July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಪ್ರೇರಣಾ ಶಿಬಿರದ ಉದ್ಘಾಟನೆ

ಸುಲ್ಕೇರಿ : ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ , ಸುಲ್ಕೇರಿ ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲೆ , ಸುಲ್ಕೇರಿ ಶ್ರೀರಾಮ ಪ್ರೌಢ ಶಾಲೆ ಸುಲ್ಕೇರಿ ಮಾತೃ ಸಂಸ್ಥೆ: ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು, 2024 -2025 ನೇ ಶೈಕ್ಷಣಿಕ ವರ್ಷದ ” ಪ್ರೇರಣಾ ಶಿಬಿರ ಎ.03 ರಿಂದ ಎ. 07 ರ ತನಕ ನಡೆಯಲಿದ್ದು ಇದರ ಉದ್ಘಾಟನಾ ಕಾರ್ಯಕ್ರಮವು ಎ. 03 ರಂದು ಶ್ರೀರಾಮ ಶಾಲೆ ಸುಲ್ಕೇರಿಯ ಶ್ರೀರಾಮ ಪ್ರಾರ್ಥನಾ ಮಂದಿರದಲ್ಲಿ ನಡೆಯಿತು.

ವಿದ್ಯಾರ್ಥಿಗಳಲ್ಲಿ ಸಕಾರಾತ್ಮಕ ಚಿಂತನೆಯನ್ನು ಬೆಳೆಸಲು , ವ್ಯಕ್ತಿತ್ವ ವಿಕಸನಕ್ಕಾಗಿ, ಭಾರತೀಯ ಸಂಸ್ಕೃತಿಯ ಅರಿವು ಮೂಡಿಸುವ ದೃಷ್ಟಿಯಿಂದ ವಿವಿಧ ವಿಷಯಗಳು ಹಾಗೂ ಚಟುವಟಿಕೆಗಳ ಮೂಲಕ ಪ್ರೇರಣೆ ಸಿಗುವಂತಾಗಲು ಆಯೋಜಿಸಿಕೊಂಡ ಈ ಶಿಬಿರವನ್ನು ಶಾಲಾ ಆಡಳಿತ ಮಂಡಳಿಯ ಗೌರವಾಧ್ಯಕ್ಷ ಗಣೇಶ್ ಹೆಗ್ಡೆ ಉದ್ಘಾಟಿಸಿದರು.

ಅಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ರಾಜು ಪೂಜಾರಿ ವಹಿಸಿಕೊಂಡಿದ್ದರು. ವೇದಿಕೆಯಲ್ಲಿ ಶ್ರೀ ರಾಮ ಪ್ರೌಢ ಶಾಲೆ , ಪಟ್ಟೂರು ಇಲ್ಲಿನ ಮುಖ್ಯ ಗುರುಗಳಾದ ಚಂದ್ರಶೇಖರ ಶೇಠ್ , ಶ್ರೀ ರಾಮ ಪ್ರೌಢಶಾಲೆ ಸುಲ್ಕೇರಿಯ ಮುಖ್ಯಗುರುಗಳಾದ ಪ್ರಮೋದ್ ಕುಮಾರ್ , ಶಿಬಿರ ಸಂಯೋಜಕರಾದ ಸತೀಶ್ ಕುಮಾರ್ ಎನ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ 9 ನೇ ತರಗತಿ ಕು| ಆದ್ಯಾ ಸ್ವಾಗತಿಸಿ , 7ನೇ ತರಗತಿಯ ಕು| ಮನ್ವಿತಾ ಧನ್ಯವಾದವಿತ್ತರು. 9ನೇತರಗತಿಯ ಕು| ದೀಕ್ಷಾ ಕಾರ್ಯಕ್ರಮ ನಿರೂಪಿಸಿದರು.

Related posts

ಚಾತುರ್ಮಾಸ್ಯ ವ್ರತದಲ್ಲಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜೀಯವರನ್ನುಭೇಟಿಯಾಗಿ ಆಶೀರ್ವಾದ ಪಡೆದ ಸಂಸದ ವಿಶ್ವೇಶ್ವರ ಹೆಗ್ಡೆ ಕಾಗೇರಿ, ಕುಮುಟ ಶಾಸಕ ದಿನಕರ ಶೆಟ್ಟಿ

Suddi Udaya

ಆಟೋ ರಿಕ್ಷಾದಲ್ಲಿ ಬಾಡಿಗೆಗೆ ಬಂದ ಚಿಕ್ಕಮಗಳೂರು ನಿವಾಸಿಯ ಮೇಲೆ ಹಲ್ಲೆ , ದರೋಡೆ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆಯಲ್ಲಿ ವಿಶೇಷ ಚೇತನರ ಗ್ರಾಮ ಸಭೆ

Suddi Udaya

ಕೊಲೆಗಾರರಿಗೆ ಕಠಿಣ ಶಿಕ್ಷೆ ಆಗಲಿ, ಜಿಲ್ಲೆಯ ಶಾಂತಿ ಸೌಹಾರ್ದತೆ ಮತ್ತೆ ಮರುಕಳಿಸಲಿ: ರಕ್ಷಿತ್ ಶಿವರಾಂ

Suddi Udaya

ತೆಂಕಕಾರಂದೂರು: ವರ ಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ, ಅಧ್ಯಕ್ಷರಾಗಿ ರೂಪಲತಾ ಆಯ್ಕೆ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ “ಸ್ಕ್ರ್ಯಾಚ್ ಗೇಮಿಂಗ್ ಕ್ರಾಫ್ಟಿಂಗ್ ಸ್ಪರ್ಧೆ”

Suddi Udaya
error: Content is protected !!