23.8 C
ಪುತ್ತೂರು, ಬೆಳ್ತಂಗಡಿ
May 23, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ತೆಕ್ಕಾರು: ಭಟ್ರಬೈಲು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ದೇವರ ಮೂರ್ತಿಯ ಪುರಪ್ರವೇಶದ ಅದ್ದೂರಿ ಮೆರವಣಿಗೆ

ಬೆಳ್ತಂಗಡಿ: ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ದೇವರ ಮೂರ್ತಿಯ ಪುರಪ್ರವೇಶದ ಮೆರವಣಿಗೆಗೆ ಎ.5 ರಂದು ಬ್ರಹ್ಮಕಲಸ ಸಮಿತಿ ಅಧ್ಯಕ್ಷ ಶಶಿಧರ ಶೆಟ್ಟಿ ಗುರುವಾಯನಕೆರೆ ಬರೋಡ ನಿವಾಸದಲ್ಲಿ ಕಾಶಿ ಶೆಟ್ಟಿ ನವಶಕ್ತಿ ರವರು ಚಾಲನೆ ನೀಡಿದರು.

ಎ.4 ರಂದು ಶುಕ್ರವಾರ ಕಾರ್ಕಳದಿಂದ ಶ್ರೀ ಗೋಪಾಲಕೃಷ್ಣ ದೇವರ ಮೂರ್ತಿಯು ಬ್ರಹ್ಮಕಲಸದ ಸಮಿತಿ ಅಧ್ಯಕ್ಷ ಶಶಿಧರ ಶೆಟ್ಟಿ ಬರೋಡರ ನಿವಾಸಕ್ಕೆ ಬಂದು ಅದೇ ದಿನ ರಾತ್ರಿ ಗಂಟೆ 7 ರಿಂದ ಸಾಂಸ್ಕೃತಿಕ ಕಾರ್ಯಕ್ರಮವು ಜರಗಿತು.

ಸಮೀಪಿಸುತ್ತಿರುವ ಬ್ರಹ್ಮಕಲಶೋತ್ಸವದ ದಿನ:
ತೆಕ್ಕಾರು ಗ್ರಾಮದ ಭಟ್ರಬೈಲು ದೇವರಗುಡ್ಡೆ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಜೀರ್ಣೋದ್ಧಾರ ಕಾರ್ಯ ನಡೆಯುತ್ತಿದ್ದು ಕೆಲವೇ ದಿನಗಳಲ್ಲಿ ಬ್ರಹ್ಮಕಲಶೋತ್ಸವ ನಡೆಯಲಿದೆ. ಕಳೆದ ವರ್ಷದಲ್ಲಿ ಶಿಲಾನ್ಯಾಸ ನೆರವೇರಿ ಇದೀಗ ಜೀರ್ಣೋದ್ಧಾರ ಕಾರ್ಯಗಳು ಭರದಿಂದ ಸಾಗುತ್ತಿದ್ದು ಇನ್ನೇನು ಕೆಲವೇ ದಿನಗಳಲ್ಲಿ ಬ್ರಹ್ಮಕಲಶೋತ್ಸವದ ಗತವೈಭವಕ್ಕೆ ಅಣಿಯಾಗಲಿದೆ.

ಅದ್ದೂರಿ ಮೆರವಣಿಗೆ :
ದೇವರ ಮೂರ್ತಿಯನ್ನು ಅದ್ಧೂರಿ ಮೆರವಣಿಗೆಯ ಮುಖಾಂತರ ಗುರುವಾಯನಕೆರೆ, ಗೇರುಕಟ್ಟೆ, ಕುಪ್ಪೆಟ್ಟಿ, ಕರಾಯ, ಉಪ್ಪಿನಂಗಡಿ, ಮಾರ್ಗವಾಗಿ ಬಂದು ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಪೂಜೆ ಗೈದು , ಪೆದಮಲೆ, ಪಿಲಿಗೂಡು, ಸರಳಿಕಟ್ಟೆ, ಹೊಸಮೊಗ್ರು, ಬಾಜಾರ, ನೆಲ್ಲಿಪಲ್ಕೆಯಾಗಿ ಭಟ್ರಬೈಲು ದೇವರಗುಡ್ಡೆ ಕ್ಷೇತ್ರಕ್ಕೆ ಸಾಗಲಿದೆ. ಊರ ಮಧ್ಯೆ ಭಕ್ತರು ದೇವರ ಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸಿದರು. ಚೆಂಡೆ ವಾದ್ಯ, ಉದ್ಘೋಷದ ಮೂಲಕ ಮೆರವಣಿಗೆ ನಡೆಯಿತು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಬ್ರಹ್ಮಕಲಶೋತ್ಸವದ ಸಮಿತಿ ಅಧ್ಯಕ್ಷ ಶಶಿಧರ ಶೆಟ್ಟಿ ಬರೋಡ ನವಶಕ್ತಿ, ಟ್ರಸ್ಟ್ ಅಧ್ಯಕ್ಷ ನಾಗಭೂಷಣ್ ರಾವ್, ತುಕಾರಾಂ ನಾಯಕ, ಬ್ರಹ್ಮಕಲಶೋತ್ಸವದ ಸಮಿತಿ ಗೌರವಾಧ್ಯಕ್ಷರಾದ ಗಣೇಶ್ ರಾವ್ ಕರವಾಳಿ ಕಾಲೇಜು, ಕರುಣಾಕರ ಸುವರ್ಣ , ಯೋಗೀಂದ್ರ ಭಟ್ ಉಳಿ, ಕಾರ್ಯಾಧ್ಯಕ್ಷ ಲಕ್ಷಣ್, ಪ್ರಧಾನ ಕಾರ್ಯದರ್ಶಿ ಪ್ರವೀಣ್ ರೈ, ಕೋಶಾಧಿಕಾರಿ ಅಣ್ಣು ಪೂಜಾರಿ ,

ಪ್ರಮುಖರಾದ ಮಂಜುನಾಥ್ ಸಾಲ್ಯಾನ್, ರಾಜೇಶ್ ಶೆಟ್ಟಿ ನವಶಕ್ತಿ, ರಕ್ಷಿತ್ ಶೆಟ್ಟಿ ಪಣೆಕ್ಕರ, ರಾಜು ಪ್ರಕಾಶ್ ಶೆಟ್ಟಿ ಮದ್ದಡ್ಕ ಸಹಿತ ಮತ್ತಿತರರು ಹಾಗೂ ವಿವಿಧ ಉಪ ಸಮಿತಿಗಳ ಸಂಚಾಲಕರು ಉಪಸ್ಥಿತರಿದ್ದರು.

Related posts

ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಮತ್ತು ಸೈಕಲ್ ಪ್ಯೂರ್ ಅಗರಬತ್ತಿ ಸಂಸ್ಥೆಯ ಸಹ ಬ್ರಾಂಡಿಂಗ್ ನೂತನವಾಗಿ ತಯಾರಿಸಲಾದ ಅಗರಬತ್ತಿಗಳ ಲೋಕಾರ್ಪಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಗಣಿತ ಪ್ರಯೋಗಾಲಯದ ಮಹತ್ವದ ಕುರಿತು ತರಬೇತಿ ಕಾರ್ಯಾಗಾರ

Suddi Udaya

ಶ್ರೀ ಧ.ಮಂ ಕಾಲೇಜಿನಲ್ಲಿ ವಿದ್ಯಾರ್ಥಿ ಸಮಾಗಮ ವಿಶೇಷ ಕಾರ್ಯಕ್ರಮ

Suddi Udaya

ರಾತ್ರಿ 11 ಗಂಟೆಗೆ ಬೆಂಗಳೂರಿನಿಂದ ಹುಟ್ಟೂರಿನತ್ತ ವಸಂತ ಬಂಗೇರ ಮೃತದೇಹ; ನಾಳೆ ಬೆಳಗ್ಗೆ 4 ಗಂಟೆಗೆ ಬೆಳ್ತಂಗಡಿ ನಿವಾಸಕ್ಕೆ ಪಾರ್ಥೀವ ಶರೀರ ಆಗಮನ

Suddi Udaya

ಉಜಿರೆ ಲಕ್ಷ್ಮಿ ಗ್ರೂಪ್ ಮಾಲಕ ಮೋಹನ್ ಕುಮಾರ್ ರವರಿಂದ ಯೋಗಾಸನ ಸ್ಪರ್ಧೆಗೆ ವಿದ್ಯಾರ್ಥಿಗಳಿಗೆ ಯೂನಿಪಾರ್ಮ್ ವಿತರಣೆ

Suddi Udaya

ಪುಂಜಾಲಕಟ್ಟೆಯಲ್ಲಿ ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ಮತ ಯಾಚನೆ

Suddi Udaya
error: Content is protected !!