22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಪ್ರೇರಣಾ ಶಿಬಿರದ ಉದ್ಘಾಟನೆ

ಸುಲ್ಕೇರಿ : ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ , ಸುಲ್ಕೇರಿ ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲೆ , ಸುಲ್ಕೇರಿ ಶ್ರೀರಾಮ ಪ್ರೌಢ ಶಾಲೆ ಸುಲ್ಕೇರಿ ಮಾತೃ ಸಂಸ್ಥೆ: ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು, 2024 -2025 ನೇ ಶೈಕ್ಷಣಿಕ ವರ್ಷದ ” ಪ್ರೇರಣಾ ಶಿಬಿರ ಎ.03 ರಿಂದ ಎ. 07 ರ ತನಕ ನಡೆಯಲಿದ್ದು ಇದರ ಉದ್ಘಾಟನಾ ಕಾರ್ಯಕ್ರಮವು ಎ. 03 ರಂದು ಶ್ರೀರಾಮ ಶಾಲೆ ಸುಲ್ಕೇರಿಯ ಶ್ರೀರಾಮ ಪ್ರಾರ್ಥನಾ ಮಂದಿರದಲ್ಲಿ ನಡೆಯಿತು.

ವಿದ್ಯಾರ್ಥಿಗಳಲ್ಲಿ ಸಕಾರಾತ್ಮಕ ಚಿಂತನೆಯನ್ನು ಬೆಳೆಸಲು , ವ್ಯಕ್ತಿತ್ವ ವಿಕಸನಕ್ಕಾಗಿ, ಭಾರತೀಯ ಸಂಸ್ಕೃತಿಯ ಅರಿವು ಮೂಡಿಸುವ ದೃಷ್ಟಿಯಿಂದ ವಿವಿಧ ವಿಷಯಗಳು ಹಾಗೂ ಚಟುವಟಿಕೆಗಳ ಮೂಲಕ ಪ್ರೇರಣೆ ಸಿಗುವಂತಾಗಲು ಆಯೋಜಿಸಿಕೊಂಡ ಈ ಶಿಬಿರವನ್ನು ಶಾಲಾ ಆಡಳಿತ ಮಂಡಳಿಯ ಗೌರವಾಧ್ಯಕ್ಷ ಗಣೇಶ್ ಹೆಗ್ಡೆ ಉದ್ಘಾಟಿಸಿದರು.

ಅಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ರಾಜು ಪೂಜಾರಿ ವಹಿಸಿಕೊಂಡಿದ್ದರು. ವೇದಿಕೆಯಲ್ಲಿ ಶ್ರೀ ರಾಮ ಪ್ರೌಢ ಶಾಲೆ , ಪಟ್ಟೂರು ಇಲ್ಲಿನ ಮುಖ್ಯ ಗುರುಗಳಾದ ಚಂದ್ರಶೇಖರ ಶೇಠ್ , ಶ್ರೀ ರಾಮ ಪ್ರೌಢಶಾಲೆ ಸುಲ್ಕೇರಿಯ ಮುಖ್ಯಗುರುಗಳಾದ ಪ್ರಮೋದ್ ಕುಮಾರ್ , ಶಿಬಿರ ಸಂಯೋಜಕರಾದ ಸತೀಶ್ ಕುಮಾರ್ ಎನ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ 9 ನೇ ತರಗತಿ ಕು| ಆದ್ಯಾ ಸ್ವಾಗತಿಸಿ , 7ನೇ ತರಗತಿಯ ಕು| ಮನ್ವಿತಾ ಧನ್ಯವಾದವಿತ್ತರು. 9ನೇತರಗತಿಯ ಕು| ದೀಕ್ಷಾ ಕಾರ್ಯಕ್ರಮ ನಿರೂಪಿಸಿದರು.

Related posts

ಕಡಿರುದ್ಯಾವರ ಶ್ರೀ ವನದುರ್ಗಾದೇವಿ ದೇವಸ್ಥಾನ ಟ್ರಸ್ಟ್ ವತಿಯಿಂದ ಎಕ್ಸೆಲ್ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಇವರಿಗೆ ಅಭಿನಂದನೆ

Suddi Udaya

ತಣ್ಣೀರುಪಂತ: ಕಲ್ಲೇರಿ ನವಚೇತನ ತೋಟಗಾರಿಕಾ ರೈತ ಉತ್ಪಾದಕರ ಸಂಘದ ವಾರ್ಷಿಕ ಸಾಮಾನ್ಯ ಸಭೆ: ರೂ.2.26 ಕೋಟಿ ವ್ಯವಹಾರ, ರೂ.5.47 ಲಕ್ಷ ಲಾಭ

Suddi Udaya

ಉಜಿರೆ: ಕಾಲಬೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘಕ್ಕೆ ಹಾಸನ ಬಿಜಿಎಸ್ ಸೌಹಾರ್ದ ಸಹಕಾರಿ ಸಂಘದ ಆಡಳಿತ ಮಂಡಳಿ ಸದಸ್ಯರ ಭೇಟಿ

Suddi Udaya

ಕಲಾವಿದರಿಗೆ ಕರೆ ಮಾಡಿ ಅವ್ಯಾಚ ಶಬ್ದಗಳಿಂದ ನಿಂದನೆ: ತಿಮರೋಡಿ ವಿರುದ್ಧ ಪ್ರಕರಣ ದಾಖಲು

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಕಣಿಯೂರು ಗುತ್ತು ಮನೆಗೆ ಭೇಟಿ

Suddi Udaya

ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ನಾಮನಿರ್ದೇಶಿತ ಸದಸ್ಯರಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ, ಅಭಿನಂದನೆ

Suddi Udaya
error: Content is protected !!