July 23, 2026
Uncategorized

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕುತ್ಲೂರು ಸರ್ಕಾರಿ ಶಾಲೆಯ ಮಕ್ಕಳನ್ನು ಭೇಟಿ ಮಾಡಿಸಿದ ರಕ್ಷಿತ್ ಶಿವರಾಂ

ನಾರಾವಿ: ಕುತ್ಲೂರು ಸರಕಾರಿ ಶಾಲೆಯ ಮಕ್ಕಳು ಶಾಲೆಯ ಆವರಣದಲ್ಲಿ ತಮ್ಮ ಕಲಿಕೆಯ ಭಾಗವಾಗಿ ಬೆಳೆಸಿದ ಹಣ್ಣು ತರಕಾರಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಿದರು. ಶಾಲೆಯ ವಿದ್ಯಾರ್ಥಿಗಳನ್ನು ಬೆಂಗಳೂರಿನ ಮುಖ್ಯಮಂತ್ರಿಗಳ ಸರ್ಕಾರಿ ನಿವಾಸ ಕಾವೇರಿಯಲ್ಲಿ ಇಂದು ಯುವ ನಾಯಕ ರಕ್ಷಿತ್ ಶಿವರಾಂ ಅವರು ಭೇಟಿ ಮಾಡಿಸಿದರು.

ಮಕ್ಕಳು ಕಲಿಕೆಯ ಜೊತೆ ಕೃಷಿಯ ಬಗ್ಗೆ ಸ್ವಲ್ಪಮಟ್ಟಿಗೆ ಜ್ಞಾನ, ಆಸಕ್ತಿ ಬೆಳೆಸಿಕೊಂಡಿರುವುದು ಭಾರತದಂಥ ಕೃಷಿ ಪ್ರಧಾನ ರಾಷ್ಟ್ರದಲ್ಲಿ ಉತ್ತಮ‌ ಅಭ್ಯಾಸ ಎಂದು ಮುಖ್ಯಮಂತ್ರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು. ಮಕ್ಕಳೊಂದಿಗೆ ತನ್ನ ಬಾಲ್ಯವನ್ನೂ ಕೂಡ ಮೆಲುಕು ಹಾಕಿದ ಸಿದ್ದರಾಮಯ್ಯನವರು, ನಾನೂ ಬಾಲ್ಯದಲ್ಲಿ ಕೃಷಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರಿಂದಲೇ ರಾಜ್ಯದ ರೈತರ ಕಷ್ಟ ಸುಖಗಳನ್ನು ಅರಿಯಲು ಸಾಧ್ಯವಾಗಿದೆ ಎಂದರು. ಮಕ್ಕಳ ಶ್ರಮವನ್ನು ಶ್ಲಾಘಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ,ಮಕ್ಕಳ ಕೃಷಿಕಾರ್ಯಕ್ಕೆ ಬೆಂಬಲವಾಗಿ ನಿಂತ ಶಾಲೆಗೆ ಎರಡು ಕಂಪ್ಯೂಟರ್‌ಗಳನ್ನು ಉಡುಗೊರೆಯಾಗಿ ಕೂಡ ನೀಡಿದರು.

ಮುಖ್ಯಮಂತ್ರಿಗಳ ಭೇಟಿಯ ವೇಳೆ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಯುವ ನಾಯಕ ರಕ್ಷಿತ್ ಶಿವರಾಮ್, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರು ಪದಾಧಿಕಾರಿಗಳು,ಶಾಲಾ ಸಿಬ್ಬಂದಿ ವರ್ಗದವರು, ಹಾಗೂ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ರಾಮಚಂದ್ರ ಭಟ್, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸತೀಶ್ ಕೆ ಕಾಶಿಪಟ್ಟಣ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶೇಖರ್ ಕುಕ್ಕೆಡಿ, ಉದ್ಯಮಿ ಪ್ರವೀಣ್ ಹಳ್ಳಿ ಮನೆ, ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Related posts

ಕೊರಗಕಲ್ಲು ಶ್ರೀ ಸ್ವಾಮಿ ಕೊರಗಜ್ಜ ಸೇವಾ ಟ್ರಸ್ಟ್ ಬಾಡಾರು-ಬಜಿರೆ – ಎ. 2: ಶ್ರೀ ರಾಜ ಗುಳಿಗ ದೈವದ ಪುನರ್‌ಪ್ರತಿಷ್ಠೆ – ಕೊರಗಜ್ಜ, ರಾಜಗುಳಿಗ ಕ್ಷೇತ್ರದ ಮೇಲ್ಚಾವಣಿ ಲೋಕಾರ್ಪಣೆ ಹಾಗೂ ಕೊರಗಜ್ಜ ದೈವದ ನೇಮೋತ್ಸವ

Suddi Udaya

ಎಕ್ಸೆಲ್ ಗುರುವಾಯನಕೆರೆಯಲ್ಲಿ ನರ್ಸರಿ, ಎಲ್ ಕೆಜಿ, ಯುಕೆಜಿ ಹಾಗೂ ಒಂದನೇ ತರಗತಿ ಪ್ರಾರಂಭ

Suddi Udaya

ಪಕ್ಷೇತರ ಅಭ್ಯರ್ಥಿಯಾಗಿ ಸುಬ್ರಹ್ಮಣ್ಯ ಭಟ್ ನಾಮಪತ್ರ ಸಲ್ಲಿಕೆ

Suddi Udaya

ಸೌತಡ್ಕ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಯನ್ನು ರದ್ದುಗೊಳಿಸಿದ ಹೈಕೋರ್ಟ್

Suddi Udaya

ಸುಲ್ಕೇರಿ ಅಂಗನವಾಡಿಯ ಹಳೆ ವಿದ್ಯಾರ್ಥಿನಿಯ ಪೋಷಕರಿಂದ ಸಾವಯವ ತರಕಾರಿ ಗಿಡಗಳ ಹಸ್ತಾಂತರ

Suddi Udaya

5ನೇ ಕರ್ನಾಟಕ ರಾಜ್ಯ ಹಣಕಾಸು ಆಯೋಗದೊಂದಿಗೆ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಶ್ರೇಯೋಭಿವೃದ್ಧಿ ಸಂಘದ ನಿಯೋಗದ ಸಭೆ

Suddi Udaya
error: Content is protected !!