24 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕುತ್ಲೂರು ಸರ್ಕಾರಿ ಶಾಲೆಯ ಮಕ್ಕಳನ್ನು ಭೇಟಿ ಮಾಡಿಸಿದ ರಕ್ಷಿತ್ ಶಿವರಾಂ

ನಾರಾವಿ: ಕುತ್ಲೂರು ಸರಕಾರಿ ಶಾಲೆಯ ಮಕ್ಕಳು ಶಾಲೆಯ ಆವರಣದಲ್ಲಿ ತಮ್ಮ ಕಲಿಕೆಯ ಭಾಗವಾಗಿ ಬೆಳೆಸಿದ ಹಣ್ಣು ತರಕಾರಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಿದರು. ಶಾಲೆಯ ವಿದ್ಯಾರ್ಥಿಗಳನ್ನು ಬೆಂಗಳೂರಿನ ಮುಖ್ಯಮಂತ್ರಿಗಳ ಸರ್ಕಾರಿ ನಿವಾಸ ಕಾವೇರಿಯಲ್ಲಿ ಇಂದು ಯುವ ನಾಯಕ ರಕ್ಷಿತ್ ಶಿವರಾಂ ಅವರು ಭೇಟಿ ಮಾಡಿಸಿದರು.

ಮಕ್ಕಳು ಕಲಿಕೆಯ ಜೊತೆ ಕೃಷಿಯ ಬಗ್ಗೆ ಸ್ವಲ್ಪಮಟ್ಟಿಗೆ ಜ್ಞಾನ, ಆಸಕ್ತಿ ಬೆಳೆಸಿಕೊಂಡಿರುವುದು ಭಾರತದಂಥ ಕೃಷಿ ಪ್ರಧಾನ ರಾಷ್ಟ್ರದಲ್ಲಿ ಉತ್ತಮ‌ ಅಭ್ಯಾಸ ಎಂದು ಮುಖ್ಯಮಂತ್ರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು. ಮಕ್ಕಳೊಂದಿಗೆ ತನ್ನ ಬಾಲ್ಯವನ್ನೂ ಕೂಡ ಮೆಲುಕು ಹಾಕಿದ ಸಿದ್ದರಾಮಯ್ಯನವರು, ನಾನೂ ಬಾಲ್ಯದಲ್ಲಿ ಕೃಷಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರಿಂದಲೇ ರಾಜ್ಯದ ರೈತರ ಕಷ್ಟ ಸುಖಗಳನ್ನು ಅರಿಯಲು ಸಾಧ್ಯವಾಗಿದೆ ಎಂದರು. ಮಕ್ಕಳ ಶ್ರಮವನ್ನು ಶ್ಲಾಘಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ,ಮಕ್ಕಳ ಕೃಷಿಕಾರ್ಯಕ್ಕೆ ಬೆಂಬಲವಾಗಿ ನಿಂತ ಶಾಲೆಗೆ ಎರಡು ಕಂಪ್ಯೂಟರ್‌ಗಳನ್ನು ಉಡುಗೊರೆಯಾಗಿ ಕೂಡ ನೀಡಿದರು.

ಮುಖ್ಯಮಂತ್ರಿಗಳ ಭೇಟಿಯ ವೇಳೆ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಯುವ ನಾಯಕ ರಕ್ಷಿತ್ ಶಿವರಾಮ್, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರು ಪದಾಧಿಕಾರಿಗಳು,ಶಾಲಾ ಸಿಬ್ಬಂದಿ ವರ್ಗದವರು, ಹಾಗೂ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ರಾಮಚಂದ್ರ ಭಟ್, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸತೀಶ್ ಕೆ ಕಾಶಿಪಟ್ಟಣ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶೇಖರ್ ಕುಕ್ಕೆಡಿ, ಉದ್ಯಮಿ ಪ್ರವೀಣ್ ಹಳ್ಳಿ ಮನೆ, ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Related posts

ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ಗೆ ಟಯರ್ ಅಳವಡಿಕೆ: ಸುದ್ದಿ ಉದಯ ವರದಿ ಫಲಶ್ರುತಿ

Suddi Udaya

ಮದ್ದಡ್ಕ ಹೇಮಂತ್ ಶೆಣೈ ನೇಣು ಬಿಗಿದು ಆತ್ಮಹತ್ಯೆ

Suddi Udaya

ಸಂಪೂರ್ಣ ಹಾಳಾದ ಧರ್ಮಸ್ಥಳ-ಮುಳಿಕ್ಕಾರು ರಸ್ತೆ: ಶಾಲಾ ಮಕ್ಕಳು ಸಂಚರಿಸಲು ಪರದಾಡುವ ಸ್ಥಿತಿ ನಿರ್ಮಾಣ, ಅಲ್ಲಲ್ಲಿ ಹೂತು ಹೋಗುವ ವಾಹನಗಳು

Suddi Udaya

ಉಜಿರೆಯಲ್ಲಿ ಗುರುಪೂರ್ಣಿಮಾ ಮಹೋತ್ಸವ ಸಂಪನ್ನ

Suddi Udaya

ಮಡಂತ್ಯಾರು ವಲಯದ ಮಚ್ಚಿನ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಕಣಿಯೂರು ಗ್ರಾಪಂ.ವ್ಯಾಪ್ತಿಯಲ್ಲಿ ಉಚಿತರೇಬಿಸ್ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya
error: Content is protected !!