March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಪ್ರೇರಣಾ ಶಿಬಿರದ ಉದ್ಘಾಟನೆ

ಸುಲ್ಕೇರಿ : ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ , ಸುಲ್ಕೇರಿ ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲೆ , ಸುಲ್ಕೇರಿ ಶ್ರೀರಾಮ ಪ್ರೌಢ ಶಾಲೆ ಸುಲ್ಕೇರಿ ಮಾತೃ ಸಂಸ್ಥೆ: ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು, 2024 -2025 ನೇ ಶೈಕ್ಷಣಿಕ ವರ್ಷದ ” ಪ್ರೇರಣಾ ಶಿಬಿರ ಎ.03 ರಿಂದ ಎ. 07 ರ ತನಕ ನಡೆಯಲಿದ್ದು ಇದರ ಉದ್ಘಾಟನಾ ಕಾರ್ಯಕ್ರಮವು ಎ. 03 ರಂದು ಶ್ರೀರಾಮ ಶಾಲೆ ಸುಲ್ಕೇರಿಯ ಶ್ರೀರಾಮ ಪ್ರಾರ್ಥನಾ ಮಂದಿರದಲ್ಲಿ ನಡೆಯಿತು.

ವಿದ್ಯಾರ್ಥಿಗಳಲ್ಲಿ ಸಕಾರಾತ್ಮಕ ಚಿಂತನೆಯನ್ನು ಬೆಳೆಸಲು , ವ್ಯಕ್ತಿತ್ವ ವಿಕಸನಕ್ಕಾಗಿ, ಭಾರತೀಯ ಸಂಸ್ಕೃತಿಯ ಅರಿವು ಮೂಡಿಸುವ ದೃಷ್ಟಿಯಿಂದ ವಿವಿಧ ವಿಷಯಗಳು ಹಾಗೂ ಚಟುವಟಿಕೆಗಳ ಮೂಲಕ ಪ್ರೇರಣೆ ಸಿಗುವಂತಾಗಲು ಆಯೋಜಿಸಿಕೊಂಡ ಈ ಶಿಬಿರವನ್ನು ಶಾಲಾ ಆಡಳಿತ ಮಂಡಳಿಯ ಗೌರವಾಧ್ಯಕ್ಷ ಗಣೇಶ್ ಹೆಗ್ಡೆ ಉದ್ಘಾಟಿಸಿದರು.

ಅಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ರಾಜು ಪೂಜಾರಿ ವಹಿಸಿಕೊಂಡಿದ್ದರು. ವೇದಿಕೆಯಲ್ಲಿ ಶ್ರೀ ರಾಮ ಪ್ರೌಢ ಶಾಲೆ , ಪಟ್ಟೂರು ಇಲ್ಲಿನ ಮುಖ್ಯ ಗುರುಗಳಾದ ಚಂದ್ರಶೇಖರ ಶೇಠ್ , ಶ್ರೀ ರಾಮ ಪ್ರೌಢಶಾಲೆ ಸುಲ್ಕೇರಿಯ ಮುಖ್ಯಗುರುಗಳಾದ ಪ್ರಮೋದ್ ಕುಮಾರ್ , ಶಿಬಿರ ಸಂಯೋಜಕರಾದ ಸತೀಶ್ ಕುಮಾರ್ ಎನ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ 9 ನೇ ತರಗತಿ ಕು| ಆದ್ಯಾ ಸ್ವಾಗತಿಸಿ , 7ನೇ ತರಗತಿಯ ಕು| ಮನ್ವಿತಾ ಧನ್ಯವಾದವಿತ್ತರು. 9ನೇತರಗತಿಯ ಕು| ದೀಕ್ಷಾ ಕಾರ್ಯಕ್ರಮ ನಿರೂಪಿಸಿದರು.

Related posts

ಡಿ.27: ಗುರುವಾಯನಕೆರೆ 37 ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ ಮತ್ತು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಎ.14 ರವರೆಗೆ ಮುಳಿಯ ಜ್ಯುವೆಲ್ಸ್‌ನಲ್ಲಿ ಡೈಮಂಡ್ ಹಬ್ಬ

Suddi Udaya

ವೇಣೂರಿನಲ್ಲಿ ಕ್ರಿಸ್ಮಸ್ ಸೌಹಾರ್ದ ಕೂಟ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಾರ್ಷಿಕ ವಿಷು ಜಾತ್ರಾ ಮಹೋತ್ಸವ ಸಂಪನ್ನ

Suddi Udaya

ಕಳೆಂಜ: ನಂದಗೋಕುಲ ದೀಪೋತ್ಸವ ಕಾರ್ಯಕ್ರಮ ಮುಂದೂಡಿಕೆ

Suddi Udaya

ಬೆಳಾಲು ಗೌಡರ ಯಾನೆ ಒಕ್ಕಲಿಗರ ವಾರ್ಷಿಕೋತ್ಸವ

Suddi Udaya
error: Content is protected !!