32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಪ್ರೇರಣಾ ಶಿಬಿರದ ಉದ್ಘಾಟನೆ

ಸುಲ್ಕೇರಿ : ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ , ಸುಲ್ಕೇರಿ ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲೆ , ಸುಲ್ಕೇರಿ ಶ್ರೀರಾಮ ಪ್ರೌಢ ಶಾಲೆ ಸುಲ್ಕೇರಿ ಮಾತೃ ಸಂಸ್ಥೆ: ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು, 2024 -2025 ನೇ ಶೈಕ್ಷಣಿಕ ವರ್ಷದ ” ಪ್ರೇರಣಾ ಶಿಬಿರ ಎ.03 ರಿಂದ ಎ. 07 ರ ತನಕ ನಡೆಯಲಿದ್ದು ಇದರ ಉದ್ಘಾಟನಾ ಕಾರ್ಯಕ್ರಮವು ಎ. 03 ರಂದು ಶ್ರೀರಾಮ ಶಾಲೆ ಸುಲ್ಕೇರಿಯ ಶ್ರೀರಾಮ ಪ್ರಾರ್ಥನಾ ಮಂದಿರದಲ್ಲಿ ನಡೆಯಿತು.

ವಿದ್ಯಾರ್ಥಿಗಳಲ್ಲಿ ಸಕಾರಾತ್ಮಕ ಚಿಂತನೆಯನ್ನು ಬೆಳೆಸಲು , ವ್ಯಕ್ತಿತ್ವ ವಿಕಸನಕ್ಕಾಗಿ, ಭಾರತೀಯ ಸಂಸ್ಕೃತಿಯ ಅರಿವು ಮೂಡಿಸುವ ದೃಷ್ಟಿಯಿಂದ ವಿವಿಧ ವಿಷಯಗಳು ಹಾಗೂ ಚಟುವಟಿಕೆಗಳ ಮೂಲಕ ಪ್ರೇರಣೆ ಸಿಗುವಂತಾಗಲು ಆಯೋಜಿಸಿಕೊಂಡ ಈ ಶಿಬಿರವನ್ನು ಶಾಲಾ ಆಡಳಿತ ಮಂಡಳಿಯ ಗೌರವಾಧ್ಯಕ್ಷ ಗಣೇಶ್ ಹೆಗ್ಡೆ ಉದ್ಘಾಟಿಸಿದರು.

ಅಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ರಾಜು ಪೂಜಾರಿ ವಹಿಸಿಕೊಂಡಿದ್ದರು. ವೇದಿಕೆಯಲ್ಲಿ ಶ್ರೀ ರಾಮ ಪ್ರೌಢ ಶಾಲೆ , ಪಟ್ಟೂರು ಇಲ್ಲಿನ ಮುಖ್ಯ ಗುರುಗಳಾದ ಚಂದ್ರಶೇಖರ ಶೇಠ್ , ಶ್ರೀ ರಾಮ ಪ್ರೌಢಶಾಲೆ ಸುಲ್ಕೇರಿಯ ಮುಖ್ಯಗುರುಗಳಾದ ಪ್ರಮೋದ್ ಕುಮಾರ್ , ಶಿಬಿರ ಸಂಯೋಜಕರಾದ ಸತೀಶ್ ಕುಮಾರ್ ಎನ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ 9 ನೇ ತರಗತಿ ಕು| ಆದ್ಯಾ ಸ್ವಾಗತಿಸಿ , 7ನೇ ತರಗತಿಯ ಕು| ಮನ್ವಿತಾ ಧನ್ಯವಾದವಿತ್ತರು. 9ನೇತರಗತಿಯ ಕು| ದೀಕ್ಷಾ ಕಾರ್ಯಕ್ರಮ ನಿರೂಪಿಸಿದರು.

Related posts

ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ : ರೂ.144ಕೋಟಿ ವ್ಯವಹಾರ, ಸದಸ್ಯರಿಗೆ ಶೇ.11 ಡಿವಿಡೆಂಟ್

Suddi Udaya

ಬೆಳ್ತಂಗಡಿ ಅನುಗ್ರಹ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟು ರೂ.4.75 ಲಕ್ಷ ಸಾಲ ಪಡೆದು ವಂಚನೆ

Suddi Udaya

ಸೌಜನ್ಯ ಕೊಲೆ ಪ್ರಕರಣ : ಮರು ತನಿಖೆಗೆ ಒತ್ತಾಯಿಸಿ ಆ.27: ಅವಿಭಜಿತ ದ.ಕ. ಮತ್ತು ಉಡುಪಿ ಜಿಲ್ಲೆಗಳ ಬಿಜೆಪಿ ಶಾಸಕರುಗಳಿಂದ ಬೆಳ್ತಂಗಡಿಯ ಮಿನಿ ವಿಧಾನಸೌಧದ ಎದುರು ಬೃಹತ್ ಪ್ರತಿಭಟನೆ

Suddi Udaya

ಶಟಲ್ ಬ್ಯಾಡ್ಮಿಂಟನ್: ವಾಣಿ ಆಂ.ಮಾ. ಶಾಲೆಯ ಪ್ರಾಥಮಿಕ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಮೂಡುಕೋಡಿ: ಆಲಡ್ಕ ನಿವಾಸಿ ಜಿನ್ನಪ್ಪ ಪೂಜಾರಿ ನಿಧನ

Suddi Udaya

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಎನ್ ಐ ಎ ತನಿಖೆಯ ಕುರಿತು ರಾಜ್ಯ ಸರ್ಕಾರಕ್ಕೆ ಮನವಿ

Suddi Udaya
error: Content is protected !!