಣಿಕ ವರ್ಷದ ” ಪ್ರೇರಣಾ ಶಿಬಿರ ಎ.03 ರಿಂದ ಎ. 07 ರ ತನಕ ನಡೆಯಲಿದ್ದು ಇದರ ಉದ್ಘಾಟನಾ ಕಾರ್ಯಕ್ರಮವು ಎ. 03 ರಂದು ಶ್ರೀರಾಮ ಶಾಲೆ ಸುಲ್ಕೇರಿಯ ಶ್ರೀರಾಮ ಪ್ರಾರ್ಥನಾ ಮಂದಿರದಲ್ಲಿ ನಡೆಯಿತು.

ವಿದ್ಯಾರ್ಥಿಗಳಲ್ಲಿ ಸಕಾರಾತ್ಮಕ ಚಿಂತನೆಯನ್ನು ಬೆಳೆಸಲು , ವ್ಯಕ್ತಿತ್ವ ವಿಕಸನಕ್ಕಾಗಿ, ಭಾರತೀಯ ಸಂಸ್ಕೃತಿಯ ಅರಿವು ಮೂಡಿಸುವ ದೃಷ್ಟಿಯಿಂದ ವಿವಿಧ ವಿಷಯಗಳು ಹಾಗೂ ಚಟುವಟಿಕೆಗಳ ಮೂಲಕ ಪ್ರೇರಣೆ ಸಿಗುವಂತಾಗಲು ಆಯೋಜಿಸಿಕೊಂಡ ಈ ಶಿಬಿರವನ್ನು ಶಾಲಾ ಆಡಳಿತ ಮಂಡಳಿಯ ಗೌರವಾಧ್ಯಕ್ಷ ಗಣೇಶ್ ಹೆಗ್ಡೆ ಉದ್ಘಾಟಿಸಿದರು.

ಅಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ರಾಜು ಪೂಜಾರಿ ವಹಿಸಿಕೊಂಡಿದ್ದರು. ವೇದಿಕೆಯಲ್ಲಿ ಶ್ರೀ ರಾಮ ಪ್ರೌಢ ಶಾಲೆ , ಪಟ್ಟೂರು ಇಲ್ಲಿನ ಮುಖ್ಯ ಗುರುಗಳಾದ ಚಂದ್ರಶೇಖರ ಶೇಠ್ , ಶ್ರೀ ರಾಮ ಪ್ರೌಢಶಾಲೆ ಸುಲ್ಕೇರಿಯ ಮುಖ್ಯಗುರುಗಳಾದ ಪ್ರಮೋದ್ ಕುಮಾರ್ , ಶಿಬಿರ ಸಂಯೋಜಕರಾದ ಸತೀಶ್ ಕುಮಾರ್ ಎನ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ 9 ನೇ ತರಗತಿ ಕು| ಆದ್ಯಾ ಸ್ವಾಗತಿಸಿ , 7ನೇ ತರಗತಿಯ ಕು| ಮನ್ವಿತಾ ಧನ್ಯವಾದವಿತ್ತರು. 9ನೇತರಗತಿಯ ಕು| ದೀಕ್ಷಾ ಕಾರ್ಯಕ್ರಮ ನಿರೂಪಿಸಿದರು.

Related posts

ಮೊಗ್ರು: ಮುಗೇರಡ್ಕ ಕಿ.ಪ್ರಾ. ಶಾಲೆಯ ಬಿಸಿಯೂಟ ಕೊಠಡಿಗೆ ಬಂದಾರು ಗ್ರಾ.ಪಂ. ವತಿಯಿಂದ ಶೀಟ್ ಅಳವಡಿಕೆ

Suddi Udaya

ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕ ವತಿಯಿಂದ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಸಾಧನೆಗೈದ ಮುಸ್ಕಾನ್ ಕೌಸರ್ ರಿಗೆ ವಿದ್ಯಾರ್ಥಿ ವೇತನ

Suddi Udaya

ಶ್ರೀ ರಾಮ್ ಫೈನಾನ್ಸ್ ಲಿಮಿಟೆಡ್ ಬೆಳ್ತಂಗಡಿ ಇದರ ನೂತನ ಕಛೇರಿ ಉದ್ಘಾಟನಾ ಸಮಾರಂಭ

Suddi Udaya

ಎಂಡೋಸಲ್ಫಾನ್ ವಿರುದ್ಧ ಹೋರಾಟಗಾರರಾದ ಕೊಕ್ಕಡದ ಶ್ರೀಧರ ಗೌಡ ಕೆಂಗುಡೇಲುರವರಿಗೆ “ವಿಕ ಹಿರೋಸ್” ಪ್ರಶಸ್ತಿ

Suddi Udaya

ರಾಜ್ಯಮಟ್ಟದ ಶ್ರೀ ಭಗವದ್ಗೀತಾ ಸ್ಪರ್ಧೆ: ಉಜಿರೆಯ ಎಸ್ ಡಿಎಂ ಪ.ಪೂ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದಲ್ಲಿ 78 ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!