September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ಶ್ರೀ ರಾಮಕ್ಷೇತ್ರ ಕನ್ಯಾಡಿಯಲ್ಲಿ ರಾಮ ನಾಮ ತಾರಕ ಮಂತ್ರ ಪಠಣ

ಕನ್ಯಾಡಿ: ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ಶ್ರೀರಾಮ ಕ್ಷೇತ್ರ ಕನ್ಯಾಡಿಯಲ್ಲಿ ನಡೆಯುತ್ತಿರುವ ರಾಮನಾಮ ತಾರಕ ಮಂತ್ರ ಸಪ್ತಾಹ ಕಾರ್ಯಕ್ರಮದ ಅಂಗವಾಗಿ ಎ.02 ರಂದು ಶ್ರೀರಾಮನಾಮ ತಾರಕ ಮಂತ್ರ ಭಜನಾ ಕಾರ್ಯಕ್ರಮ ನಡೆಯಿತು. ಘಟಕದ ವತಿಯಿಂದ ಹೆಚ್ಚಿನ ಸದಸ್ಯರು ಭಾಗವಹಿಸಿದ್ದರು. ಭಜನಾ ಕಾರ್ಯಕ್ರಮದ ನಂತರ ಶ್ರೀ ರಾಮ ಕ್ಷೇತ್ರದ ಪೀಠಾಧಿಪತಿಗಳಾದ 1008 ಮಹಾಮಂಡಲೇಶ್ವರ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದರು.


ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷ ಗುರುರಾಜ್ ಗುರಿಪಳ್ಳ, ಗೌರವ ಸಲಹೆಗಾರರಾದ ರಮಾನಂದ ಸಾಲಿಯಾನ್, ಸಲಹೆಗಾರರಾದ ರಾಜೀವ್ ಸಾಲಿಯಾನ್, ವಸಂತ ಪೂಜಾರಿ, ಘಟಕದ ಉಪಾಧ್ಯಕ್ಷ ಸುನಿಲ್ ಕನ್ಯಾಡಿ, ಕಾರ್ಯದರ್ಶಿ ಮಧುರ ರಾಘವ, ಕೋಶಾಧಿಕಾರಿ ನಾಗೇಶ್ ಅದೇಲು, ಮಹಿಳಾ ಸಂಚಾಲನ ಸಮಿತಿಯ ಪ್ರಧಾನ ಸಂಚಾಲಕರಾದ ಲೀಲಾವತಿ ಪಣಕಜೆ ಹಾಗೂ ಪ್ರಶಾಂತ್ ಪಾರೆಂಕಿ, ರೂಪೇಶ್ ಧರ್ಮಸ್ಥಳ, ಸಚಿನ್ ನೂಜೋಡಿ, ಸುಧಾಮಣಿ ಆರ್, ಶಾಂಭವಿ ಮುಂಡೂರು, ರಜತ್ ಮೋರ್ತಾಜೆ, ಪೂರ್ಣಿಮಾ ಮುಂಡಾಜೆ, ಸೌಮ್ಯ ಲಾಯಿಲಾ, ಯೋಗೀಶ್ ಗೇರುಕಟ್ಟೆ, ಜಯರಾಜ್ ನಡಕ್ಕರ, ಅನಿತಾ ಮಂಡೂರು, ರಿಷಿಕಾ ಮಂಡೂರು, ಸತೀಶ್ ಮುಂಡೂರು ಹಾಗೂ ಘಟಕದ ಸದಸ್ಯರು ಮತ್ತು ಮುಂಡೂರು ಭಜನಾ ತಂಡದ ಸದಸ್ಯರು ಭಾಗವಹಿಸಿದ್ದರು.

Related posts

ಉಜಿರೆ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ಕಬಡ್ಡಿ ಆಟಗಾರ ರಾಷ್ಟ್ರ ಮಟ್ಟದ ಪಂದ್ಯಾಟಕ್ಕೆ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಸೆ.7-11: ಬೆಳ್ತಂಗಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 63ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

Suddi Udaya

ಸಚಿವ ದಿನೇಶ್ ಗುಂಡೂರಾವ್‌ ಅವರ ಟಿಪ್ಪಣಿ ಆಧರಿಸಿ ನಾಳ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಮಂಡಳಿಗೆ ಸದಸ್ಯರನ್ನು ನೇಮಕ ಮಾಡಿರುವುದು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

Suddi Udaya

ರಕ್ತೇಶ್ವರಿ ಪದವು ನಿವೃತ್ತ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ನಾಗವೇಣಿ ಕೆ.ಎಸ್. ರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಉಜಿರೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯಿಂದ ಚರಂಡಿ ದುರಸ್ತಿ

Suddi Udaya
error: Content is protected !!