April 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಡಾ. ಬಾಬು ಜಗಜೀವನರಾಮ್ ರವರ 118 ನೇ ಜನ್ಮ ದಿನಾಚರಣೆ

ಬೆಳ್ತಂಗಡಿ: ತಾಲೂಕು ಆಡಳಿತ, ತಾಲೂಕು ಪಂಚಾಯತು, ಸಮಾಜ ಕಲ್ಯಾಣ ಇಲಾಖೆ ಹಾಗೂ ಪಟ್ಟಣ ಪಂಚಾಯತು , ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನರಾಮ್ ರವರ 118 ನೇ ಜನ್ಮ ದಿನಾಚರಣೆಯನ್ನು ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ತಹಶೀಲ್ದಾರರು ಪೃಥ್ವಿ ಸಾನಿಕಮ್ ವಹಿಸಿದ್ದರು. ತಾ.ಪಂ ಕಾರ್ಯ ನಿರ್ವಾಹಕ ಅಧಿಕಾರಿಗಳು ಭವಾನಿ ಶಂಕರ್ ಎನ್. ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ತಾರಕೇಸರಿ ಪ್ರಧಾನ ಭಾಷಣವನ್ನು ನೆರವೇರಿಸಿದರು.

ವೇದಿಕೆಯಲ್ಲಿ ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಧನಂಜಯ್ ಎಂ ಎಸ್ , ಬೆಳ್ತಂಗಡಿ ಪಟ್ಟಣ ಪಂಚಾಯತ ಮುಖ್ಯಾಧಿಕಾರಿಗಳು ರಾಜೇಶ್ ಕೆ, ಸರಕಾರಿ ನೌಕರರ ಸಂಘದ ಅಧ್ಯಕ್ಷ ಜಯರಾಜ್ ಜೈನ್ ಉಪಸ್ಥಿತರಿದ್ದರು.

ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂಧಿಗಳು , ಪ.ಜಾತಿ, ಪ.ಪಂಗಡದ ಮುಖಂಡರು ಹಾಗೂ ಪದಾಧಿಕಾರಿಗಳು, ವಿವಿಧ ವಸತಿ ಶಾಲೆಗಳ ಪ್ರಾಂಶುಪಾಲರು ಹಾಗೂ ಶಿಕ್ಷಕರು ಎಲ್ಲಾ ನಿಲಯ ಮೇಲ್ವಿಚಾರಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು. ಶ್ರೀಮತಿ ಹೇಮಲತಾ ಎಂ, ವಾರ್ಡನ್ ಇವರು ಕಾರ್ಯಕ್ರಮ ನಿರ್ವಹಿಸಿದರು. ಮುಂಡಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲರು ಮುರಳಿಧರ ಸ್ವಾಗತಿಸಿ , ಜಯಾನಂದ ತಾಲೂಕು ಪಂಚಾಯತ್ ವಂದಿಸಿದರು.

Related posts

ಕಣಿಯೂರು ವಲಯದ ನೂತನ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

Suddi Udaya

ಶಟಲ್ ಬ್ಯಾಡ್ಮಿಂಟನ್: ವಾಣಿ ಆಂ.ಮಾ. ಶಾಲೆಯ ಪ್ರಾಥಮಿಕ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಗರ್ಡಾಡಿ: ಭೋಜ ಬಂಗೇರ ಕಾಣೇಲು ನಿಧನ

Suddi Udaya

ಡಿ.10: ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಸನ್ ನಿಂದ ಹಿರಿಯ ಛಾಯಾಗ್ರಾಹಕ ಎನ್ ಎ ಗೋಪಾಲ್ ರಿಗೆ ಸನ್ಮಾನ

Suddi Udaya

ಮೊಬೈಲ್ ಹಿಂದಿರುಗಿಸಿಕೊಟ್ಟು ಮಾನವೀಯತೆ ಮೆರೆದ ಬೆಳ್ತಂಗಡಿ ಸಂತೆಕಟ್ಟೆ ಗಣೇಶ್ ಮೆಡಿಕಲ್ ಮಾಲೀಕ

Suddi Udaya
error: Content is protected !!