23.3 C
ಪುತ್ತೂರು, ಬೆಳ್ತಂಗಡಿ
May 23, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕರಾಟೆ ತರಬೇತಿ

ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಪಠ್ಯೇತರ ಚಟುವಟಿಕೆಯಲ್ಲಿ ಒಂದಾದ ಕರಾಟೆ ತರಬೇತಿಯ ವಿದ್ಯಾರ್ಥಿಗಳಿಗೆ ಬೆಲ್ಟ್ ಪ್ರಮೋಷನ್ ಪರೀಕ್ಷೆಯು ಶಾಲಾ ಆವರಣದಲ್ಲಿ ನಡೆಸಲಾಗಿದ್ದು, ತೇರ್ಗಡೆ ಆದ ವಿದ್ಯಾರ್ಥಿಗಳಿಗೆ ಕಲರ್ ಬೆಲ್ಟ್ ಮತ್ತು ಪ್ರಮಾಣ ಪತ್ರ ವಿತರಣೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಪಠ್ಯೇತರ ಚಟುವಟಿಕೆಗಳ ಸಂಯೋಜಕ ಶಿಕ್ಷಕಿ ಶ್ರೀಮತಿ ಮಾಲಿನಿ ಜೈನ್ “ವಿದ್ಯಾರ್ಥಿಗಳಿಗೆ ಪಠ್ಯೇತರ ಚಟುವಟಿಕೆಯಿಂದ ಮಾನಸಿಕ ಹಾಗೂ ಬೌಧಿಕ ಬೆಳವಣಿಗೆ ಉತ್ತಮಗೊಳ್ಳುವುದು” ಎಂದು ಹಿತನುಡಿದು, ಸ್ಪರ್ಧೆಗಳಿಗೆ ತಯಾರಾಗುವ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿ ಸೀನಿಯರ್ ಬೆಲ್ಟ್ ಪಡೆದ ಎಲ್ಲಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಕರಾಟೆ ಮುಖ್ಯ ತರಬೇತಿಗಾರ ಸೆನ್ಸಾಯಿ ವಸಂತ.ಕೆ ಬಂಗೇರ ಕರಾಟೆಯಿಂದ ವ್ಯಕ್ತಿಯ ಬದಲಾವಣೆ ಆರೋಗ್ಯ ರಕ್ಷಣೆ ದೇಹ ರಕ್ಷಣೆ ಲಾಭಗಳನ್ನು ಸವಿವರವಾಗಿ ತಿಳಿಸಿದರು. ಕಾರ್ಯಕ್ರಮದಲ್ಲಿ ಕರಾಟೆ ವಿದ್ಯಾರ್ಥಿಗಳ ಪೋಷಕರು ಪಾಲ್ಗೊಂಡಿದ್ದರು. ಶಿಕ್ಷಕಿ ರಾಜಮ್ಮ ಕಾರ್ಯಕ್ರಮ ನಿರೂಪಿಸಿದರು.

Related posts

ಮಂಗಳೂರು ಭವಿಷ್ಯ ನಿಧಿ ಕಚೇರಿಗೆ ಪಿ.ಎಫ್. ಬೋರ್ಡನ ಕೇಂದ್ರೀಯ ಸದಸ್ಯ ಹಿರಣ್ಮಯಿ ಪಾಂಡ್ಯ ಭೇಟಿ

Suddi Udaya

ಶ್ರೀ ದುರ್ಗಾ ಟೆಕ್ಸ್ ಟೈಲ್ ನಲ್ಲಿ ಮಾನ್ಸೂನ್ ದರ ಕಡಿತ ಮಾರಾಟ,10% ರಿಂದ 50% ಡಿಸ್ಕೌಂಟ್ ಸೇಲ್

Suddi Udaya

ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಯವರ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆಯಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಬಿಜೆಪಿ ಬೆಳ್ತಂಗಡಿ ಮಂಡಲ

Suddi Udaya

ಹದಗೆಟ್ಟ ರಸ್ತೆ: ಮಡಂತ್ಯಾರು ಸ್ಪಂದನ ಆಟೋ ಚಾಲಕ ಮಾಲಕರ ಸಂಘದ ಸದಸ್ಯರಿಂದ ರಸ್ತೆ ದುರಸ್ತಿ

Suddi Udaya

ಬೆಳ್ತಂಗಡಿ: ಸಂತ ಲಾರೆನ್ಸ್ ದೇವಾಲಯದಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ತೆಂಕಕಾರಂದೂರು: ಅಸೌಖ್ಯದಿಂದ ಚಂದ್ರಾವತಿ ನಿಧನ

Suddi Udaya
error: Content is protected !!